<p><strong>ಬೆಂಗಳೂರು: </strong>‘ಮೈಸೂರಿನಲ್ಲಿ ನಡೆಯಲಿರುವ 83ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಏನು ಮಾತನಾಡುತ್ತೀರಿ ಎಂದು ಎಲ್ಲರೂ ಕೇಳುತ್ತಿದ್ದಾರೆ. ಅಲ್ಲಿ ಜನರ ಧ್ವನಿಯಾಗಿ ಮಾತನಾಡುತ್ತೇನೆ’ ಎಂದು ಸಾಹಿತಿ ಚಂದ್ರಶೇಖರ ಪಾಟೀಲ ಹೇಳಿದರು.</p>.<p>ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆಯು ನಗರದಲ್ಲಿ ಗುರುವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಂದೇಶ ಕೊಡುವವರು ಪ್ರವಾದಿ. ಸಮ್ಮೇಳನದಲ್ಲಿ ಸಂದೇಶ ಕೊಡುವುದಷ್ಟೇ ಸಮ್ಮೇಳನಾಧ್ಯಕ್ಷರ ಕೆಲಸವಲ್ಲ. ಸಮಕಾಲಿನ ಕಾಲಘಟ್ಟದಲ್ಲಿ ಎದುರುಗುತ್ತಿರುವ ಸಮಸ್ಯೆಗಳನ್ನು ಅರ್ಥೈಸಿಕೊಂಡು ಸಂವಿಧಾನ ಚೌಕಟ್ಟಿನಲ್ಲಿ ಅವುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>'ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಬರಹದ ಮೂಲಕ ಬರಹಗಾರರು ಮಾತನಾಡಬೇಕಿದೆ. ಕನ್ನಡ ಎಂಬ ಮೂರಕ್ಷರಗಳಲ್ಲಿ ನಾಡಿನ ಜನರ ಬದುಕು ಅಡಕವಾಗಿದೆ. ಆದ್ಯತೆಗಳ ಮೇರೆಗೆ ಪಟ್ಟಿ ಮಾಡಿಕೊಂಡು ಸಮಸ್ಯೆಗಳ ವಿರುದ್ಧ ಹೋರಾಡಬೇಕಿದೆ. ಜನಾಂದೋಲನ ಮಾಡದ ಹೊರತು ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ತಿಳಿಸಿದರು.</p>.<p>ಸಾಹಿತಿ ಜರಗನಹಳ್ಳಿ ಶಿವಶಂಕರ್, ‘80–90ರ ದಶಕದಲ್ಲಿ ಮಹಾನ್ ದಿಗ್ಗಜರು ಕನ್ನಡ ಸಾಹಿತ್ಯ ಲೋಕದಲ್ಲಿದ್ದರು. ದಿಗ್ಗಜರ ಪಡೆಯನ್ನು ಕಳೆದುಕೊಂಡ ಸಾಹಿತ್ಯವು ಇಂದು ಶೂನ್ಯಾವಸ್ಥೆಯಲ್ಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮೈಸೂರಿನಲ್ಲಿ ನಡೆಯಲಿರುವ 83ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಏನು ಮಾತನಾಡುತ್ತೀರಿ ಎಂದು ಎಲ್ಲರೂ ಕೇಳುತ್ತಿದ್ದಾರೆ. ಅಲ್ಲಿ ಜನರ ಧ್ವನಿಯಾಗಿ ಮಾತನಾಡುತ್ತೇನೆ’ ಎಂದು ಸಾಹಿತಿ ಚಂದ್ರಶೇಖರ ಪಾಟೀಲ ಹೇಳಿದರು.</p>.<p>ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆಯು ನಗರದಲ್ಲಿ ಗುರುವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಂದೇಶ ಕೊಡುವವರು ಪ್ರವಾದಿ. ಸಮ್ಮೇಳನದಲ್ಲಿ ಸಂದೇಶ ಕೊಡುವುದಷ್ಟೇ ಸಮ್ಮೇಳನಾಧ್ಯಕ್ಷರ ಕೆಲಸವಲ್ಲ. ಸಮಕಾಲಿನ ಕಾಲಘಟ್ಟದಲ್ಲಿ ಎದುರುಗುತ್ತಿರುವ ಸಮಸ್ಯೆಗಳನ್ನು ಅರ್ಥೈಸಿಕೊಂಡು ಸಂವಿಧಾನ ಚೌಕಟ್ಟಿನಲ್ಲಿ ಅವುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>'ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಬರಹದ ಮೂಲಕ ಬರಹಗಾರರು ಮಾತನಾಡಬೇಕಿದೆ. ಕನ್ನಡ ಎಂಬ ಮೂರಕ್ಷರಗಳಲ್ಲಿ ನಾಡಿನ ಜನರ ಬದುಕು ಅಡಕವಾಗಿದೆ. ಆದ್ಯತೆಗಳ ಮೇರೆಗೆ ಪಟ್ಟಿ ಮಾಡಿಕೊಂಡು ಸಮಸ್ಯೆಗಳ ವಿರುದ್ಧ ಹೋರಾಡಬೇಕಿದೆ. ಜನಾಂದೋಲನ ಮಾಡದ ಹೊರತು ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ತಿಳಿಸಿದರು.</p>.<p>ಸಾಹಿತಿ ಜರಗನಹಳ್ಳಿ ಶಿವಶಂಕರ್, ‘80–90ರ ದಶಕದಲ್ಲಿ ಮಹಾನ್ ದಿಗ್ಗಜರು ಕನ್ನಡ ಸಾಹಿತ್ಯ ಲೋಕದಲ್ಲಿದ್ದರು. ದಿಗ್ಗಜರ ಪಡೆಯನ್ನು ಕಳೆದುಕೊಂಡ ಸಾಹಿತ್ಯವು ಇಂದು ಶೂನ್ಯಾವಸ್ಥೆಯಲ್ಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>