ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಪರವಾಗಿ ಹಾಜರಿದ್ದ ವಕೀಲ ಶ್ರೀರಂಗ ಸುಬ್ಬಣ್ಣ, ಈ ಕುರಿತಂತೆ ನ್ಯಾಯಪೀಠಕ್ಕೆ ವಿವರಿಸಿದರು. ‘ವಿವಾದಿತ ಪ್ರದೇಶದ ಕಂದಾಯ ಖಾತೆ ಮತ್ತು ಸಂಬಂಧಿಸಿದ ಮೂಲ ದಾಖಲೆಗಳು ಕೆಪಿಟಿಸಿಎಲ್ ಸುಪರ್ದಿಯಲ್ಲಿವೆ. ಆದಾಗ್ಯೂ ಅರ್ಜಿದಾರರ ಆಕ್ಷೇಪಣೆ ಮತ್ತು ಅಹವಾಲುಗಳನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಲಿಸಿ ಇತ್ಯರ್ಥಪಡಿಸಲಿದ್ದಾರೆ’ ಎಂದು ತಿಳಿಸಿದರು.