ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಇದೇ 27 ರಂದು ನಗರಕ್ಕೆ ಬರಲಿದ್ದು, ಅಂದು ವಿಜಯಪುರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ ನಗರದ ಪಕ್ಷದ ಪ್ರಮುಖರ ಸಭೆ ನಡೆಸಲಿದ್ದಾರೆ. 28ರಂದು ಕೆಪಿಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸುವರು. ಅದೇ ದಿನ ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸುವರು.