ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು?

ಮಂಡ್ಯ ಲೋಕಸಭಾ ಉಪ ಚುನಾವಣೆ
Last Updated 22 ಜುಲೈ 2013, 19:50 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸಿ.ಎಸ್.ಪುಟ್ಟರಾಜು ಅವರು ಕಣಕ್ಕೆಇಳಿಯುವ ಸಾಧ್ಯತೆ ಇದೆ. ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಸೋಮವಾರ ಮಂಡ್ಯ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

ಪುಟ್ಟರಾಜು ಅವರನ್ನು ಕಣಕ್ಕೆ ಇಳಿಸಲು ಜಿಲ್ಲೆಯ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ. ಆದರೆ, ಶಾಸಕ ಎನ್. ಚೆಲುವರಾಯಸ್ವಾಮಿ ಅವರು ವಿಧಾನ ಪರಿಷತ್ ಸದಸ್ಯ ರಾಮಕೃಷ್ಣ ಪರವಾಗಿ ಇದ್ದಾರೆ ಎನ್ನಲಾಗಿದೆ.

ಚೆಲುವರಾಯಸ್ವಾಮಿ ಅವರ ಮನವೊಲಿಸಿ ಪುಟ್ಟರಾಜು ಅವರನ್ನೇ ಕಣಕ್ಕೆ ಇಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT