<p>ಬೆಂಗಳೂರು: ಪೊಲೀಸ್ ಸಿಬ್ಬಂದಿ ತುರ್ತು ಪರಿಸ್ಥಿತಿಯಲ್ಲಿ ಬೇರೆ ಜಿಲ್ಲೆ ಅಥವಾ ಊರುಗಳಲ್ಲಿ ಕಾರ್ಯ ನಿರ್ವಹಿಸುವಾಗ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲು ಎಲ್ಲ ಜಿಲ್ಲೆಗಳಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಭರವಸೆ ನೀಡಿದರು.<br /> <br /> ನಗರದ ಮೈಸೂರು ರಸ್ತೆಯಲ್ಲಿರುವ ಹುತಾತ್ಮರ ಉದ್ಯಾನದಲ್ಲಿ ಶುಕ್ರವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.<br /> ರಾಜ್ಯದ ಹತ್ತು ಮಂದಿ ವಿವಿಧ ದರ್ಜೆಯ ಪೊಲೀಸ್ ಸಿಬ್ಬಂದಿ ಸೇರಿದಂತೆ ದೇಶದಲ್ಲಿ ಕಳೆದ ವರ್ಷ ಕರ್ತವ್ಯ ನಿರ್ವಹಣೆ ವೇಳೆ ಸಾವನ್ನಪ್ಪಿದ ಒಟ್ಟು 636 ಮಂದಿಗೆ ಗೌರವ ಸಲ್ಲಿಸಲಾಯಿತು. <br /> <br /> ಗೃಹ ಸಚಿವ ಆರ್.ಅಶೋಕ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮ್ದಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎನ್.ಅಚ್ಯುತರಾವ್, ಸಿಐಡಿ ಡಿಜಿಪಿ ಶಂಕರ ಬಿದರಿ, ಅಗ್ನಿಶಾಮಕ ಇಲಾಖೆ ಡಿಜಿಪಿ ಎ.ಆರ್.ಇನ್ಫೆಂಟ್, ಪೊಲೀಸ್ ಗೃಹ ನಿರ್ಮಾಣ ನಿಗಮದ ಡಿಜಿಪಿ ಕುಚ್ಚಣ್ಣ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪೊಲೀಸ್ ಸಿಬ್ಬಂದಿ ತುರ್ತು ಪರಿಸ್ಥಿತಿಯಲ್ಲಿ ಬೇರೆ ಜಿಲ್ಲೆ ಅಥವಾ ಊರುಗಳಲ್ಲಿ ಕಾರ್ಯ ನಿರ್ವಹಿಸುವಾಗ ಅವರಿಗೆ ವಸತಿ ಸೌಲಭ್ಯ ಕಲ್ಪಿಸಲು ಎಲ್ಲ ಜಿಲ್ಲೆಗಳಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಭರವಸೆ ನೀಡಿದರು.<br /> <br /> ನಗರದ ಮೈಸೂರು ರಸ್ತೆಯಲ್ಲಿರುವ ಹುತಾತ್ಮರ ಉದ್ಯಾನದಲ್ಲಿ ಶುಕ್ರವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.<br /> ರಾಜ್ಯದ ಹತ್ತು ಮಂದಿ ವಿವಿಧ ದರ್ಜೆಯ ಪೊಲೀಸ್ ಸಿಬ್ಬಂದಿ ಸೇರಿದಂತೆ ದೇಶದಲ್ಲಿ ಕಳೆದ ವರ್ಷ ಕರ್ತವ್ಯ ನಿರ್ವಹಣೆ ವೇಳೆ ಸಾವನ್ನಪ್ಪಿದ ಒಟ್ಟು 636 ಮಂದಿಗೆ ಗೌರವ ಸಲ್ಲಿಸಲಾಯಿತು. <br /> <br /> ಗೃಹ ಸಚಿವ ಆರ್.ಅಶೋಕ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮ್ದಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎನ್.ಅಚ್ಯುತರಾವ್, ಸಿಐಡಿ ಡಿಜಿಪಿ ಶಂಕರ ಬಿದರಿ, ಅಗ್ನಿಶಾಮಕ ಇಲಾಖೆ ಡಿಜಿಪಿ ಎ.ಆರ್.ಇನ್ಫೆಂಟ್, ಪೊಲೀಸ್ ಗೃಹ ನಿರ್ಮಾಣ ನಿಗಮದ ಡಿಜಿಪಿ ಕುಚ್ಚಣ್ಣ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>