<p><strong>ಬೆಂಗಳೂರು:</strong> ಪ್ರಕಾಶನಗರದ 7ನೇ ಮುಖ್ಯರಸ್ತೆಯ ನಿವಾಸಿ ಸಾವಿತ್ರಮ್ಮ (60) ಹಾಗೂ ಅವರ ಮಗಳು ಮಂಜುಳಾ (37) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತರ ಮನೆಯಿಂದ ಸೋಮವಾರ ಬೆಳಿಗ್ಗೆ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ರಾಜಾಜಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು, ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ವಿಷಯ ಗೊತ್ತಾಗಿದೆ.</p>.<p>ಸಾವಿತ್ರಮ್ಮರ ಪತಿ 2004ರಲ್ಲಿ ತೀರಿಕೊಂಡಿದ್ದಾರೆ. ಮಗ ಸಹ ಅವರಿಂದ ಪ್ರತ್ಯೇಕವಾಗಿ ಕೆಂಗೇರಿಯಲ್ಲಿ ವಾಸವಿದ್ದಾರೆ. ಸ್ವಂತ ಮನೆಯಲ್ಲಿ ಅವರು ಮಗಳ ಜತೆ ನೆಲೆಸಿದ್ದರು. ಮನೆ ಎದುರಿನ ಎರಡು ಮಳಿಗೆಗಳನ್ನು ಬಾಡಿಗೆಗೆ ಕೊಟ್ಟಿದ್ದರು. ಬಾಡಿಗೆಯಿಂದ ಬರುವ ಹಣದಲ್ಲೇ ಜೀವನ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದರು.</p>.<p>37 ವರ್ಷವಾದರೂ ಮಗಳಿಗೆ ಮದುವೆ ಮಾಡಲು ಆಗಿಲ್ಲ ಎಂದು ತಾಯಿ ನೊಂದಿದ್ದರು. ಅದೇ ಕಾರಣಕ್ಕೆ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದಾಗಿ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.</p>.<p>‘ಮನೆಯ ಮಲಗುವ ಕೋಣೆಯಲ್ಲಿರುವ ಕಬ್ಬಿಣದ ರಾಡ್ಗೆ ಇಬ್ಬರೂ ಪ್ರತ್ಯೇಕವಾಗಿ ಸೀರೆಯಿಂದ ನೇಣು ಹಾಕಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿರುವ ಶಂಕೆ ಇದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ನಿಖರ ಮಾಹಿತಿ ಸಿಗಲಿದೆ’ ಎಂದರು.</p>.<p>10 ವರ್ಷಗಳ ಹಿಂದೆಯೇ ತಾಯಿಯನ್ನು ತೊರೆದಿದ್ದ ಮಗ, ಪ್ರತ್ಯೇಕವಾಗಿ ವಾಸವಿದ್ದದ್ದು ಏಕೆ? ಹಾಗೂ ತಾಯಿ ಮತ್ತು ಮಗನ ನಡುವೆ ಜಗಳವೇನಾದರೂ ಆಗಿತ್ತಾ? ಎಂಬುದನ್ನು ತಿಳಿದುಕೊಳ್ಳುತ್ತಿರುವ ಪೊಲೀಸರು, ಆ ಸಂಬಂಧ ಮಗನ ಹೇಳಿಕೆ ಪಡೆದುಕೊಂಡಿದ್ದಾರೆ.</p>.<p>‘ಆಗಾಗ ತಾಯಿ, ಸಹೋದರಿಯನ್ನು ಭೇಟಿಯಾಗುತ್ತಿದೆ. ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ನನಗೂ ನೋವನ್ನುಂಟು ಮಾಡಿದೆ. ಕಾರಣವೇನು ಎಂಬುದನ್ನು ನೀವೇ(ಪೊಲೀಸರು) ಪತ್ತೆ ಹಚ್ಚಬೇಕು’ ಎಂದು ಮಗ ಹೇಳಿರುವುದಾಗಿ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಕಾಶನಗರದ 7ನೇ ಮುಖ್ಯರಸ್ತೆಯ ನಿವಾಸಿ ಸಾವಿತ್ರಮ್ಮ (60) ಹಾಗೂ ಅವರ ಮಗಳು ಮಂಜುಳಾ (37) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತರ ಮನೆಯಿಂದ ಸೋಮವಾರ ಬೆಳಿಗ್ಗೆ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ರಾಜಾಜಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು, ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ವಿಷಯ ಗೊತ್ತಾಗಿದೆ.</p>.<p>ಸಾವಿತ್ರಮ್ಮರ ಪತಿ 2004ರಲ್ಲಿ ತೀರಿಕೊಂಡಿದ್ದಾರೆ. ಮಗ ಸಹ ಅವರಿಂದ ಪ್ರತ್ಯೇಕವಾಗಿ ಕೆಂಗೇರಿಯಲ್ಲಿ ವಾಸವಿದ್ದಾರೆ. ಸ್ವಂತ ಮನೆಯಲ್ಲಿ ಅವರು ಮಗಳ ಜತೆ ನೆಲೆಸಿದ್ದರು. ಮನೆ ಎದುರಿನ ಎರಡು ಮಳಿಗೆಗಳನ್ನು ಬಾಡಿಗೆಗೆ ಕೊಟ್ಟಿದ್ದರು. ಬಾಡಿಗೆಯಿಂದ ಬರುವ ಹಣದಲ್ಲೇ ಜೀವನ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದರು.</p>.<p>37 ವರ್ಷವಾದರೂ ಮಗಳಿಗೆ ಮದುವೆ ಮಾಡಲು ಆಗಿಲ್ಲ ಎಂದು ತಾಯಿ ನೊಂದಿದ್ದರು. ಅದೇ ಕಾರಣಕ್ಕೆ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದಾಗಿ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.</p>.<p>‘ಮನೆಯ ಮಲಗುವ ಕೋಣೆಯಲ್ಲಿರುವ ಕಬ್ಬಿಣದ ರಾಡ್ಗೆ ಇಬ್ಬರೂ ಪ್ರತ್ಯೇಕವಾಗಿ ಸೀರೆಯಿಂದ ನೇಣು ಹಾಕಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿರುವ ಶಂಕೆ ಇದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ನಿಖರ ಮಾಹಿತಿ ಸಿಗಲಿದೆ’ ಎಂದರು.</p>.<p>10 ವರ್ಷಗಳ ಹಿಂದೆಯೇ ತಾಯಿಯನ್ನು ತೊರೆದಿದ್ದ ಮಗ, ಪ್ರತ್ಯೇಕವಾಗಿ ವಾಸವಿದ್ದದ್ದು ಏಕೆ? ಹಾಗೂ ತಾಯಿ ಮತ್ತು ಮಗನ ನಡುವೆ ಜಗಳವೇನಾದರೂ ಆಗಿತ್ತಾ? ಎಂಬುದನ್ನು ತಿಳಿದುಕೊಳ್ಳುತ್ತಿರುವ ಪೊಲೀಸರು, ಆ ಸಂಬಂಧ ಮಗನ ಹೇಳಿಕೆ ಪಡೆದುಕೊಂಡಿದ್ದಾರೆ.</p>.<p>‘ಆಗಾಗ ತಾಯಿ, ಸಹೋದರಿಯನ್ನು ಭೇಟಿಯಾಗುತ್ತಿದೆ. ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ನನಗೂ ನೋವನ್ನುಂಟು ಮಾಡಿದೆ. ಕಾರಣವೇನು ಎಂಬುದನ್ನು ನೀವೇ(ಪೊಲೀಸರು) ಪತ್ತೆ ಹಚ್ಚಬೇಕು’ ಎಂದು ಮಗ ಹೇಳಿರುವುದಾಗಿ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>