<p>ಬೆಂಗಳೂರು: ಜನರ ಜೀವನ ಪದ್ಧತಿ ಬದಲಾದಂತೆಲ್ಲ ಮಧುಮೇಹ, ಬೊಜ್ಜು ಮತ್ತು ಅಧಿಕ ರಕ್ತದೊತ್ತಡ ಕಾಯಿಲೆ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೂರು ಕಾಯಿಲೆಗಳು ಮನುಷ್ಯನ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ ಎಂದು ಬ್ರಿಟನ್ನಲ್ಲಿ ನೆಲೆಸಿರುವ ಭಾರತೀಯ ಮೂಲದ ವೈದ್ಯ ಡಾ.ಟಿ.ವಿ. ಶೇಷಗಿರಿ ಹೇಳಿದರು.<br /> <br /> ಮಧುಮೇಹ, ಬೊಜ್ಜು ಮತ್ತು ಅಧಿಕ ರಕ್ತದೊತ್ತಡ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾಶ್ಮೀರದಿಂದ ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ಕೈಗೊಂಡಿರುವ ಅವರು ತಮಿಳು ಚಿತ್ರ ನಟ ಡಾ. ವಿಕ್ರಂ ಅವರ ಜೊತೆ ಭಾನುವಾರ ಇಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.<br /> <br /> `ಹೃದ್ರೋಗ, ಮಧುಮೇಹ, ಬೊಜ್ಜು ಮುಂತಾದ ಕಾಯಿಲೆಗಳನ್ನು ಜೀವನ ಕ್ರಮದಲ್ಲಿ ಕೆಲವು ಬದಲಾವಣೆ ತಂದುಕೊಳ್ಳುವ ಮೂಲಕ ತಡೆಗಟ್ಟಬಹುದು. ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಕ್ರಮವಾಗಿ ಶೇಕಡ 20 ಮತ್ತು 40ರಷ್ಟು ಜನರಿಗೆ ಅಧಿಕ ರಕ್ತದೊತ್ತಡ ಇದೆ~ ಎಂದು ಡಾ. ಶೇಷಗಿರಿ ಹೇಳಿದರು.<br /> <br /> ಹಿಂದೆ ಕೇವಲ ನಗರವಾಸಿಗಳಲ್ಲಿ ಮಾತ್ರ ಹೆಚ್ಚಾಗಿ ಕಂಡುಬರುತ್ತಿದ್ದ ಮಧುಮೇಹ ಕಾಯಿಲೆ, ಇಂದು ಗ್ರಾಮವಾಸಿಗಳಲ್ಲೂ ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ. ಗ್ರಾಮವಾಸಿಗಳ ಬದುಕಿನ ಶೈಲಿಯೂ ಬದಲಾಗಿರುವುದು ಇದಕ್ಕೆ ಕಾರಣ ಎಂದರು.<br /> <br /> ಮದ್ಯಪಾನ ಮತ್ತು ಧೂಮಪಾನದಂತಹ ಚಟಗಳಿಂದ ದೂರವಿರುವುದು ಅವಶ್ಯ ಎಂದ ಅವರು, `ದುಶ್ಚಟಗಳನ್ನು ಬಿಡಲು ಒಮ್ಮಗೇ ಸಾಧ್ಯವಿಲ್ಲದಿದ್ದರೂ ಅವುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬಹುದು~ ಎಂದರು.<br /> ಕಾಶ್ಮೀರದಿಂದ ಬೆಂಗಳೂರಿನವರೆಗೆ ಸೈಕಲ್ ಯಾತ್ರೆಯ ಮೂಲಕ ಬರುವಾಗ ನೂರಾರು ಶಾಲೆ, ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಕರಪತ್ರಗಳನ್ನು ಹಂಚಲಾಗಿದೆ. ಪ್ರತಿದಿನ 8-10 ಗಂಟೆ ಸೈಕಲ್ ತುಳಿಯುತ್ತಿದ್ದೆ, ಈ ಅವಧಿಯಲ್ಲಿ ಸುಮಾರು 150 ಜನರನ್ನು ಭೇಟಿ ಮಾಡುತ್ತಿದ್ದೆ ಎಂದರು.<br /> <br /> ಚಿತ್ರನಟ ವಿಕ್ರಂ ಮಾತನಾಡಿ, `ಡಾ. ಶೇಷಗಿರಿ ಅವರು ಮಾಡುತ್ತಿರುವ ಕಾರ್ಯದ ರಾಯಭಾರಿ ನಾನು, ಈ ಯೋಜನೆಯ ನಿಜವಾದ ಹೀರೊ ಅವರೇ~ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಜನರ ಜೀವನ ಪದ್ಧತಿ ಬದಲಾದಂತೆಲ್ಲ ಮಧುಮೇಹ, ಬೊಜ್ಜು ಮತ್ತು ಅಧಿಕ ರಕ್ತದೊತ್ತಡ ಕಾಯಿಲೆ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೂರು ಕಾಯಿಲೆಗಳು ಮನುಷ್ಯನ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ ಎಂದು ಬ್ರಿಟನ್ನಲ್ಲಿ ನೆಲೆಸಿರುವ ಭಾರತೀಯ ಮೂಲದ ವೈದ್ಯ ಡಾ.ಟಿ.ವಿ. ಶೇಷಗಿರಿ ಹೇಳಿದರು.<br /> <br /> ಮಧುಮೇಹ, ಬೊಜ್ಜು ಮತ್ತು ಅಧಿಕ ರಕ್ತದೊತ್ತಡ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾಶ್ಮೀರದಿಂದ ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ಕೈಗೊಂಡಿರುವ ಅವರು ತಮಿಳು ಚಿತ್ರ ನಟ ಡಾ. ವಿಕ್ರಂ ಅವರ ಜೊತೆ ಭಾನುವಾರ ಇಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.<br /> <br /> `ಹೃದ್ರೋಗ, ಮಧುಮೇಹ, ಬೊಜ್ಜು ಮುಂತಾದ ಕಾಯಿಲೆಗಳನ್ನು ಜೀವನ ಕ್ರಮದಲ್ಲಿ ಕೆಲವು ಬದಲಾವಣೆ ತಂದುಕೊಳ್ಳುವ ಮೂಲಕ ತಡೆಗಟ್ಟಬಹುದು. ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಕ್ರಮವಾಗಿ ಶೇಕಡ 20 ಮತ್ತು 40ರಷ್ಟು ಜನರಿಗೆ ಅಧಿಕ ರಕ್ತದೊತ್ತಡ ಇದೆ~ ಎಂದು ಡಾ. ಶೇಷಗಿರಿ ಹೇಳಿದರು.<br /> <br /> ಹಿಂದೆ ಕೇವಲ ನಗರವಾಸಿಗಳಲ್ಲಿ ಮಾತ್ರ ಹೆಚ್ಚಾಗಿ ಕಂಡುಬರುತ್ತಿದ್ದ ಮಧುಮೇಹ ಕಾಯಿಲೆ, ಇಂದು ಗ್ರಾಮವಾಸಿಗಳಲ್ಲೂ ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ. ಗ್ರಾಮವಾಸಿಗಳ ಬದುಕಿನ ಶೈಲಿಯೂ ಬದಲಾಗಿರುವುದು ಇದಕ್ಕೆ ಕಾರಣ ಎಂದರು.<br /> <br /> ಮದ್ಯಪಾನ ಮತ್ತು ಧೂಮಪಾನದಂತಹ ಚಟಗಳಿಂದ ದೂರವಿರುವುದು ಅವಶ್ಯ ಎಂದ ಅವರು, `ದುಶ್ಚಟಗಳನ್ನು ಬಿಡಲು ಒಮ್ಮಗೇ ಸಾಧ್ಯವಿಲ್ಲದಿದ್ದರೂ ಅವುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬಹುದು~ ಎಂದರು.<br /> ಕಾಶ್ಮೀರದಿಂದ ಬೆಂಗಳೂರಿನವರೆಗೆ ಸೈಕಲ್ ಯಾತ್ರೆಯ ಮೂಲಕ ಬರುವಾಗ ನೂರಾರು ಶಾಲೆ, ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಕರಪತ್ರಗಳನ್ನು ಹಂಚಲಾಗಿದೆ. ಪ್ರತಿದಿನ 8-10 ಗಂಟೆ ಸೈಕಲ್ ತುಳಿಯುತ್ತಿದ್ದೆ, ಈ ಅವಧಿಯಲ್ಲಿ ಸುಮಾರು 150 ಜನರನ್ನು ಭೇಟಿ ಮಾಡುತ್ತಿದ್ದೆ ಎಂದರು.<br /> <br /> ಚಿತ್ರನಟ ವಿಕ್ರಂ ಮಾತನಾಡಿ, `ಡಾ. ಶೇಷಗಿರಿ ಅವರು ಮಾಡುತ್ತಿರುವ ಕಾರ್ಯದ ರಾಯಭಾರಿ ನಾನು, ಈ ಯೋಜನೆಯ ನಿಜವಾದ ಹೀರೊ ಅವರೇ~ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>