ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ, ‘ಕ್ರಿಮಿನಲ್ ಪ್ರಕರಣಗಳ ತನಿಖೆಗಳಿಗಾಗಿಯೇ ಸಿಐಡಿ ರಚಿಸಲಾಗಿದೆ. ಹಾಗಾಗಿ ಅಜಿತಾಬ್ ಪ್ರಕರಣವನ್ನೂ ಸಿಐಡಿಗೆ ವಹಿಸಲು ನಗರ ಪೊಲೀಸರು ಕಮಿಷನರ್ ನಿರ್ಧರಿಸಿದ್ದಾರೆ. ಅಂತೆಯೇ ಮುಂಬರುವ ವಿಧಾನಸಭೆ ಚುನಾವಣೆಯ ಕಾರ್ಯ ನಿರ್ವಹಣೆಗೂ ಪೊಲೀಸರು ಬೇಕಾಗಿದ್ದಾರೆ. ಹೀಗಾಗಿ ಸಿಐಡಿಗೆ ಪ್ರಕರಣ ವರ್ಗಾಯಿಸಲು ಅನುಮತಿ ನೀಡಬೇಕು’ ಎಂದು ಕೋರಿದರು.