ಯಲಹಂಕ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಮೃತಪಟ್ಟಿರುವ ಘಟನೆ ವಿದ್ಯಾನಗರ ಕ್ರಾಸ್ ಸಮೀಪದಲ್ಲಿ ಬುಧವಾರ ನಡೆದಿದೆ.
ಕಮ್ಮನಹಳ್ಳಿ ನಿವಾಸಿ ಯುವರಾಜ್ (55) ಮೃತಪಟ್ಟವರು. ಇವರು ಪೆಪ್ಸಿ ಕಂಪೆನಿಯಲ್ಲಿ ಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಂಜೆ ದೇವನಹಳ್ಳಿ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಲಾರಿಯೊಂದು ಇವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ.