<p><strong>ಬೆಂಗಳೂರು:</strong> `ಸಾರ್ವಜನಿಕರು ಹಾಗೂ ದೂರು ನೀಡಲು ಬರುವವರೊಂದಿಗೆ ಪೊಲೀಸರು ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿ ಸದ್ಯದಲ್ಲೇ ರಾಜ್ಯದ ಎಲ್ಲ ಠಾಣೆಗಳಿಗೆ ಸುತ್ತೋಲೆ ಹೊರಡಿಸಲಾಗುವುದು~ ಎಂದು ಗೃಹ ಸಚಿವ ಆರ್. ಅಶೋಕ ಹೇಳಿದರು.<br /> <br /> ವಕೀಲರ ಸಂಘವು ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಲಯಗಳ ಆದೇಶಗಳನ್ನು ಜಾರಿಗೊಳಿಸುವಲ್ಲಿ ವಕೀಲರು ಹಾಗೂ ಪೊಲೀಸರ ಪಾತ್ರ ಮತ್ತು ನ್ಯಾಯಾಲಯಗಳಿಗೆ ಭದ್ರತೆ ವಿಷಯ ಕುರಿತು ವಕೀಲರ ಅಹವಾಲು ಆಲಿಸಿದ ಬಳಿಕ ಅವರು ಮಾತನಾಡಿದರು.<br /> <br /> `ಪೊಲೀಸ್ ಠಾಣೆಗೆ ಬಂದವರನ್ನು ಅಗೌರವದಿಂದ ಕಾಣುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಕಾನೂನು ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸದಿರುವ ಘಟನೆಗಳು ನನ್ನ ಗಮನಕ್ಕೆ ಬಂದಿವೆ. ರಾಜ್ಯದಾದ್ಯಂತ ಹಲವು ಠಾಣೆಗಳಲ್ಲಿ ಇದೇ ಸ್ಥಿತಿಯಿದ್ದು, ಇದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು~ ಎಂದರು.<br /> <br /> `ಠಾಣೆಗಳಲ್ಲಿ ಭಯದ ವಾತಾವರಣವನ್ನು ಹೋಗಲಾಡಿಸಬೇಕು. ಸಾರ್ವಜನಿಕರನ್ನು ವಿಶ್ವಾಸದಿಂದ ಕಾಣಬೇಕು. ಕಾನೂನು- ಸುವ್ಯವಸ್ಥೆ ಪಾಲನೆಗೆ ಕ್ರಮ ಕೈಗೊಳ್ಳಬೇಕು. ಜನಸ್ನೇಹಿ ಎನಿಸುವ ರೀತಿಯಲ್ಲಿ ವರ್ತಿಸಬೇಕು ಎಂದು ಈ ಹಿಂದೆಯೇ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಆದರೂ ಕೆಲವರ ಕೆಟ್ಟ ವರ್ತನೆಯಿಂದಾಗ ಇಡೀ ಇಲಾಖೆಗೆ ಕಳಂಕ ಬರುತ್ತಿದೆ~ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> `ರಾಜ್ಯದಲ್ಲಿ ಲಕ್ಷ ಮಂದಿ ಪೊಲೀಸರಿದ್ದಾರೆ. ಏಕಾಏಕಿ ಅವರ ವರ್ತನೆಯನ್ನು ಬದಲಾಯಿಸುವುದು ಸಾಧ್ಯವಿಲ್ಲ. ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ಸುಲಭವಲ್ಲ. ಅಲ್ಪಸ್ವಲ್ಪ ಬದಲಾವಣೆಗಳು ಭಾರಿ ಪರಿಣಾಮ ಬೀರುತ್ತವೆ. ಹಾಗಿದ್ದರೂ ಸುಧಾರಣೆ ತರಲಾಗುತ್ತಿದೆ~ ಎಂದರು.<br /> <br /> `ಸಿವಿಲ್ ನ್ಯಾಯಾಲಯಕ್ಕೂ ಅಗತ್ಯ ಭದ್ರತೆ ಕಲ್ಪಿಸುವ ಕುರಿತು ಸಂಬಂಧಪಟ್ಟವರೊಂದಿಗೆ ಚರ್ಚಿಲಾಗುವುದು. ನ್ಯಾಯಾಲಯಕ್ಕೆ ಕರ್ತವ್ಯದ ಮೇಲೆ ಹಾಜರಾಗುವ ಕಾನ್ಸ್ಟೇಬಲ್ಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸುವಂತೆ ಸೂಚಿಸಲಾಗುವುದು. ನ್ಯಾಯಾಲಯಕ್ಕೆ ನಿಯೋಜಿಸುವ ಸಿಬ್ಬಂದಿಯನ್ನು ಪ್ರತಿವರ್ಷ ಬದಲಾಯಿಸಲು ಚಿಂತಿಸಲಾಗುವುದು~ ಎಂದು ಭರವಸೆ ನೀಡಿದರು.<br /> <br /> ಸಚಿವ ಎಸ್. ಸುರೇಶ್ಕುಮಾರ್, `ಠಾಣೆಗೆ ಹೋಗುವ ವಕೀಲರಿಗೆ ಮಾತ್ರವಲ್ಲ, ಸಾಮಾನ್ಯ ಜನರಿಗೂ ಅಗೌರವ ಉಂಟಾಗದಂತೆ ನೋಡಿಕೊಳ್ಳಬೇಕಾದ್ದು ಸರ್ಕಾರದ ಕರ್ತವ್ಯ. ಹಾಗಾಗಿ ಪೊಲೀಸರು ತಮ್ಮ ಮನೋಭಾವ ಬದಲಾಯಿಸಿಕೊಳ್ಳಬೇಕು. ವಕೀಲರು ಸಹ ತಮ್ಮ ವರ್ತನೆ ಬಗ್ಗೆ ಅವಲೋಕನ ಮಾಡಿಕೊಂಡರೆ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ~ ಎಂದು ಅಭಿಪ್ರಾಯಪಟ್ಟರು.<br /> <br /> `ನ್ಯಾಯಾಲಯಗಳಿಗೆ ಭದ್ರತೆ ಕಲ್ಪಿಸುವ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಹಾಗೆಯೇ ವಕೀಲರೊಂದಿಗೆ ಪೊಲೀಸರು ಅಸಭ್ಯವಾಗಿ ವರ್ತಿಸುವ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು~ ಎಂದು ಹೇಳಿದರು.<br /> <br /> ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ, `ನಾಗರಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಅವಾಚ್ಯ ಶಬ್ದ ಬಳಸಬಾರದು, ಅನಗತ್ಯವಾಗಿ ಕಿರುಕುಳ ನೀಡಬಾರದು. ಅಗತ್ಯಕ್ಕಿಂತ ಹೆಚ್ಚು ಮಾತನಾಡದಂತೆಯೂ ಸೂಚನೆ ನೀಡಲಾಗಿದೆ. ಇಲಾಖೆಯಲ್ಲೂ ಕೆಲ ಭ್ರಷ್ಟರಿದ್ದು, ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು~ ಎಂದರು.<br /> <br /> ಇದಕ್ಕೂ ಮೊದಲು ಸಂಘದ ಅಧ್ಯಕ್ಷ ಕೆ.ಎನ್. ಪುಟ್ಟೇಗೌಡ, `ಇನ್ಸ್ಪೆಕ್ಟರ್, ಎಸ್.ಐ, ಕಾನ್ಸ್ಟೇಬಲ್ಗಳು ವಕೀಲರೊಂದಿಗೆ ಅಸಭ್ಯವಾಗಿ ವರ್ತಿಸುವುದು, ಅವಹೇಳನಕಾರಿಯಾಗಿ ನಿಂದಿಸುವ ಪ್ರಸಂಗಗಳು ಸಂಭವಿಸುತ್ತಲೇ ಇವೆ. ಇದರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.<br /> <br /> ನ್ಯಾಯಾಲಯ, ಕಕ್ಷಿದಾರ, ವಕೀಲರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಪೊಲೀಸರಿಗೆ ಸೂಕ್ತ ಮಾಹಿತಿ ನೀಡಬೇಕು. ನಿತ್ಯ ಸುಮಾರು 8,000 ವಕೀಲರು ಹಾಗೂ 25,000ಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ಸಿವಿಲ್ ನ್ಯಾಯಾಲಯಕ್ಕೆ ಹೆಚ್ಚಿನ ಭದ್ರತೆ ಒದಗಿಸಬೇಕು~ ಎಂದು ಕೋರಿದರು.<br /> <br /> ಸಂಘದ ಪ್ರಧಾನ ಕಾರ್ಯದರ್ಶಿ ಆರ್. ರಾಜಣ್ಣ, ಖಜಾಂಚಿ ಟಿ.ಜಿ. ರವಿ, ನಗರ ವಿಭಾಗದ ಉಪಾಧ್ಯಕ್ಷೆ ಬಿ.ಜೆ.ಜಿ. ಸತ್ಯಶ್ರೀ, ಜಂಟಿ ಕಾರ್ಯದರ್ಶಿ ವಿ.ಮಂಜುನಾಥ್ ಉಪಸ್ಥಿತರಿದ್ದರು.<br /> <br /> <strong>13,000 ಕಾನ್ಸ್ಟೇಬಲ್ ನೇಮಕ</strong><br /> `ಹೊಸದಾಗಿ 13,000 ಪೊಲೀಸ್ ಕಾನ್ಸ್ಟೇಬಲ್ಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ~ ಎಂದು ಗೃಹ ಸಚಿವ ಆರ್. ಅಶೋಕ ಹೇಳಿದರು. `ಪೊಲೀಸ್ ಇಲಾಖೆಗೆ ಅಗತ್ಯವಾಗಿರುವ 13,000 ಕಾನ್ಸ್ಟೇಬಲ್ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಸಾರ್ವಜನಿಕರು ಹಾಗೂ ದೂರು ನೀಡಲು ಬರುವವರೊಂದಿಗೆ ಪೊಲೀಸರು ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿ ಸದ್ಯದಲ್ಲೇ ರಾಜ್ಯದ ಎಲ್ಲ ಠಾಣೆಗಳಿಗೆ ಸುತ್ತೋಲೆ ಹೊರಡಿಸಲಾಗುವುದು~ ಎಂದು ಗೃಹ ಸಚಿವ ಆರ್. ಅಶೋಕ ಹೇಳಿದರು.<br /> <br /> ವಕೀಲರ ಸಂಘವು ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಲಯಗಳ ಆದೇಶಗಳನ್ನು ಜಾರಿಗೊಳಿಸುವಲ್ಲಿ ವಕೀಲರು ಹಾಗೂ ಪೊಲೀಸರ ಪಾತ್ರ ಮತ್ತು ನ್ಯಾಯಾಲಯಗಳಿಗೆ ಭದ್ರತೆ ವಿಷಯ ಕುರಿತು ವಕೀಲರ ಅಹವಾಲು ಆಲಿಸಿದ ಬಳಿಕ ಅವರು ಮಾತನಾಡಿದರು.<br /> <br /> `ಪೊಲೀಸ್ ಠಾಣೆಗೆ ಬಂದವರನ್ನು ಅಗೌರವದಿಂದ ಕಾಣುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಕಾನೂನು ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸದಿರುವ ಘಟನೆಗಳು ನನ್ನ ಗಮನಕ್ಕೆ ಬಂದಿವೆ. ರಾಜ್ಯದಾದ್ಯಂತ ಹಲವು ಠಾಣೆಗಳಲ್ಲಿ ಇದೇ ಸ್ಥಿತಿಯಿದ್ದು, ಇದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು~ ಎಂದರು.<br /> <br /> `ಠಾಣೆಗಳಲ್ಲಿ ಭಯದ ವಾತಾವರಣವನ್ನು ಹೋಗಲಾಡಿಸಬೇಕು. ಸಾರ್ವಜನಿಕರನ್ನು ವಿಶ್ವಾಸದಿಂದ ಕಾಣಬೇಕು. ಕಾನೂನು- ಸುವ್ಯವಸ್ಥೆ ಪಾಲನೆಗೆ ಕ್ರಮ ಕೈಗೊಳ್ಳಬೇಕು. ಜನಸ್ನೇಹಿ ಎನಿಸುವ ರೀತಿಯಲ್ಲಿ ವರ್ತಿಸಬೇಕು ಎಂದು ಈ ಹಿಂದೆಯೇ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಆದರೂ ಕೆಲವರ ಕೆಟ್ಟ ವರ್ತನೆಯಿಂದಾಗ ಇಡೀ ಇಲಾಖೆಗೆ ಕಳಂಕ ಬರುತ್ತಿದೆ~ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> `ರಾಜ್ಯದಲ್ಲಿ ಲಕ್ಷ ಮಂದಿ ಪೊಲೀಸರಿದ್ದಾರೆ. ಏಕಾಏಕಿ ಅವರ ವರ್ತನೆಯನ್ನು ಬದಲಾಯಿಸುವುದು ಸಾಧ್ಯವಿಲ್ಲ. ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ಸುಲಭವಲ್ಲ. ಅಲ್ಪಸ್ವಲ್ಪ ಬದಲಾವಣೆಗಳು ಭಾರಿ ಪರಿಣಾಮ ಬೀರುತ್ತವೆ. ಹಾಗಿದ್ದರೂ ಸುಧಾರಣೆ ತರಲಾಗುತ್ತಿದೆ~ ಎಂದರು.<br /> <br /> `ಸಿವಿಲ್ ನ್ಯಾಯಾಲಯಕ್ಕೂ ಅಗತ್ಯ ಭದ್ರತೆ ಕಲ್ಪಿಸುವ ಕುರಿತು ಸಂಬಂಧಪಟ್ಟವರೊಂದಿಗೆ ಚರ್ಚಿಲಾಗುವುದು. ನ್ಯಾಯಾಲಯಕ್ಕೆ ಕರ್ತವ್ಯದ ಮೇಲೆ ಹಾಜರಾಗುವ ಕಾನ್ಸ್ಟೇಬಲ್ಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸುವಂತೆ ಸೂಚಿಸಲಾಗುವುದು. ನ್ಯಾಯಾಲಯಕ್ಕೆ ನಿಯೋಜಿಸುವ ಸಿಬ್ಬಂದಿಯನ್ನು ಪ್ರತಿವರ್ಷ ಬದಲಾಯಿಸಲು ಚಿಂತಿಸಲಾಗುವುದು~ ಎಂದು ಭರವಸೆ ನೀಡಿದರು.<br /> <br /> ಸಚಿವ ಎಸ್. ಸುರೇಶ್ಕುಮಾರ್, `ಠಾಣೆಗೆ ಹೋಗುವ ವಕೀಲರಿಗೆ ಮಾತ್ರವಲ್ಲ, ಸಾಮಾನ್ಯ ಜನರಿಗೂ ಅಗೌರವ ಉಂಟಾಗದಂತೆ ನೋಡಿಕೊಳ್ಳಬೇಕಾದ್ದು ಸರ್ಕಾರದ ಕರ್ತವ್ಯ. ಹಾಗಾಗಿ ಪೊಲೀಸರು ತಮ್ಮ ಮನೋಭಾವ ಬದಲಾಯಿಸಿಕೊಳ್ಳಬೇಕು. ವಕೀಲರು ಸಹ ತಮ್ಮ ವರ್ತನೆ ಬಗ್ಗೆ ಅವಲೋಕನ ಮಾಡಿಕೊಂಡರೆ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ~ ಎಂದು ಅಭಿಪ್ರಾಯಪಟ್ಟರು.<br /> <br /> `ನ್ಯಾಯಾಲಯಗಳಿಗೆ ಭದ್ರತೆ ಕಲ್ಪಿಸುವ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಹಾಗೆಯೇ ವಕೀಲರೊಂದಿಗೆ ಪೊಲೀಸರು ಅಸಭ್ಯವಾಗಿ ವರ್ತಿಸುವ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು~ ಎಂದು ಹೇಳಿದರು.<br /> <br /> ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ, `ನಾಗರಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಅವಾಚ್ಯ ಶಬ್ದ ಬಳಸಬಾರದು, ಅನಗತ್ಯವಾಗಿ ಕಿರುಕುಳ ನೀಡಬಾರದು. ಅಗತ್ಯಕ್ಕಿಂತ ಹೆಚ್ಚು ಮಾತನಾಡದಂತೆಯೂ ಸೂಚನೆ ನೀಡಲಾಗಿದೆ. ಇಲಾಖೆಯಲ್ಲೂ ಕೆಲ ಭ್ರಷ್ಟರಿದ್ದು, ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು~ ಎಂದರು.<br /> <br /> ಇದಕ್ಕೂ ಮೊದಲು ಸಂಘದ ಅಧ್ಯಕ್ಷ ಕೆ.ಎನ್. ಪುಟ್ಟೇಗೌಡ, `ಇನ್ಸ್ಪೆಕ್ಟರ್, ಎಸ್.ಐ, ಕಾನ್ಸ್ಟೇಬಲ್ಗಳು ವಕೀಲರೊಂದಿಗೆ ಅಸಭ್ಯವಾಗಿ ವರ್ತಿಸುವುದು, ಅವಹೇಳನಕಾರಿಯಾಗಿ ನಿಂದಿಸುವ ಪ್ರಸಂಗಗಳು ಸಂಭವಿಸುತ್ತಲೇ ಇವೆ. ಇದರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.<br /> <br /> ನ್ಯಾಯಾಲಯ, ಕಕ್ಷಿದಾರ, ವಕೀಲರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಪೊಲೀಸರಿಗೆ ಸೂಕ್ತ ಮಾಹಿತಿ ನೀಡಬೇಕು. ನಿತ್ಯ ಸುಮಾರು 8,000 ವಕೀಲರು ಹಾಗೂ 25,000ಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ಸಿವಿಲ್ ನ್ಯಾಯಾಲಯಕ್ಕೆ ಹೆಚ್ಚಿನ ಭದ್ರತೆ ಒದಗಿಸಬೇಕು~ ಎಂದು ಕೋರಿದರು.<br /> <br /> ಸಂಘದ ಪ್ರಧಾನ ಕಾರ್ಯದರ್ಶಿ ಆರ್. ರಾಜಣ್ಣ, ಖಜಾಂಚಿ ಟಿ.ಜಿ. ರವಿ, ನಗರ ವಿಭಾಗದ ಉಪಾಧ್ಯಕ್ಷೆ ಬಿ.ಜೆ.ಜಿ. ಸತ್ಯಶ್ರೀ, ಜಂಟಿ ಕಾರ್ಯದರ್ಶಿ ವಿ.ಮಂಜುನಾಥ್ ಉಪಸ್ಥಿತರಿದ್ದರು.<br /> <br /> <strong>13,000 ಕಾನ್ಸ್ಟೇಬಲ್ ನೇಮಕ</strong><br /> `ಹೊಸದಾಗಿ 13,000 ಪೊಲೀಸ್ ಕಾನ್ಸ್ಟೇಬಲ್ಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ~ ಎಂದು ಗೃಹ ಸಚಿವ ಆರ್. ಅಶೋಕ ಹೇಳಿದರು. `ಪೊಲೀಸ್ ಇಲಾಖೆಗೆ ಅಗತ್ಯವಾಗಿರುವ 13,000 ಕಾನ್ಸ್ಟೇಬಲ್ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>