<p><strong>ಬೆಂಗಳೂರು:</strong> ಟಿಪ್ಪು ಜಯಂತಿ ಆಚರಿಸಲು ನಿರ್ಧರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ‘ವೀರ ವನಿತೆ ಒನಕೆ ಓಬವ್ವ ಹೋರಾಟ ವೇದಿಕೆ’ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಮಹಿಳಾ ಕಾರ್ಯಕರ್ತರು ಓಬವ್ವ ವೇಷ ತೊಟ್ಟು, ಕೈಯಲ್ಲಿ ಒನಕೆ ಹಿಡಿದು ಸರ್ಕಾರಕ್ಕೆ ಧಿಕ್ಕಾರ ಕೂಗಿದರು.</p>.<p>‘ಓಬವ್ವ ಅವರನ್ನು ಹೈದರಾಲಿ (ಟಿಪ್ಪು ತಂದೆ) ಅವರ ಸೈನ್ಯ ಮೋಸದಿಂದ ಹತ್ಯೆ ಮಾಡಿತ್ತು. ಆ ಸೈನ್ಯದಲ್ಲಿ ಟಿಪ್ಪು ಸಹ ಇದ್ದು, ಓಬವ್ವ ವಿರುದ್ಧ ಹೋರಾಡಿದ್ದ ಎಂದು ಇತಿಹಾಸದಲ್ಲಿ ಉಲ್ಲೇಖವಿದೆ. ಟಿಪ್ಪು ಜಯಂತಿ ಮಾಡಿದರೆ ಓಬವ್ವ ಅವರ ಶೌರ್ಯಕ್ಕೆ ಅಪಮಾನ ಮಾಡಿದಂತಾಗುತ್ತದೆ. ಹೀಗಾಗಿ ಜಯಂತಿ ನಡೆಸಬಾರದು’ ಎಂದು ವೇದಿಕೆಯ ಅಧ್ಯಕ್ಷ ಡಾ.ಜೀವರಾಜ್ ಆಗ್ರಹಿಸಿದರು.</p>.<p>‘ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂಬಂತೆ ಸರ್ಕಾರ ಬಿಂಬಿಸುತ್ತಿದೆ. ಟಿಪ್ಪು 1799ರಲ್ಲಿಯೇ ಮೃತಪಟ್ಟಿದ್ದಾನೆ. ಸ್ವಾತಂತ್ರ್ಯ ಹೋರಾಟ ಆರಂಭವಾಗಿದ್ದು 1857ರಲ್ಲಿ. ಹೀಗಿರುವಾಗ, ಆತ ಸ್ವಾತಂತ್ರ್ಯ ಹೋರಾಟಗಾರ ಹೇಗಾಗುತ್ತಾನೆ’ ಎಂದು ಪ್ರಶ್ನಿಸಿದರು.</p>.<p>‘ಮತಾಂಧನಾಗಿದ್ದ ಟಿಪ್ಪು ಹಿಂದೂ ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾನೆ. ಹಿಂದೂಗಳನ್ನು ಹತ್ಯೆಗೈದಿದ್ದಾನೆ. ಕೊಡವ ಮನೆತನಗಳ ಮೇಲೆ ದಾಳಿ ಮಾಡಿ ಅವರನ್ನು ಕೊಲೆ ಮಾಡಿದ್ದಾನೆ. ಇಂತಹ ವ್ಯಕ್ತಿಯ ಹೆಸರಿನಲ್ಲಿ ಜಯಂತಿ ಆಚರಣೆ ಮಾಡುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ’ ಎಂದರು.</p>.<p>ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಅಧ್ಯಕ್ಷ ಚಿ.ನಾ.ರಾಮು, ‘ವೋಟ್ ಬ್ಯಾಂಕ್ಗಾಗಿ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ಹೊರಟಿದೆ. ಕಾಂಗ್ರೆಸ್ಗೆ ಈ ಹಿಂದೆ ಟಿಪ್ಪು ಮೇಲೆ ವ್ಯಾಮೋಹ ಇರಲಿಲ್ಲ. ಕಳೆದ ಎರಡು ವರ್ಷಗಳಿಂದ ವ್ಯಾಮೋಹ ಜಾಸ್ತಿಯಾಗಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಟಿಪ್ಪು ಜಯಂತಿ ಆಚರಿಸಲು ನಿರ್ಧರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ‘ವೀರ ವನಿತೆ ಒನಕೆ ಓಬವ್ವ ಹೋರಾಟ ವೇದಿಕೆ’ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಮಹಿಳಾ ಕಾರ್ಯಕರ್ತರು ಓಬವ್ವ ವೇಷ ತೊಟ್ಟು, ಕೈಯಲ್ಲಿ ಒನಕೆ ಹಿಡಿದು ಸರ್ಕಾರಕ್ಕೆ ಧಿಕ್ಕಾರ ಕೂಗಿದರು.</p>.<p>‘ಓಬವ್ವ ಅವರನ್ನು ಹೈದರಾಲಿ (ಟಿಪ್ಪು ತಂದೆ) ಅವರ ಸೈನ್ಯ ಮೋಸದಿಂದ ಹತ್ಯೆ ಮಾಡಿತ್ತು. ಆ ಸೈನ್ಯದಲ್ಲಿ ಟಿಪ್ಪು ಸಹ ಇದ್ದು, ಓಬವ್ವ ವಿರುದ್ಧ ಹೋರಾಡಿದ್ದ ಎಂದು ಇತಿಹಾಸದಲ್ಲಿ ಉಲ್ಲೇಖವಿದೆ. ಟಿಪ್ಪು ಜಯಂತಿ ಮಾಡಿದರೆ ಓಬವ್ವ ಅವರ ಶೌರ್ಯಕ್ಕೆ ಅಪಮಾನ ಮಾಡಿದಂತಾಗುತ್ತದೆ. ಹೀಗಾಗಿ ಜಯಂತಿ ನಡೆಸಬಾರದು’ ಎಂದು ವೇದಿಕೆಯ ಅಧ್ಯಕ್ಷ ಡಾ.ಜೀವರಾಜ್ ಆಗ್ರಹಿಸಿದರು.</p>.<p>‘ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂಬಂತೆ ಸರ್ಕಾರ ಬಿಂಬಿಸುತ್ತಿದೆ. ಟಿಪ್ಪು 1799ರಲ್ಲಿಯೇ ಮೃತಪಟ್ಟಿದ್ದಾನೆ. ಸ್ವಾತಂತ್ರ್ಯ ಹೋರಾಟ ಆರಂಭವಾಗಿದ್ದು 1857ರಲ್ಲಿ. ಹೀಗಿರುವಾಗ, ಆತ ಸ್ವಾತಂತ್ರ್ಯ ಹೋರಾಟಗಾರ ಹೇಗಾಗುತ್ತಾನೆ’ ಎಂದು ಪ್ರಶ್ನಿಸಿದರು.</p>.<p>‘ಮತಾಂಧನಾಗಿದ್ದ ಟಿಪ್ಪು ಹಿಂದೂ ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾನೆ. ಹಿಂದೂಗಳನ್ನು ಹತ್ಯೆಗೈದಿದ್ದಾನೆ. ಕೊಡವ ಮನೆತನಗಳ ಮೇಲೆ ದಾಳಿ ಮಾಡಿ ಅವರನ್ನು ಕೊಲೆ ಮಾಡಿದ್ದಾನೆ. ಇಂತಹ ವ್ಯಕ್ತಿಯ ಹೆಸರಿನಲ್ಲಿ ಜಯಂತಿ ಆಚರಣೆ ಮಾಡುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ’ ಎಂದರು.</p>.<p>ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಅಧ್ಯಕ್ಷ ಚಿ.ನಾ.ರಾಮು, ‘ವೋಟ್ ಬ್ಯಾಂಕ್ಗಾಗಿ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ಹೊರಟಿದೆ. ಕಾಂಗ್ರೆಸ್ಗೆ ಈ ಹಿಂದೆ ಟಿಪ್ಪು ಮೇಲೆ ವ್ಯಾಮೋಹ ಇರಲಿಲ್ಲ. ಕಳೆದ ಎರಡು ವರ್ಷಗಳಿಂದ ವ್ಯಾಮೋಹ ಜಾಸ್ತಿಯಾಗಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>