<p><strong>ಬೆಂಗಳೂರು:</strong> ‘ನಗರದಲ್ಲಿನ ಸಂಚಾರದಟ್ಟಣೆ ನಿಯಂತ್ರಿಸಲು ಹಾಗೂ ವಾಯುಮಾಲಿನ್ಯ ತಗ್ಗಿಸಲು ಪ್ರತಿ ತಿಂಗಳ ಎರಡನೇ ಭಾನುವಾರ ‘ಸಂಚಾರ ಮುಕ್ತ ದಿನ’ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದರು.</p>.<p>ಯಲಹಂಕ ಸಮೀಪದ ಸಿಂಗನಾಯಕನ ಹಳ್ಳಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮುಂದೊಂದು ದಿನ ಅಂತಹ ಸ್ಥಿತಿ ನಿರ್ಮಾಣ ಆಗದಿರಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ಸಂಚಾರಮುಕ್ತ ದಿನದಂದು ಎಲ್ಲರೂ ಬಿಎಂಟಿಸಿ ಬಸ್ ಬಳಸಬೇಕು. ಇದರಿಂದ ಉತ್ತಮಗಾಳಿ ಸೇವಿಸಿ, ಆರೋಗ್ಯಕರ ಜೀವನ ನಡೆಸಲು ಸಹಕಾರಿ ಯಾಗುತ್ತದೆ. ಇದರ ಅನುಷ್ಟಾನಕ್ಕೆ ಸಂಘ–ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ರಾಜ್ಯದಲ್ಲಿರುವ 5 ಲಕ್ಷ ಟ್ರ್ಯಾಕ್ಟರ್ಗಳ ಪೈಕಿ 2 ಲಕ್ಷ ಚಾಲಕರು ಮಾತ್ರ ಚಾಲನಾ ಪರವಾನಗಿ ಹೊಂದಿದ್ದಾರೆ. ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದೆ. ಹಾಗಾಗಿ ‘ರೈತಸಾರಥಿ’ ಯೋಜನೆಯಡಿ ಎಲ್ಲಾ ಚಾಲಕರಿಗೂ ತರಬೇತಿ ನೀಡಿ, ಚಾಲನಾ ಪರವಾನಗಿ ನೀಡಲು ಚಿಂತಿಸಲಾಗಿದೆ’ ಎಂದು ತಿಳಿಸಿದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್, ‘ಈ ಭಾಗದಲ್ಲಿ 44 ಬಸ್ಗಳ ಸೇವೆ ಸ್ಥಗಿತಗೊಳಿಸಿರುವುದರಿಂದ ಜನರಿಗೆ ತೊಂದರೆ ಉಂಟಾಗಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಪ್ರಯಾಣಿಕರ ಸಂಖ್ಯೆ ಕಡಿಮೆಯಿದ್ದು, ಹಣಸಂಗ್ರಹಣೆ ಆಗುತ್ತಿಲ್ಲ ಎನ್ನುತ್ತಾರೆ. ಮತ್ತೊಮ್ಮೆ ಪರಿಶೀಲಿಸಿ, ಅಗತ್ಯವಿರುವ ಕಡೆಗಳಿಗೆ ಬಸ್ಸಂಚಾರ ಆರಂಭಿಸಬೇಕು’ ಎಂದು ಸೂಚಿಸಿದರು.</p>.<p>‘ಚಾಲನಾ ಪಥ ನಿರ್ಮಾಣಕ್ಕಾಗಿ 3 ಎಕರೆ ಜಾಗವನ್ನು ನೀಡಬೇಕೆಂದು ಸಾರಿಗೆ ಇಲಾಖೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ. ಈ ಭಾಗದಲ್ಲಿ ಸರ್ಕಾರಿ ಜಾಗ ವಿದ್ದು, ಕಂದಾಯ ಅಧಿಕಾರಿಗಳಿಂದ ಸಮೀಕ್ಷೆ ಕಾರ್ಯ ನಡೆಸಿ, ಭೂಮಿ ನೀಡುತ್ತೇವೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಗರದಲ್ಲಿನ ಸಂಚಾರದಟ್ಟಣೆ ನಿಯಂತ್ರಿಸಲು ಹಾಗೂ ವಾಯುಮಾಲಿನ್ಯ ತಗ್ಗಿಸಲು ಪ್ರತಿ ತಿಂಗಳ ಎರಡನೇ ಭಾನುವಾರ ‘ಸಂಚಾರ ಮುಕ್ತ ದಿನ’ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದರು.</p>.<p>ಯಲಹಂಕ ಸಮೀಪದ ಸಿಂಗನಾಯಕನ ಹಳ್ಳಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮುಂದೊಂದು ದಿನ ಅಂತಹ ಸ್ಥಿತಿ ನಿರ್ಮಾಣ ಆಗದಿರಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ಸಂಚಾರಮುಕ್ತ ದಿನದಂದು ಎಲ್ಲರೂ ಬಿಎಂಟಿಸಿ ಬಸ್ ಬಳಸಬೇಕು. ಇದರಿಂದ ಉತ್ತಮಗಾಳಿ ಸೇವಿಸಿ, ಆರೋಗ್ಯಕರ ಜೀವನ ನಡೆಸಲು ಸಹಕಾರಿ ಯಾಗುತ್ತದೆ. ಇದರ ಅನುಷ್ಟಾನಕ್ಕೆ ಸಂಘ–ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ರಾಜ್ಯದಲ್ಲಿರುವ 5 ಲಕ್ಷ ಟ್ರ್ಯಾಕ್ಟರ್ಗಳ ಪೈಕಿ 2 ಲಕ್ಷ ಚಾಲಕರು ಮಾತ್ರ ಚಾಲನಾ ಪರವಾನಗಿ ಹೊಂದಿದ್ದಾರೆ. ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದೆ. ಹಾಗಾಗಿ ‘ರೈತಸಾರಥಿ’ ಯೋಜನೆಯಡಿ ಎಲ್ಲಾ ಚಾಲಕರಿಗೂ ತರಬೇತಿ ನೀಡಿ, ಚಾಲನಾ ಪರವಾನಗಿ ನೀಡಲು ಚಿಂತಿಸಲಾಗಿದೆ’ ಎಂದು ತಿಳಿಸಿದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್, ‘ಈ ಭಾಗದಲ್ಲಿ 44 ಬಸ್ಗಳ ಸೇವೆ ಸ್ಥಗಿತಗೊಳಿಸಿರುವುದರಿಂದ ಜನರಿಗೆ ತೊಂದರೆ ಉಂಟಾಗಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಪ್ರಯಾಣಿಕರ ಸಂಖ್ಯೆ ಕಡಿಮೆಯಿದ್ದು, ಹಣಸಂಗ್ರಹಣೆ ಆಗುತ್ತಿಲ್ಲ ಎನ್ನುತ್ತಾರೆ. ಮತ್ತೊಮ್ಮೆ ಪರಿಶೀಲಿಸಿ, ಅಗತ್ಯವಿರುವ ಕಡೆಗಳಿಗೆ ಬಸ್ಸಂಚಾರ ಆರಂಭಿಸಬೇಕು’ ಎಂದು ಸೂಚಿಸಿದರು.</p>.<p>‘ಚಾಲನಾ ಪಥ ನಿರ್ಮಾಣಕ್ಕಾಗಿ 3 ಎಕರೆ ಜಾಗವನ್ನು ನೀಡಬೇಕೆಂದು ಸಾರಿಗೆ ಇಲಾಖೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ. ಈ ಭಾಗದಲ್ಲಿ ಸರ್ಕಾರಿ ಜಾಗ ವಿದ್ದು, ಕಂದಾಯ ಅಧಿಕಾರಿಗಳಿಂದ ಸಮೀಕ್ಷೆ ಕಾರ್ಯ ನಡೆಸಿ, ಭೂಮಿ ನೀಡುತ್ತೇವೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>