ಸರ್ಕಾರದ ಬೇಡಿಕೆಯನ್ನು ತಿರಸ್ಕರಿಸಿದ ನ್ಯಾ.ಕೇಹರ್, ‘ಭೂ ಹಗರಣದ ತನಿಖೆಗೆ ಈಗಾಗಲೇ ತಡೆಯಾಜ್ಞೆ ನೀಡಲಾಗಿದೆ. ದೂರು ಸ್ವೀಕರಿಸುವುದೂ ಸಾಕ್ಷ್ಯ ಸಂಗ್ರಹಿಸುವುದಕ್ಕೆ ಸಮಾನ. ಆದ್ದರಿಂದ ತಡೆಯಾಜ್ಞೆ ನಡುವೆ ದೂರು ಸ್ವೀಕರಿಸುವುದಕ್ಕೆ ಅವಕಾಶ ನೀಡಲಾಗದು’ ಎಂದರು. ಅರ್ಜಿಯ ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿದ ನ್ಯಾಯಾಲಯ, ಅಲ್ಲಿಯವರೆಗೂ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶ ನೀಡಿತು.