<p>ಬೆಂಗಳೂರು: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಲನಚಿತ್ರ ಖ್ಯಾತ ಛಾಯಾಗ್ರಹಕ ಸುಂದರನಾಥ ಸುವರ್ಣ(60) ಮಂಗಳವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ಕನ್ನಡ ಚಿತ್ರರಂಗದಲ್ಲಿ ಸುವರ್ಣ ಅವರ ಛಾಯಾಗ್ರಹಣ ಮತ್ತು ಅದರ ಕಲಾತ್ಮಕತೆ, ವೃತ್ತಿಪರತೆಗೆ ಪರ್ಯಾಯ ಇನ್ನೊಬ್ಬರಿಲ್ಲ. ಚಿತ್ರ ನಿರ್ದೇಶಕರ ಚಿಂತನೆಯನ್ನು ಕ್ಯಾಮೆರಾ ಮೂಲಕ ದೃಶ್ಯರೂಪಕ್ಕಿಳಿಸುವ ಅವರ ಕೌಶಲ್ಯ ಬೆರಗುಮೂಡಿಸುವಂತಹುದು.<br /> <br /> ಆಕಸ್ಮಿಕವಾಗಿ ಕೈಗೆ ಸಿಕ್ಕಿದ ಕ್ಯಾಮೆರಾದ ಮೇಲೆ ಆಸಕ್ತಿ ಬೆಳೆಸಿಕೊಂಡು ಸ್ವಂತ ಪರಿಶ್ರಮದಿಂದಲೇ ಸ್ಥಿರ ಚಿತ್ರಗಳನ್ನು ತೆಗೆಯಲಾರಂಭಿಸಿದವರು ಸುವರ್ಣ. ಮುಂದೆ, `ಅಗ್ನಿಪರ್ವ~, `ಕಿಲಾಡಿ ತಾತ~, `ನೀ ನನ್ನ ದೈವ~ ಚಿತ್ರಗಳ ಮೂಲಕ ನಿರ್ದೇಶಕರಾಗಿಯೂ ತಮ್ಮ ಛಾಪು ಒತ್ತಿದರು. ಕೆಲ ಚಿತ್ರಗಳನ್ನೂ ನಿರ್ಮಿಸಿದರು. `ನಮ್ಮೂರ ಮಂದಾರ ಹೂವೆ~, `ರಾಜಕೀಯ~ ಚಿತ್ರಗಳಲ್ಲಿನ ಅವರ ಛಾಯಾಗ್ರಹಣ ಚಿತ್ರ ಅಭಿಮಾನಿಗಳಿಗೆ ಅವಿಸ್ಮರಣೀಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಲನಚಿತ್ರ ಖ್ಯಾತ ಛಾಯಾಗ್ರಹಕ ಸುಂದರನಾಥ ಸುವರ್ಣ(60) ಮಂಗಳವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ಕನ್ನಡ ಚಿತ್ರರಂಗದಲ್ಲಿ ಸುವರ್ಣ ಅವರ ಛಾಯಾಗ್ರಹಣ ಮತ್ತು ಅದರ ಕಲಾತ್ಮಕತೆ, ವೃತ್ತಿಪರತೆಗೆ ಪರ್ಯಾಯ ಇನ್ನೊಬ್ಬರಿಲ್ಲ. ಚಿತ್ರ ನಿರ್ದೇಶಕರ ಚಿಂತನೆಯನ್ನು ಕ್ಯಾಮೆರಾ ಮೂಲಕ ದೃಶ್ಯರೂಪಕ್ಕಿಳಿಸುವ ಅವರ ಕೌಶಲ್ಯ ಬೆರಗುಮೂಡಿಸುವಂತಹುದು.<br /> <br /> ಆಕಸ್ಮಿಕವಾಗಿ ಕೈಗೆ ಸಿಕ್ಕಿದ ಕ್ಯಾಮೆರಾದ ಮೇಲೆ ಆಸಕ್ತಿ ಬೆಳೆಸಿಕೊಂಡು ಸ್ವಂತ ಪರಿಶ್ರಮದಿಂದಲೇ ಸ್ಥಿರ ಚಿತ್ರಗಳನ್ನು ತೆಗೆಯಲಾರಂಭಿಸಿದವರು ಸುವರ್ಣ. ಮುಂದೆ, `ಅಗ್ನಿಪರ್ವ~, `ಕಿಲಾಡಿ ತಾತ~, `ನೀ ನನ್ನ ದೈವ~ ಚಿತ್ರಗಳ ಮೂಲಕ ನಿರ್ದೇಶಕರಾಗಿಯೂ ತಮ್ಮ ಛಾಪು ಒತ್ತಿದರು. ಕೆಲ ಚಿತ್ರಗಳನ್ನೂ ನಿರ್ಮಿಸಿದರು. `ನಮ್ಮೂರ ಮಂದಾರ ಹೂವೆ~, `ರಾಜಕೀಯ~ ಚಿತ್ರಗಳಲ್ಲಿನ ಅವರ ಛಾಯಾಗ್ರಹಣ ಚಿತ್ರ ಅಭಿಮಾನಿಗಳಿಗೆ ಅವಿಸ್ಮರಣೀಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>