ನೂರು ಸಿ.ಸಿಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರವಾಹನಗಳು ಅಪಘಾತವಾದಾಗ ಹಿಂಬದಿ ಸವಾರರು ಮೃತಪಟ್ಟಿರುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಕಾರಣಕ್ಕಾಗಿ ಕರ್ನಾಟಕ ಮೋಟಾರು ವಾಹನ ನಿಯಮ 143(3) ಪ್ರಕಾರ ಕ್ರಮ ಕೈಗೊಂಡು, ಹಿಂಬದಿ ಸವಾರಿ ನಿಷೇಧಿಸುವಂತೆ ಹೈಕೋರ್ಟ್ ಆದೇಶಿಸಿತ್ತು. ಸಾರ್ವಜನಿಕರ ಹಿತದೃಷ್ಟಿಯಿಂದ ಇದು ಸೂಕ್ತ ಕ್ರಮ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಚರ್ಚೆ ನಡೆದು, ನಿಷೇಧ ತೆರವು ಮಾಡಬೇಕು ಎಂಬ ಬೇಡಿಕೆ ವ್ಯಕ್ತವಾದರೆ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದೂ ಅವರು ಹೇಳಿದರು.