<p>ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು `ಮೆಟ್ರೊ~ ಉದ್ಘಾಟನಾ ಕಾರ್ಯಕ್ರಮವನ್ನು ಗುರುವಾರ ಟಿ.ವಿ.ಯಲ್ಲಿ ವೀಕ್ಷಿಸಿದರು.<br /> <br /> ಖಾಸಗಿ ವಾಹಿನಿಯಲ್ಲಿ ನೇರ ಪ್ರಸಾರವಾದ ಕಾರ್ಯಕ್ರಮವನ್ನು ಅವರು ವೀಕ್ಷಿಸಿದರು. ಬೆಳಿಗ್ಗೆ 5.30ಕ್ಕೆ ಎದ್ದ ಅವರು ಒಟ್ಟು ಹದಿನೈದು ದಿನ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರು. ಮನೆಯಿಂದ ತಂದಿದ್ದ ತಿಂಡಿಯನ್ನು ಅವರು ತಿಂದರು. ವೈದ್ಯರು ಆರೋಗ್ಯ ತಪಾಸಣೆ ನಡೆಸಲು ಹೋದಾಗ `ನನಗೇನೂ ಆಗಿಲ್ಲ. ತಪಾಸಣೆ ಮಾಡುವುದು ಬೇಡ~ ಎಂದು ಹೇಳಿ ಕಳುಹಿಸಿದ್ದಾರೆ. ಮಧ್ಯಾಹ್ನ ಮತ್ತು ರಾತ್ರಿ ಅವರು ಮನೆಯ ಊಟವನ್ನೇ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.<br /> <br /> ಪುಸ್ತಕಗಳು ವಾಪಸ್: ಗ್ರಂಥಾಲಯದಿಂದ ಪಡೆದಿದ್ದ ಹತ್ತು ಪುಸ್ತಕಗಳನ್ನು ಯಡಿಯೂರಪ್ಪ ವಾಪಸ್ ನೀಡಿದ್ದಾರೆ. ಪುಸ್ತಕದಲ್ಲಿ ಅಕ್ಷರಗಳ ಗಾತ್ರ ಕಿರಿದಾಗಿರುವುದರಿಂದ ಓದಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಮರಳಿಸಿದ್ದಾರೆ. ಗುರುವಾರ ಸಹ ಅವರು ಯಾರನ್ನೂ ಭೇಟಿ ಮಾಡಿಲ್ಲ. ಟಿ.ವಿ. ನೋಡುವುದು, ನಿದ್ರಿಸುವ ಮೂಲಕ ಅವರು ಕಾಲ ಕಳೆದಿದ್ದಾರೆ.<br /> <br /> ಯಡಿಯೂರಪ್ಪ ಅವರಿಗೆ ಶೀತವಾಗಿತ್ತು ಮತ್ತು ಕೆಮ್ಮುತ್ತಿದ್ದರು. ಇದಕ್ಕಾಗಿ ಅವರು ಸಿರಪ್ ಕುಡಿದರು. ಉಳಿದಂತೆ ಅವರ ಆರೋಗ್ಯ ಚೆನ್ನಾಗಿದೆ ಎಂದು ಜೈಲು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು `ಮೆಟ್ರೊ~ ಉದ್ಘಾಟನಾ ಕಾರ್ಯಕ್ರಮವನ್ನು ಗುರುವಾರ ಟಿ.ವಿ.ಯಲ್ಲಿ ವೀಕ್ಷಿಸಿದರು.<br /> <br /> ಖಾಸಗಿ ವಾಹಿನಿಯಲ್ಲಿ ನೇರ ಪ್ರಸಾರವಾದ ಕಾರ್ಯಕ್ರಮವನ್ನು ಅವರು ವೀಕ್ಷಿಸಿದರು. ಬೆಳಿಗ್ಗೆ 5.30ಕ್ಕೆ ಎದ್ದ ಅವರು ಒಟ್ಟು ಹದಿನೈದು ದಿನ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರು. ಮನೆಯಿಂದ ತಂದಿದ್ದ ತಿಂಡಿಯನ್ನು ಅವರು ತಿಂದರು. ವೈದ್ಯರು ಆರೋಗ್ಯ ತಪಾಸಣೆ ನಡೆಸಲು ಹೋದಾಗ `ನನಗೇನೂ ಆಗಿಲ್ಲ. ತಪಾಸಣೆ ಮಾಡುವುದು ಬೇಡ~ ಎಂದು ಹೇಳಿ ಕಳುಹಿಸಿದ್ದಾರೆ. ಮಧ್ಯಾಹ್ನ ಮತ್ತು ರಾತ್ರಿ ಅವರು ಮನೆಯ ಊಟವನ್ನೇ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.<br /> <br /> ಪುಸ್ತಕಗಳು ವಾಪಸ್: ಗ್ರಂಥಾಲಯದಿಂದ ಪಡೆದಿದ್ದ ಹತ್ತು ಪುಸ್ತಕಗಳನ್ನು ಯಡಿಯೂರಪ್ಪ ವಾಪಸ್ ನೀಡಿದ್ದಾರೆ. ಪುಸ್ತಕದಲ್ಲಿ ಅಕ್ಷರಗಳ ಗಾತ್ರ ಕಿರಿದಾಗಿರುವುದರಿಂದ ಓದಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಮರಳಿಸಿದ್ದಾರೆ. ಗುರುವಾರ ಸಹ ಅವರು ಯಾರನ್ನೂ ಭೇಟಿ ಮಾಡಿಲ್ಲ. ಟಿ.ವಿ. ನೋಡುವುದು, ನಿದ್ರಿಸುವ ಮೂಲಕ ಅವರು ಕಾಲ ಕಳೆದಿದ್ದಾರೆ.<br /> <br /> ಯಡಿಯೂರಪ್ಪ ಅವರಿಗೆ ಶೀತವಾಗಿತ್ತು ಮತ್ತು ಕೆಮ್ಮುತ್ತಿದ್ದರು. ಇದಕ್ಕಾಗಿ ಅವರು ಸಿರಪ್ ಕುಡಿದರು. ಉಳಿದಂತೆ ಅವರ ಆರೋಗ್ಯ ಚೆನ್ನಾಗಿದೆ ಎಂದು ಜೈಲು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>