<p><strong>ಬೆಂಗಳೂರು:</strong> ಮೂರು ತಿಂಗಳಿನಿಂದ ಗೃಹಬಂಧನದಲ್ಲಿದ್ದ 75 ವರ್ಷದ ಮುನಿಯಮ್ಮ ಅವರನ್ನು ಮಾರತ್ತಹಳ್ಳಿ ಪೊಲೀಸರು ಗುರುವಾರ ಬಂಧಮುಕ್ತಗೊಳಿಸಿದರು.</p>.<p>ಕಾಡುಬೀಸನಹಳ್ಳಿಯ ಹಳೆ ಮನೆಯೊಂದರಲ್ಲಿ ಅವರನ್ನು ಮಗನೇ ಕೂಡಿ ಹಾಕಿದ್ದ. ಗುರುವಾರ ಬೆಳಿಗ್ಗೆ ಮುನಿಯಮ್ಮ ಊಟ–ನೀರು ಕೊಡುವಂತೆ ದಾರಿಹೋಕರನ್ನು ಕಿಟಕಿಯಿಂದಲೇ ಕೇಳುತ್ತಿದ್ದರು. ಅದನ್ನು ನೋಡಿ ಯುವತಿಯೊಬ್ಬರು ಮಾಧ್ಯಮ ಪ್ರತಿನಿಧಿಗಳಿಗೆ ವಿಷಯ ತಿಳಿಸಿದ್ದರು.</p>.<p>ಆ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಹೊಯ್ಸಳ ಪೊಲೀಸರು, ಅವರನ್ನು ಹೊರಗೆ ಕರೆದುಕೊಂಡು ಬಂದರು. ನಂತರ ಹೋಟೆಲ್ನಲ್ಲಿ ಊಟ ಮಾಡಿಸಿ ಠಾಣೆಗೆ ಕರೆದೊಯ್ದರು.</p>.<p>ಮಗನನ್ನು ಕರೆಸಿ ವಿಚಾರಣೆ ನಡೆಸಿದಾಗ, ‘ತಾಯಿ ಬುದ್ಧಿಮಾಂದ್ಯರಂತೆ ವರ್ತಿಸುತ್ತಿದ್ದರು. ಹೇಳದೆ–ಕೇಳದೆ ಮನೆಯಿಂದ ಹೊರಗೆ ಹೋಗಿ ಬಿಡುತ್ತಿದ್ದರು. ಪ್ರತಿದಿನ ಅವರನ್ನು ಹುಡುಕುವುದೇ ಕೆಲಸವಾಗಿತ್ತು. ಹೀಗಾಗಿ, ಮನೆಯಲ್ಲಿ ಕೂಡಿಟ್ಟಿದ್ದೆ. ಪ್ರತಿದಿನ ನಾನೇ ಊಟ ಕೊಟ್ಟು ಬರುತ್ತಿದ್ದೆ’ ಎಂದು ಹೇಳಿಕೆ ಕೊಟ್ಟಿದ್ದಾನೆ. ಆಗ ಪೊಲೀಸರು, ‘ಇನ್ನೊಮ್ಮೆ ಈ ರೀತಿ ನಡೆದುಕೊಂಡರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ’ ಎಂದು ಎಚ್ಚರಿಸಿ ತಾಯಿಯನ್ನು ಆತನ ಜತೆ ಕಳುಹಿಸಿಕೊಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೂರು ತಿಂಗಳಿನಿಂದ ಗೃಹಬಂಧನದಲ್ಲಿದ್ದ 75 ವರ್ಷದ ಮುನಿಯಮ್ಮ ಅವರನ್ನು ಮಾರತ್ತಹಳ್ಳಿ ಪೊಲೀಸರು ಗುರುವಾರ ಬಂಧಮುಕ್ತಗೊಳಿಸಿದರು.</p>.<p>ಕಾಡುಬೀಸನಹಳ್ಳಿಯ ಹಳೆ ಮನೆಯೊಂದರಲ್ಲಿ ಅವರನ್ನು ಮಗನೇ ಕೂಡಿ ಹಾಕಿದ್ದ. ಗುರುವಾರ ಬೆಳಿಗ್ಗೆ ಮುನಿಯಮ್ಮ ಊಟ–ನೀರು ಕೊಡುವಂತೆ ದಾರಿಹೋಕರನ್ನು ಕಿಟಕಿಯಿಂದಲೇ ಕೇಳುತ್ತಿದ್ದರು. ಅದನ್ನು ನೋಡಿ ಯುವತಿಯೊಬ್ಬರು ಮಾಧ್ಯಮ ಪ್ರತಿನಿಧಿಗಳಿಗೆ ವಿಷಯ ತಿಳಿಸಿದ್ದರು.</p>.<p>ಆ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಹೊಯ್ಸಳ ಪೊಲೀಸರು, ಅವರನ್ನು ಹೊರಗೆ ಕರೆದುಕೊಂಡು ಬಂದರು. ನಂತರ ಹೋಟೆಲ್ನಲ್ಲಿ ಊಟ ಮಾಡಿಸಿ ಠಾಣೆಗೆ ಕರೆದೊಯ್ದರು.</p>.<p>ಮಗನನ್ನು ಕರೆಸಿ ವಿಚಾರಣೆ ನಡೆಸಿದಾಗ, ‘ತಾಯಿ ಬುದ್ಧಿಮಾಂದ್ಯರಂತೆ ವರ್ತಿಸುತ್ತಿದ್ದರು. ಹೇಳದೆ–ಕೇಳದೆ ಮನೆಯಿಂದ ಹೊರಗೆ ಹೋಗಿ ಬಿಡುತ್ತಿದ್ದರು. ಪ್ರತಿದಿನ ಅವರನ್ನು ಹುಡುಕುವುದೇ ಕೆಲಸವಾಗಿತ್ತು. ಹೀಗಾಗಿ, ಮನೆಯಲ್ಲಿ ಕೂಡಿಟ್ಟಿದ್ದೆ. ಪ್ರತಿದಿನ ನಾನೇ ಊಟ ಕೊಟ್ಟು ಬರುತ್ತಿದ್ದೆ’ ಎಂದು ಹೇಳಿಕೆ ಕೊಟ್ಟಿದ್ದಾನೆ. ಆಗ ಪೊಲೀಸರು, ‘ಇನ್ನೊಮ್ಮೆ ಈ ರೀತಿ ನಡೆದುಕೊಂಡರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ’ ಎಂದು ಎಚ್ಚರಿಸಿ ತಾಯಿಯನ್ನು ಆತನ ಜತೆ ಕಳುಹಿಸಿಕೊಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>