<p><strong>ಬೆಂಗಳೂರು:</strong> ಬಿಲ್ ಜಾಸ್ತಿಯಾಯಿತು ಎಂದು ಆರೋಪಿಸಿ ಐದು ಮಂದಿಯ ಗುಂಪೊಂದು ಬಾರ್ ಮತ್ತು ರೆಸ್ಟೊರೆಂಟ್ ಸಿಬ್ಬಂದಿಯೊಂದಿಗೆ ತಕರಾರು ತೆಗೆದು ನಾಲ್ಕು ಜನರನ್ನು ಗಾಯಗೊಳಿಸಿದ ಘಟನೆ ನಗರದ ಕೊಡಿಗೆಹಳ್ಳಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. <br /> <br /> ಗಾಯಾಳುಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಿ ಅಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮ್ಮಗೊಂಡನಹಳ್ಳಿಯ ಫ್ರಾಂಕ್ಲಿನ್, ಜಾಕೋಬ್, ಜಾನ್ ರಾಬರ್ಟ್, ಸುಮನ್ ಮತ್ತು ರಾಘ ಎಂಬುವವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. <br /> <br /> ಫ್ರಾಂಕ್ಲಿನ್ ತನ್ನ ನಾಲ್ಕು ಮಂದಿ ಸ್ನೇಹಿತರನ್ನು ರಾತ್ರಿ 9ರ ಸುಮಾರಿಗೆ ಭದ್ರಪ್ಪ ಬಡಾವಣೆಯ ಬಾಲಾಜಿ ಬಾರ್ಗೆ ಕರೆದೊಯ್ದಿದ್ದಾನೆ. ಬಾರ್ ಸಿಬ್ಬಂದಿ ಆತನಿಗೆ ರೂ 900 ಮೊತ್ತದ ಬಿಲ್ ನೀಡಿದಾಗ ಆ ಮೊತ್ತವನ್ನು ನೀಡಲು ನಿರಾಕರಿಸಿ ಬಾರ್ ಮಾಲೀಕರೊಂದಿಗೆ ಜಗಳಕ್ಕಿಳಿದಿದ್ದಾನೆ. ಆಗ ಸಿಬ್ಬಂದಿ ಇವರನ್ನು ಸುತ್ತುವರೆದಿದ್ದಾರೆ. ತನ್ನ ಸಹೋದರ ಹಾಗೂ ಸ್ನೇಹಿತರೊಂದಿಗೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಲ್ ಜಾಸ್ತಿಯಾಯಿತು ಎಂದು ಆರೋಪಿಸಿ ಐದು ಮಂದಿಯ ಗುಂಪೊಂದು ಬಾರ್ ಮತ್ತು ರೆಸ್ಟೊರೆಂಟ್ ಸಿಬ್ಬಂದಿಯೊಂದಿಗೆ ತಕರಾರು ತೆಗೆದು ನಾಲ್ಕು ಜನರನ್ನು ಗಾಯಗೊಳಿಸಿದ ಘಟನೆ ನಗರದ ಕೊಡಿಗೆಹಳ್ಳಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. <br /> <br /> ಗಾಯಾಳುಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಿ ಅಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮ್ಮಗೊಂಡನಹಳ್ಳಿಯ ಫ್ರಾಂಕ್ಲಿನ್, ಜಾಕೋಬ್, ಜಾನ್ ರಾಬರ್ಟ್, ಸುಮನ್ ಮತ್ತು ರಾಘ ಎಂಬುವವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. <br /> <br /> ಫ್ರಾಂಕ್ಲಿನ್ ತನ್ನ ನಾಲ್ಕು ಮಂದಿ ಸ್ನೇಹಿತರನ್ನು ರಾತ್ರಿ 9ರ ಸುಮಾರಿಗೆ ಭದ್ರಪ್ಪ ಬಡಾವಣೆಯ ಬಾಲಾಜಿ ಬಾರ್ಗೆ ಕರೆದೊಯ್ದಿದ್ದಾನೆ. ಬಾರ್ ಸಿಬ್ಬಂದಿ ಆತನಿಗೆ ರೂ 900 ಮೊತ್ತದ ಬಿಲ್ ನೀಡಿದಾಗ ಆ ಮೊತ್ತವನ್ನು ನೀಡಲು ನಿರಾಕರಿಸಿ ಬಾರ್ ಮಾಲೀಕರೊಂದಿಗೆ ಜಗಳಕ್ಕಿಳಿದಿದ್ದಾನೆ. ಆಗ ಸಿಬ್ಬಂದಿ ಇವರನ್ನು ಸುತ್ತುವರೆದಿದ್ದಾರೆ. ತನ್ನ ಸಹೋದರ ಹಾಗೂ ಸ್ನೇಹಿತರೊಂದಿಗೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>