`ಡಿಸಿಸಿ ಬ್ಯಾಂಕ್ಗಳಿಗೆ ನೀಡುತ್ತಿರುವ ಬಡ್ಡಿ ಸಹಾಯಧನದ ಮೊತ್ತವು ಕಡಿಮೆಯಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಲಾಗುವುದು' ಎಂದು ಅವರು ತಿಳಿಸಿದರು.
ಪರಿಶೀಲನೆ: ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ರೈತರಿಗೆ ನೇರವಾಗಿ ಸಹಾಯಧನ ನೀಡುವಂತೆ ಬೆಳೆ ಸಾಲ ಬಡ್ಡಿ ಸಹಾಯ ಧನವನ್ನು ರೈತರಿಗೆ ನೇರವಾಗಿ ತಲುಪಿಸಬೇಕೆಂಬ ಸಲಹೆ ಸಭೆಯಲ್ಲಿ ಕೇಳಿಬಂದಾಗ, ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಚಿವರು ಸ್ಪಷ್ಟಪಡಿಸಿದರು.
ಮೊದಲಿಗೆ ಮಾತನಾಡಿದ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, `ಸಹಕಾರ ಬ್ಯಾಂಕ್ಗಳಿಗೆ ಬಾಕಿಯಿರುವ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು. ಬೆಳೆ ಸಾಲದ ಮೇಲಿನ ಬಡ್ಡಿ ಸಹಾಯಧನ ಬಹಳ ಕಡಿಮೆಯಾಗಿದ್ದು ಇದರಿಂದಾಗಿ ಡಿಸಿಸಿ ಬ್ಯಾಂಕ್ಗಳು ಸಂಕಷ್ಟಕ್ಕೆ ಸಿಲುಕಿವೆ. ಸಹಾಯಧನ ಹೆಚ್ಚಳ ಮಾಡಬೇಕು. ಮಧ್ಯಮಾವಧಿ ಸಾಲದ ಬಡ್ಡಿ ಸಹಾಯಧನವನ್ನು ಹೆಚ್ಚಿಸಬೇಕು' ಎಂದು ಕೋರಿದರು.
ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಕೃಷ್ಣರಾವ್ ಮೊದಲಾದವರು ಉಪಸ್ಥಿತರಿದ್ದರು.