<p><strong>ಬೆಂಗಳೂರು: </strong>‘ಜೆಡಿಎಸ್ ಶಾಸಕ ಜಮೀರ್ ಅಹಮ್ಮದ್ ಮತ್ತು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಭೇಟಿ ಸೌಹಾರ್ದಯುತವಾದದ್ದು, ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ತಿಳಿಸಿದರು.<br /> <br /> ರಾಜ್ಯ ಉಪ್ಪಾರ ಸಂಘ, ಉಪ್ಪಾರ ಕ್ಷೇಮಾಭಿವೃದ್ಧಿ, ವಿವಿಧೋದ್ದೇಶ ಮತ್ತು ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸಂಘದ ನೂತನ ಪದಾಧಿಕಾರಿಗಳ ಸನ್ಮಾನ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ‘ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಸಿ.ಕೆ.ಜಾಫರ್ ಷರೀಫ್ ಅವರ ಮೊಮ್ಮಗ ನನ್ನನ್ನು ಸಂಪರ್ಕಿಸಿಲ್ಲ. ಜಾಫರ್ ಷರೀಫ್ ಅವರು ಜೆಡಿಎಸ್ ಸೇರುತ್ತಾರೆ ಎಂಬುದು ಕೂಡ ವದಂತಿಯಷ್ಟೆ’ ಎಂದರು.<br /> <br /> ‘ಪಕ್ಷದ ಅಭ್ಯರ್ಥಿಗಳಿಗೆ ಇಂದಿನಿಂದ ‘ಬಿ’ ಫಾರಂ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಜೆಡಿಎಸ್ನ ಮೂವರು ಶಾಸಕರಿದ್ದಾರೆ. ಹೆಬ್ಬಾಳದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಾಗಿರುವ ಕಾರಣದಿಂದ ಅಲ್ಲಿ ಜಮೀರ್ ಅಹಮ್ಮದ್ ಅವರನ್ನು ಚುನಾವಣೆ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ’ ಎಂದು ತಿಳಿಸಿದರು.<br /> <br /> ‘ಬಂಡೆಪ್ಪ ಕಾಶೆಂಪೂರ ಅವರಿಗೆ ಬೀದರ್ ಕ್ಷೇತ್ರದ ಜವಾಬ್ದಾರಿ ವಹಿಸಲಾಗಿದೆ. ಎಲ್ಲಾ ಕಡೆ ನನಗೆ ಸುತ್ತಾಡಲು ಸಾಧ್ಯವಿಲ್ಲದ ಕಾರಣ ಪಕ್ಷದ ಮುಖಂಡರಿಗೆ ಜವಾಬ್ದಾರಿ ವಹಿಸಲಾಗಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಜೆಡಿಎಸ್ ಶಾಸಕ ಜಮೀರ್ ಅಹಮ್ಮದ್ ಮತ್ತು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಭೇಟಿ ಸೌಹಾರ್ದಯುತವಾದದ್ದು, ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ತಿಳಿಸಿದರು.<br /> <br /> ರಾಜ್ಯ ಉಪ್ಪಾರ ಸಂಘ, ಉಪ್ಪಾರ ಕ್ಷೇಮಾಭಿವೃದ್ಧಿ, ವಿವಿಧೋದ್ದೇಶ ಮತ್ತು ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸಂಘದ ನೂತನ ಪದಾಧಿಕಾರಿಗಳ ಸನ್ಮಾನ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ‘ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಸಿ.ಕೆ.ಜಾಫರ್ ಷರೀಫ್ ಅವರ ಮೊಮ್ಮಗ ನನ್ನನ್ನು ಸಂಪರ್ಕಿಸಿಲ್ಲ. ಜಾಫರ್ ಷರೀಫ್ ಅವರು ಜೆಡಿಎಸ್ ಸೇರುತ್ತಾರೆ ಎಂಬುದು ಕೂಡ ವದಂತಿಯಷ್ಟೆ’ ಎಂದರು.<br /> <br /> ‘ಪಕ್ಷದ ಅಭ್ಯರ್ಥಿಗಳಿಗೆ ಇಂದಿನಿಂದ ‘ಬಿ’ ಫಾರಂ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಜೆಡಿಎಸ್ನ ಮೂವರು ಶಾಸಕರಿದ್ದಾರೆ. ಹೆಬ್ಬಾಳದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಾಗಿರುವ ಕಾರಣದಿಂದ ಅಲ್ಲಿ ಜಮೀರ್ ಅಹಮ್ಮದ್ ಅವರನ್ನು ಚುನಾವಣೆ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ’ ಎಂದು ತಿಳಿಸಿದರು.<br /> <br /> ‘ಬಂಡೆಪ್ಪ ಕಾಶೆಂಪೂರ ಅವರಿಗೆ ಬೀದರ್ ಕ್ಷೇತ್ರದ ಜವಾಬ್ದಾರಿ ವಹಿಸಲಾಗಿದೆ. ಎಲ್ಲಾ ಕಡೆ ನನಗೆ ಸುತ್ತಾಡಲು ಸಾಧ್ಯವಿಲ್ಲದ ಕಾರಣ ಪಕ್ಷದ ಮುಖಂಡರಿಗೆ ಜವಾಬ್ದಾರಿ ವಹಿಸಲಾಗಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>