<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಜೆಡಿಎಸ್ನ 12 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು</p>.<p> ಸೋಮವಾರ ಅಂತಿಮಗೊಳಿಸಲಾಗಿದೆ.<br /> <br /> ಸಂಸದೀಯ ಮಂಡಳಿಯ ಅಧ್ಯಕ್ಷ ಎಚ್.ಸಿ.ನೀರಾವರಿ ಅಧ್ಯಕ್ಷತೆಯಲ್ಲಿ ನಡೆದ ಸಭೆ 12 ಹೆಸರುಗಳ ಪಟ್ಟಿಯನ್ನು ಅಂತಿಮಗೊಳಿಸಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರಿಗೆ ಕಳುಹಿಸಿದೆ. ಒಂದೆರಡು ದಿನದಲ್ಲಿ ಅಧಿಕೃತವಾಗಿ ಪಟ್ಟಿ ಬಿಡುಗಡೆಯಾಗಲಿದೆ.<br /> <br /> ಶಿವಮೊಗ್ಗದಿಂದ ಯಾರು ಸ್ಪರ್ಧಿಸಬೇಕು ಎಂಬುದನ್ನು ಬಂಗಾರಪ್ಪ ಕುಟುಂಬದವರು ನಿರ್ಧರಿಸಲಿದ್ದಾರೆ ಎನ್ನಲಾಗಿದೆ.<br /> ಅದೇ ರೀತಿ ಚಿಕ್ಕೊಡಿ ಕ್ಷೇತ್ರಕ್ಕೆ ಸಹೋದರರಾದ ಉತ್ತಮ ಪಾಟೀಲ, ಶ್ರೀಮಂತ ಪಾಟೀಲ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಇಬ್ಬರ ಪೈಕಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಅವರಿಗೇ ಬಿಡಲಾಗಿದೆ.<br /> ಇನ್ನುಳಿದ 16 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.<br /> <br /> ಚಿಕ್ಕಬಳ್ಳಾಪುರಲೋಕಸಭಾ ಕ್ಷೇತ್ರದಿಂದ ಅನಿತಾಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದೆ. ಎರಡನೇ ಪಟ್ಟಿಯಲ್ಲಿ ಅವರ ಹೆಸರು ಇರಲಿದೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಜೆಡಿಎಸ್ನ 12 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು</p>.<p> ಸೋಮವಾರ ಅಂತಿಮಗೊಳಿಸಲಾಗಿದೆ.<br /> <br /> ಸಂಸದೀಯ ಮಂಡಳಿಯ ಅಧ್ಯಕ್ಷ ಎಚ್.ಸಿ.ನೀರಾವರಿ ಅಧ್ಯಕ್ಷತೆಯಲ್ಲಿ ನಡೆದ ಸಭೆ 12 ಹೆಸರುಗಳ ಪಟ್ಟಿಯನ್ನು ಅಂತಿಮಗೊಳಿಸಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರಿಗೆ ಕಳುಹಿಸಿದೆ. ಒಂದೆರಡು ದಿನದಲ್ಲಿ ಅಧಿಕೃತವಾಗಿ ಪಟ್ಟಿ ಬಿಡುಗಡೆಯಾಗಲಿದೆ.<br /> <br /> ಶಿವಮೊಗ್ಗದಿಂದ ಯಾರು ಸ್ಪರ್ಧಿಸಬೇಕು ಎಂಬುದನ್ನು ಬಂಗಾರಪ್ಪ ಕುಟುಂಬದವರು ನಿರ್ಧರಿಸಲಿದ್ದಾರೆ ಎನ್ನಲಾಗಿದೆ.<br /> ಅದೇ ರೀತಿ ಚಿಕ್ಕೊಡಿ ಕ್ಷೇತ್ರಕ್ಕೆ ಸಹೋದರರಾದ ಉತ್ತಮ ಪಾಟೀಲ, ಶ್ರೀಮಂತ ಪಾಟೀಲ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಇಬ್ಬರ ಪೈಕಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಅವರಿಗೇ ಬಿಡಲಾಗಿದೆ.<br /> ಇನ್ನುಳಿದ 16 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.<br /> <br /> ಚಿಕ್ಕಬಳ್ಳಾಪುರಲೋಕಸಭಾ ಕ್ಷೇತ್ರದಿಂದ ಅನಿತಾಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದೆ. ಎರಡನೇ ಪಟ್ಟಿಯಲ್ಲಿ ಅವರ ಹೆಸರು ಇರಲಿದೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>