<p><strong>ಬೆಂಗಳೂರು</strong>: `ಪ್ರತಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ವರ್ಷದ ಕ್ರಿಯಾ ಯೋಜನೆಯಲ್ಲಿ ಜೈವಿಕ ಇಂಧನ ಬಳಕೆಯನ್ನು ಸೇರಿಸಬೇಕು~ ಎಂದು ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಕಾರ್ಯಕಾರಿ ಅಧ್ಯಕ್ಷ ವೈ.ಬಿ.ರಾಮಕೃಷ್ಣ ತಿಳಿಸಿದರು. <br /> <br /> ಭಾನುವಾರ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಜೈವಿಕ ಇಂಧನ ಮೇಳದ ಸಮಾರೋಪ ಸಮಾರಂಭ ನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಅಕ್ಟೋಬರ್ 2 ರಿಂದ ಪ್ರತಿ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಗ್ರಾಮ ಸಭೆಗಳನ್ನು ನಡೆಸಲಾಗುವುದು.<br /> <br /> ಇಂತಹ ಗ್ರಾಮ ಸಭೆಗಳಲ್ಲಿ ಜೈವಿಕ ಇಂಧನದ ಬಳಕೆಯ ಬಗ್ಗೆ ಚರ್ಚೆ ನಡೆಸಿ, ಜಾಗೃತಿಯನ್ನು ಮೂಡಿಸಲಾಗುವುದು~ ಎಂದರು. `ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ರೈತರನ್ನು ಸಂಘಟಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು. ಮುಖ್ಯವಾಗಿ ಜೈವಿಕ ಇಂಧನವನ್ನು ಅವರೇ ಉತ್ಪಾದಿಸಿ ಅವರೇ ಬಳಕೆ ಮಾಡುವಂತೆ ಪ್ರೋತ್ಸಾಹಿಸಲಾಗುವುದು~ ಎಂದು ಹೇಳಿದರು.<br /> <br /> `ಈ ಮೇಳವು ಜೈವಿಕ ಇಂಧನದ ಬಳಕೆಯ ಮುಂದಿನ ಕಾರ್ಯಕ್ರಮಗಳ ವ್ಯವಸ್ಥಿತ ರೂಪವನ್ನು ನೀಡಲು ಚಾಲನೆ ನೀಡಲಾಗಿದೆ. ಇದು ಆರಂಭ ಮಾತ್ರವಾಗಿದೆ. ಮುಂದೆ ಸಾಧಿಸುವುದು ಬಹಳ ಇದೆ~ ಎಂದು ಪ್ರತಿಕ್ರಿಯಿಸಿದರು.<br /> `ಮೇಳದಲ್ಲಿ ಒಟ್ಟು 12 ಮಳಿಗೆಗಳು ಭಾಗವಹಿಸಿದ್ದವು. ಜನರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದರಿಂದ ಸ್ಫೂರ್ತಿ ಪಡೆದು ಮುಂದಿನ ಕಾರ್ಯಕ್ರಮಗಳನ್ನು ಯೋಜಿಸಲಾಗುವುದು~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ಪ್ರತಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ವರ್ಷದ ಕ್ರಿಯಾ ಯೋಜನೆಯಲ್ಲಿ ಜೈವಿಕ ಇಂಧನ ಬಳಕೆಯನ್ನು ಸೇರಿಸಬೇಕು~ ಎಂದು ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಕಾರ್ಯಕಾರಿ ಅಧ್ಯಕ್ಷ ವೈ.ಬಿ.ರಾಮಕೃಷ್ಣ ತಿಳಿಸಿದರು. <br /> <br /> ಭಾನುವಾರ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಜೈವಿಕ ಇಂಧನ ಮೇಳದ ಸಮಾರೋಪ ಸಮಾರಂಭ ನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಅಕ್ಟೋಬರ್ 2 ರಿಂದ ಪ್ರತಿ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಗ್ರಾಮ ಸಭೆಗಳನ್ನು ನಡೆಸಲಾಗುವುದು.<br /> <br /> ಇಂತಹ ಗ್ರಾಮ ಸಭೆಗಳಲ್ಲಿ ಜೈವಿಕ ಇಂಧನದ ಬಳಕೆಯ ಬಗ್ಗೆ ಚರ್ಚೆ ನಡೆಸಿ, ಜಾಗೃತಿಯನ್ನು ಮೂಡಿಸಲಾಗುವುದು~ ಎಂದರು. `ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ರೈತರನ್ನು ಸಂಘಟಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು. ಮುಖ್ಯವಾಗಿ ಜೈವಿಕ ಇಂಧನವನ್ನು ಅವರೇ ಉತ್ಪಾದಿಸಿ ಅವರೇ ಬಳಕೆ ಮಾಡುವಂತೆ ಪ್ರೋತ್ಸಾಹಿಸಲಾಗುವುದು~ ಎಂದು ಹೇಳಿದರು.<br /> <br /> `ಈ ಮೇಳವು ಜೈವಿಕ ಇಂಧನದ ಬಳಕೆಯ ಮುಂದಿನ ಕಾರ್ಯಕ್ರಮಗಳ ವ್ಯವಸ್ಥಿತ ರೂಪವನ್ನು ನೀಡಲು ಚಾಲನೆ ನೀಡಲಾಗಿದೆ. ಇದು ಆರಂಭ ಮಾತ್ರವಾಗಿದೆ. ಮುಂದೆ ಸಾಧಿಸುವುದು ಬಹಳ ಇದೆ~ ಎಂದು ಪ್ರತಿಕ್ರಿಯಿಸಿದರು.<br /> `ಮೇಳದಲ್ಲಿ ಒಟ್ಟು 12 ಮಳಿಗೆಗಳು ಭಾಗವಹಿಸಿದ್ದವು. ಜನರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದರಿಂದ ಸ್ಫೂರ್ತಿ ಪಡೆದು ಮುಂದಿನ ಕಾರ್ಯಕ್ರಮಗಳನ್ನು ಯೋಜಿಸಲಾಗುವುದು~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>