<p>ಬೆಂಗಳೂರು</p>.<p><span lang="EN">: </span><span lang="KN">ಬಿಬಿಎಂಪಿ ವ್ಯಾಪ್ತಿಯಲ್ಲಿ 2011-12ನೇ ಸಾಲಿನಲ್ಲಿ ಆಸ್ತಿ ತೆರಿಗೆ ದರದಲ್ಲಿ ಹೆಚ್ಚಳವಾಗುವುದಿಲ್ಲ. ಪ್ರತಿ ಮೂರು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆ ಪ್ರಮಾಣ ಪರಿಷ್ಕರಣೆ ಮಾಡುವ ಬದಲಿಗೆ ಐದು ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡುವ ಸಂಬಂಧ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಪಾಲಿಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.</span></p>.<p>ಸಭೆಯ ಬಳಿಕ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ತೆರಿಗೆ ಮತ್ತು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಎನ್. ಸದಾಶಿವ, ‘2011-12ನೇ ಸಾಲಿನಲ್ಲಿ ಆಸ್ತಿ ತೆರಿಗೆ ಪ್ರಮಾಣದಲ್ಲಿ ಯಾವುದೇ ಹೆಚ್ಚಳ ಮಾಡುವುದಿಲ್ಲ. ಆಸ್ತಿದಾರರು 2010-11ನೇ ಸಾಲಿನಲ್ಲಿ ಪಾವತಿಸಿದ ಮೊತ್ತವನ್ನೇ ಪ್ರಸಕ್ತ ಸಾಲಿನಲ್ಲೂ ಪಾವತಿಸಬಹುದು. ತೆರಿಗೆ ದರ ಪರಿಷ್ಕರಣೆಯನ್ನು ಐದು ವರ್ಷಕ್ಕೊಮ್ಮೆ ಕೈಗೊಳ್ಳುವ ಸಂಬಂಧ ಕಾಯ್ದೆ ತಿದ್ದುಪಡಿ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.</p>.<p>‘ಆಸ್ತಿದಾರರು ಏಪ್ರಿಲ್ 30ರೊಳಗೆ ಪೂರ್ಣ ತೆರಿಗೆ ಮೊತ್ತ ಪಾವತಿಸಿ ಶೇ 5ರಷ್ಟು ರಿಯಾಯ್ತಿ ಪಡೆಯಬಹುದು. ದಂಡ ರಹಿತವಾಗಿ ಅಕ್ಟೋಬರ್ 30ರೊಳಗೆ ತೆರಿಗೆ ಪಾವತಿಸಬಹುದಾಗಿದೆ’ ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು</p>.<p><span lang="EN">: </span><span lang="KN">ಬಿಬಿಎಂಪಿ ವ್ಯಾಪ್ತಿಯಲ್ಲಿ 2011-12ನೇ ಸಾಲಿನಲ್ಲಿ ಆಸ್ತಿ ತೆರಿಗೆ ದರದಲ್ಲಿ ಹೆಚ್ಚಳವಾಗುವುದಿಲ್ಲ. ಪ್ರತಿ ಮೂರು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆ ಪ್ರಮಾಣ ಪರಿಷ್ಕರಣೆ ಮಾಡುವ ಬದಲಿಗೆ ಐದು ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡುವ ಸಂಬಂಧ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಪಾಲಿಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.</span></p>.<p>ಸಭೆಯ ಬಳಿಕ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ತೆರಿಗೆ ಮತ್ತು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಎನ್. ಸದಾಶಿವ, ‘2011-12ನೇ ಸಾಲಿನಲ್ಲಿ ಆಸ್ತಿ ತೆರಿಗೆ ಪ್ರಮಾಣದಲ್ಲಿ ಯಾವುದೇ ಹೆಚ್ಚಳ ಮಾಡುವುದಿಲ್ಲ. ಆಸ್ತಿದಾರರು 2010-11ನೇ ಸಾಲಿನಲ್ಲಿ ಪಾವತಿಸಿದ ಮೊತ್ತವನ್ನೇ ಪ್ರಸಕ್ತ ಸಾಲಿನಲ್ಲೂ ಪಾವತಿಸಬಹುದು. ತೆರಿಗೆ ದರ ಪರಿಷ್ಕರಣೆಯನ್ನು ಐದು ವರ್ಷಕ್ಕೊಮ್ಮೆ ಕೈಗೊಳ್ಳುವ ಸಂಬಂಧ ಕಾಯ್ದೆ ತಿದ್ದುಪಡಿ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.</p>.<p>‘ಆಸ್ತಿದಾರರು ಏಪ್ರಿಲ್ 30ರೊಳಗೆ ಪೂರ್ಣ ತೆರಿಗೆ ಮೊತ್ತ ಪಾವತಿಸಿ ಶೇ 5ರಷ್ಟು ರಿಯಾಯ್ತಿ ಪಡೆಯಬಹುದು. ದಂಡ ರಹಿತವಾಗಿ ಅಕ್ಟೋಬರ್ 30ರೊಳಗೆ ತೆರಿಗೆ ಪಾವತಿಸಬಹುದಾಗಿದೆ’ ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>