<p><strong>ಬೆಂಗಳೂರು: </strong>ಜಾಹೀರಾತು ಹಾಗೂ ಪ್ರಚಾರ ನಿರ್ದೇಶನಾಲಯವು ಬಿಬಿಎಂಪಿ ಸಹಯೋಗದಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ರಂಗೋಲಿ ಮೆಟ್ರೊ ಕಲಾ ಕೇಂದ್ರದ ಛಾಯಾ ಗ್ಯಾಲರಿಯಲ್ಲಿ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಿದೆ.<br /> <br /> ಬಿಬಿಎಂಪಿ ವಿಶೇಷ ಆಯುಕ್ತ (ಚುನಾವಣೆ) ಕೆ.ಆರ್.ನಿರಂಜನ್ ಅವರು ಭಾನುವಾರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ‘ಪ್ರದರ್ಶನದಲ್ಲಿರುವ ಛಾಯಾಚಿತ್ರಗಳು ಯುವಕರನ್ನು ಆಕರ್ಷಿಸುವ ರೀತಿಯಲ್ಲಿವೆ. ಇದರಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.<br /> <br /> ಜಾಹೀರಾತು ಹಾಗೂ ಪ್ರಚಾರ ನಿರ್ದೇಶನಾಲಯದ ಕ್ಷೇತ್ರ ಪ್ರಚಾರ ಅಧಿಕಾರಿ ಪಿ.ಜಿ.ಪಾಟೀಲ್ ಮಾತ ನಾಡಿ, ಪ್ರದರ್ಶನದ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದರು.<br /> ಮಾರ್ಚ್ 26ರವರೆಗೆ ಪ್ರದರ್ಶನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜಾಹೀರಾತು ಹಾಗೂ ಪ್ರಚಾರ ನಿರ್ದೇಶನಾಲಯವು ಬಿಬಿಎಂಪಿ ಸಹಯೋಗದಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ರಂಗೋಲಿ ಮೆಟ್ರೊ ಕಲಾ ಕೇಂದ್ರದ ಛಾಯಾ ಗ್ಯಾಲರಿಯಲ್ಲಿ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಿದೆ.<br /> <br /> ಬಿಬಿಎಂಪಿ ವಿಶೇಷ ಆಯುಕ್ತ (ಚುನಾವಣೆ) ಕೆ.ಆರ್.ನಿರಂಜನ್ ಅವರು ಭಾನುವಾರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ‘ಪ್ರದರ್ಶನದಲ್ಲಿರುವ ಛಾಯಾಚಿತ್ರಗಳು ಯುವಕರನ್ನು ಆಕರ್ಷಿಸುವ ರೀತಿಯಲ್ಲಿವೆ. ಇದರಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.<br /> <br /> ಜಾಹೀರಾತು ಹಾಗೂ ಪ್ರಚಾರ ನಿರ್ದೇಶನಾಲಯದ ಕ್ಷೇತ್ರ ಪ್ರಚಾರ ಅಧಿಕಾರಿ ಪಿ.ಜಿ.ಪಾಟೀಲ್ ಮಾತ ನಾಡಿ, ಪ್ರದರ್ಶನದ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದರು.<br /> ಮಾರ್ಚ್ 26ರವರೆಗೆ ಪ್ರದರ್ಶನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>