<p><strong>ಬೆಂಗಳೂರು: </strong>`ತಾಂತ್ರಿಕ ಶಿಕ್ಷಣ ಮಂಡಳಿಯ ಅವೈಜ್ಞಾನಿಕ ನೀತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ~ ಎಂದು ಆರೋಪಿಸಿ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟದ (ಎಸ್ಎಫ್ಐ) ಕಾರ್ಯಕರ್ತರು ಪುರಭವನದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.<br /> <br /> ಪುರಭವನದಿಂದ ಬನ್ನಪ್ಪ ಪಾರ್ಕ್ ಕಡೆ ಪ್ರತಿಭಟನಾ ಜಾಥಾ ನಡೆಸಿದ ಕಾರ್ಯಕರ್ತರನ್ನು ಹಲಸೂರು ಗೇಟ್ ಪೊಲೀಸರು ಅಡ್ಡಗಟ್ಟಿದರು. ಈ ವೇಳೆ ಕೆಲವರು ಬಿಎಂಟಿಸಿ ಬಸ್ಗಳ ಮೇಲೆ ಕಲ್ಲು ತೂರಾಟ ಮಾಡಿದ್ದರಿಂದ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿ, ಒಂಬತ್ತು ಜನರನ್ನು ಬಂಧಿಸಿದರು. ನಂತರ ಬಿಡುಗಡೆ ಮಾಡಲಾಯಿತು.<br /> <br /> `ರಾಜ್ಯದಲ್ಲಿ ಶೇ 63ರಷ್ಟು ಡಿಪ್ಲೊಮಾ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಇದಕ್ಕೆ ತಾಂತ್ರಿಕ ಶಿಕ್ಷಣ ಮಂಡಳಿಯ ನೀತಿಗಳೇ ಕಾರಣ. ಮಂಡಳಿಯು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮವನ್ನು ರೂಪಿಸಿದೆ. ಆದರೆ, ಆ ಪಠ್ಯಕ್ರಮಕ್ಕೆ ಅನುಗುಣವಾಗಿ ಭೋದನೆ ಮಾಡುವ ಅರ್ಹ ಉಪನ್ಯಾಸಕರ ಕೊರತೆಯಿದೆ. <br /> <br /> ರಾಜ್ಯದಲ್ಲಿ ಪಾಲಿಟೆಕ್ನಿಕ್ ಶಿಕ್ಷಣ ಸಂಪೂರ್ಣವಾಗಿ ಮಾರಾಟವಾಗುತ್ತಿದೆ. ಅಲ್ಲದೆ, ವಿಪರೀತ ಶುಲ್ಕ ವಸೂಲಿ, ಆಂತರಿಕ ಪರೀಕ್ಷೆಯ ಅಂಕ ನೀಡಿಕೆ, ಹಾಜರಾತಿ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ~ ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಅನಂತ್ ನಾಯಕ್ ಅರೋಪಿಸಿದರು.<br /> <br /> `ಕೆಲವು ಡಿಪ್ಲೊಮಾ ಕಾಲೇಜುಗಳು ಪ್ರಯೋಗಾಲಯ, ಗ್ರಂಥಾಲಯ ಸೇರಿದಂತೆ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ತರಗತಿಗಳು ಮುಗಿಯುವ ಮುನ್ನವೇ ಪರೀಕ್ಷೆಗಳನ್ನು ನಡೆಸುವುದು, ಆರು ತಿಂಗಳ ಕೋರ್ಸ್ಗಳನ್ನು ಎರಡೇ ತಿಂಗಳಿಗೆ ಮುಗಿಸುವುದು ಹೀಗೆ ತಾಂತ್ರಿಕ ಶಿಕ್ಷಣ ಮಂಡಳಿಯ ಅವೈಜ್ಞಾನಿಕ ನೀತಿಗಳಿಂದ ಡಿಪ್ಲೊಮಾ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ~ ಎಂದರು.<br /> <br /> ಹೋರಾಟವನ್ನು ಹಾಳು ಮಾಡುವ ದೃಷ್ಟಿಯಿಂದ ಯಾರೊ ಕಿಡಿಗೇಡಿಗಳು ಬಸ್ಗಳ ಮೇಲೆ ಕಲ್ಲು ತೂರಾಟ ಮಾಡಿದರು. ಆದರೆ, ಪೊಲೀಸರು ಏಕಾಏಕಿ ನಮ್ಮ ಮೇಲೆ ಲಾಠಿ ಪ್ರಹಾರ ಮಾಡಿದರು. ಪೊಲೀಸರ ದೌರ್ಜನ್ಯವನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಾಕಾರರು ಪುರಭವನಕ್ಕೆ ಹಿಂದಿರುಗಿ ಪ್ರತಿಭಟನೆ ಮುಂದುವರಿಸಿದರು.<br /> <br /> `ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಎರಡು ದಿನಗಳಲ್ಲಿ ಸಭೆ ನಡೆಸಿ ಸಮಸ್ಯೆಗಳನ್ನು ಚರ್ಚಿಸುವುದಾಗಿ ಅವರು ಹೇಳಿದ್ದಾರೆ. ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಮುಂದುವರಿಸುತ್ತೇವೆ~ ಎಂದು ಸಂಘಟನೆಯ ಕಾರ್ಯದರ್ಶಿ ಹುಳ್ಳಿ ಉಮೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ತಾಂತ್ರಿಕ ಶಿಕ್ಷಣ ಮಂಡಳಿಯ ಅವೈಜ್ಞಾನಿಕ ನೀತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ~ ಎಂದು ಆರೋಪಿಸಿ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟದ (ಎಸ್ಎಫ್ಐ) ಕಾರ್ಯಕರ್ತರು ಪುರಭವನದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.<br /> <br /> ಪುರಭವನದಿಂದ ಬನ್ನಪ್ಪ ಪಾರ್ಕ್ ಕಡೆ ಪ್ರತಿಭಟನಾ ಜಾಥಾ ನಡೆಸಿದ ಕಾರ್ಯಕರ್ತರನ್ನು ಹಲಸೂರು ಗೇಟ್ ಪೊಲೀಸರು ಅಡ್ಡಗಟ್ಟಿದರು. ಈ ವೇಳೆ ಕೆಲವರು ಬಿಎಂಟಿಸಿ ಬಸ್ಗಳ ಮೇಲೆ ಕಲ್ಲು ತೂರಾಟ ಮಾಡಿದ್ದರಿಂದ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿ, ಒಂಬತ್ತು ಜನರನ್ನು ಬಂಧಿಸಿದರು. ನಂತರ ಬಿಡುಗಡೆ ಮಾಡಲಾಯಿತು.<br /> <br /> `ರಾಜ್ಯದಲ್ಲಿ ಶೇ 63ರಷ್ಟು ಡಿಪ್ಲೊಮಾ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಇದಕ್ಕೆ ತಾಂತ್ರಿಕ ಶಿಕ್ಷಣ ಮಂಡಳಿಯ ನೀತಿಗಳೇ ಕಾರಣ. ಮಂಡಳಿಯು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮವನ್ನು ರೂಪಿಸಿದೆ. ಆದರೆ, ಆ ಪಠ್ಯಕ್ರಮಕ್ಕೆ ಅನುಗುಣವಾಗಿ ಭೋದನೆ ಮಾಡುವ ಅರ್ಹ ಉಪನ್ಯಾಸಕರ ಕೊರತೆಯಿದೆ. <br /> <br /> ರಾಜ್ಯದಲ್ಲಿ ಪಾಲಿಟೆಕ್ನಿಕ್ ಶಿಕ್ಷಣ ಸಂಪೂರ್ಣವಾಗಿ ಮಾರಾಟವಾಗುತ್ತಿದೆ. ಅಲ್ಲದೆ, ವಿಪರೀತ ಶುಲ್ಕ ವಸೂಲಿ, ಆಂತರಿಕ ಪರೀಕ್ಷೆಯ ಅಂಕ ನೀಡಿಕೆ, ಹಾಜರಾತಿ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ~ ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಅನಂತ್ ನಾಯಕ್ ಅರೋಪಿಸಿದರು.<br /> <br /> `ಕೆಲವು ಡಿಪ್ಲೊಮಾ ಕಾಲೇಜುಗಳು ಪ್ರಯೋಗಾಲಯ, ಗ್ರಂಥಾಲಯ ಸೇರಿದಂತೆ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ತರಗತಿಗಳು ಮುಗಿಯುವ ಮುನ್ನವೇ ಪರೀಕ್ಷೆಗಳನ್ನು ನಡೆಸುವುದು, ಆರು ತಿಂಗಳ ಕೋರ್ಸ್ಗಳನ್ನು ಎರಡೇ ತಿಂಗಳಿಗೆ ಮುಗಿಸುವುದು ಹೀಗೆ ತಾಂತ್ರಿಕ ಶಿಕ್ಷಣ ಮಂಡಳಿಯ ಅವೈಜ್ಞಾನಿಕ ನೀತಿಗಳಿಂದ ಡಿಪ್ಲೊಮಾ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ~ ಎಂದರು.<br /> <br /> ಹೋರಾಟವನ್ನು ಹಾಳು ಮಾಡುವ ದೃಷ್ಟಿಯಿಂದ ಯಾರೊ ಕಿಡಿಗೇಡಿಗಳು ಬಸ್ಗಳ ಮೇಲೆ ಕಲ್ಲು ತೂರಾಟ ಮಾಡಿದರು. ಆದರೆ, ಪೊಲೀಸರು ಏಕಾಏಕಿ ನಮ್ಮ ಮೇಲೆ ಲಾಠಿ ಪ್ರಹಾರ ಮಾಡಿದರು. ಪೊಲೀಸರ ದೌರ್ಜನ್ಯವನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಾಕಾರರು ಪುರಭವನಕ್ಕೆ ಹಿಂದಿರುಗಿ ಪ್ರತಿಭಟನೆ ಮುಂದುವರಿಸಿದರು.<br /> <br /> `ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಎರಡು ದಿನಗಳಲ್ಲಿ ಸಭೆ ನಡೆಸಿ ಸಮಸ್ಯೆಗಳನ್ನು ಚರ್ಚಿಸುವುದಾಗಿ ಅವರು ಹೇಳಿದ್ದಾರೆ. ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಮುಂದುವರಿಸುತ್ತೇವೆ~ ಎಂದು ಸಂಘಟನೆಯ ಕಾರ್ಯದರ್ಶಿ ಹುಳ್ಳಿ ಉಮೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>