<p><strong>ಬೆಂಗಳೂರು:</strong> ಜಿಲ್ಲಾ ಆರೋಗ್ಯಾಧಿಕಾರಿಗಳ (ಡಿಎಚ್ಒ) ಕಚೇರಿಯನ್ನು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಸ್ಥಳಾಂತರಿಸಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ರೀತಿ ಸ್ಥಳಾಂತರ ಮಾಡಿರುವುದು ಒಳ್ಳೆಯ ಸಂಪ್ರದಾಯ ಅಲ್ಲ ಎಂದು ಜೆಡಿಎಸ್ ಸದಸ್ಯ ಮಧು ಬಂಗಾರಪ್ಪ ಟೀಕಿಸಿದರು.<br /> <br /> ವಿಧಾನಸಭೆಯಲ್ಲಿ ಮಂಗಳವಾರ ಗಮನ ಸೆಳೆಯುವ ಸೂಚನೆಯಡಿ ಈ ವಿಷಯ ಪ್ರಸ್ತಾಪಿಸಿದ ಅವರು, ಜಿಲ್ಲಾ ಆರೋಗ್ಯಾಧಿಕಾರಿಗಳು ಶಿಕಾರಿಪುರದಲ್ಲಿ ಇರುವುದರಿಂದ ಕೆಲಸಗಳಿಗಾಗಿ ಅಲ್ಲಿಗೆ ಹೊಗಲು ಜನರಿಗೆ ತೊಂದರೆ ಆಗಿದೆ. ಡಿಎಚ್ಒಗಳು ಜಿಲ್ಲಾ ಕೇಂದ್ರದಲ್ಲೇ ಇರುವಂತೆ ಮಾಡಿ ಎಂದರು.<br /> <br /> ಆಗ ಎದ್ದು ನಿಂತ ಕೆಜೆಪಿಯ ಬಿ.ಎಸ್.ಯಡಿಯೂರಪ್ಪ, `ಪ್ರತ್ಯೇಕವಾದ ಸರ್ಕಾರಿ ಆದೇಶದ ಮೂಲಕ ಸ್ಥಳಾಂತರವಾಗಿದೆ. ಈ ಬಗ್ಗೆ ಸಭಾಧ್ಯಕ್ಷರ ಕೊಠಡಿಯಲ್ಲಿ ಚರ್ಚೆ ಮಾಡೋಣ' ಎಂದರು. ಸ್ಪೀಕರ್ ಕಾಗೋಡು ತಿಮ್ಮಪ್ಪ ಇದಕ್ಕೆ ಒಪ್ಪಿದರು.<br /> <br /> ಇದಕ್ಕೂ ಮುನ್ನ ಆರೋಗ್ಯ ಸಚಿವರ ಪರವಾಗಿ ಉತ್ತರಿಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯನ್ನು ಶಿಕಾರಿಪುರಕ್ಕೆ ಸ್ಥಳಾಂತರ ಮಾಡಿಲ್ಲ. ಹಾಸಿಗೆಗಳ ಸಂಖ್ಯೆಯನ್ನು 650ರಿಂದ 950ಕ್ಕೆ ಹೆಚ್ಚಿಸಲಾಗಿದೆ. ಅಗತ್ಯವಿರುವ ಹೆಚ್ಚುವರಿ ಹುದ್ದೆಗಳನ್ನು ಸೃಜಿಸಲಾಗಿದೆ ಎಂದರು.<br /> <br /> ಶಿಕಾರಿಪುರದ ಆಸ್ಪತ್ರೆ 150 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಅದನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಿಲ್ಲಾ ಆರೋಗ್ಯಾಧಿಕಾರಿಗಳ (ಡಿಎಚ್ಒ) ಕಚೇರಿಯನ್ನು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಸ್ಥಳಾಂತರಿಸಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ರೀತಿ ಸ್ಥಳಾಂತರ ಮಾಡಿರುವುದು ಒಳ್ಳೆಯ ಸಂಪ್ರದಾಯ ಅಲ್ಲ ಎಂದು ಜೆಡಿಎಸ್ ಸದಸ್ಯ ಮಧು ಬಂಗಾರಪ್ಪ ಟೀಕಿಸಿದರು.<br /> <br /> ವಿಧಾನಸಭೆಯಲ್ಲಿ ಮಂಗಳವಾರ ಗಮನ ಸೆಳೆಯುವ ಸೂಚನೆಯಡಿ ಈ ವಿಷಯ ಪ್ರಸ್ತಾಪಿಸಿದ ಅವರು, ಜಿಲ್ಲಾ ಆರೋಗ್ಯಾಧಿಕಾರಿಗಳು ಶಿಕಾರಿಪುರದಲ್ಲಿ ಇರುವುದರಿಂದ ಕೆಲಸಗಳಿಗಾಗಿ ಅಲ್ಲಿಗೆ ಹೊಗಲು ಜನರಿಗೆ ತೊಂದರೆ ಆಗಿದೆ. ಡಿಎಚ್ಒಗಳು ಜಿಲ್ಲಾ ಕೇಂದ್ರದಲ್ಲೇ ಇರುವಂತೆ ಮಾಡಿ ಎಂದರು.<br /> <br /> ಆಗ ಎದ್ದು ನಿಂತ ಕೆಜೆಪಿಯ ಬಿ.ಎಸ್.ಯಡಿಯೂರಪ್ಪ, `ಪ್ರತ್ಯೇಕವಾದ ಸರ್ಕಾರಿ ಆದೇಶದ ಮೂಲಕ ಸ್ಥಳಾಂತರವಾಗಿದೆ. ಈ ಬಗ್ಗೆ ಸಭಾಧ್ಯಕ್ಷರ ಕೊಠಡಿಯಲ್ಲಿ ಚರ್ಚೆ ಮಾಡೋಣ' ಎಂದರು. ಸ್ಪೀಕರ್ ಕಾಗೋಡು ತಿಮ್ಮಪ್ಪ ಇದಕ್ಕೆ ಒಪ್ಪಿದರು.<br /> <br /> ಇದಕ್ಕೂ ಮುನ್ನ ಆರೋಗ್ಯ ಸಚಿವರ ಪರವಾಗಿ ಉತ್ತರಿಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯನ್ನು ಶಿಕಾರಿಪುರಕ್ಕೆ ಸ್ಥಳಾಂತರ ಮಾಡಿಲ್ಲ. ಹಾಸಿಗೆಗಳ ಸಂಖ್ಯೆಯನ್ನು 650ರಿಂದ 950ಕ್ಕೆ ಹೆಚ್ಚಿಸಲಾಗಿದೆ. ಅಗತ್ಯವಿರುವ ಹೆಚ್ಚುವರಿ ಹುದ್ದೆಗಳನ್ನು ಸೃಜಿಸಲಾಗಿದೆ ಎಂದರು.<br /> <br /> ಶಿಕಾರಿಪುರದ ಆಸ್ಪತ್ರೆ 150 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಅದನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>