ಬೆಂಗಳೂರು: ನೀರು ಮತ್ತು ಒಳಚರಂಡಿ ಸೌಲಭ್ಯ ಕಲ್ಪಿಸುವ ಸಲುವಾಗಿ ಸಾರ್ವಜನಿಕರು ಜಲಮಂಡಳಿಗೆ ಪಾವತಿಸುವ ಹಣವನ್ನು ಕೆಲವು ಸಿಬ್ಬಂದಿ ದುರ್ಬಳಕೆ ಮಾಡಿರುವುದು ಬೆಳಕಿಗೆ ಬಂದಿದ್ದು, ಈಗಾಗಲೇ ಮಂಡಲಿ ಕ್ರಮಕ್ಕೆ ಮುಂದಾಗಿದೆ ಎಂದು ಮಂಡಳಿಯ ಅಧ್ಯಕ್ಷ ಎಂ.ಎಸ್.ರವಿಶಂಕರ್ ತಿಳಿಸಿದ್ದಾರೆ.
ಈ ಬಗ್ಗೆ ಮಂಡಲಿಯ ಲೆಕ್ಕಾಧಿಕಾರಿ (ಕಂದಾಯ) ನೇತೃತ್ವದ ತಂಡ ಪ್ರಾಥಮಿಕ ತನಿಖೆ ನಡೆಸಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಸಹಾಯಕ ಮಾರುತಿ ಪುರ್ಲಿ ಅವರನ್ನು ನ.30ರಂದು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಮಂಡಳಿಯ ಜಲಪರಿವೀಕ್ಷಕ ಲಕ್ಷ್ಮಣ್ ನಾಯಕ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.