‘ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂದು ಹೇಳಿ ದಲಿತರ ಮತ ಕೇಳುವ ಕಾಂಗ್ರೆಸ್ ಪಕ್ಷ ಇದುವರೆಗೂ ಮಾತು ಉಳಿಸಿಕೊಂಡಿಲ್ಲ. ಮತ್ತೆ ಆಮಿಷ ಒಡ್ಡಿ ದಲಿತರ ಮತ ಕೇಳಲು ಬಂದಿದ್ದಾರೆ. ಶ್ರೀಮಂತರು ಶ್ರೀಮಂತರಾಗಿ, ಬಡವರು ಬಡವರಾಗಿಯೇ ಉಳಿಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಕೂಡ ಹಿಂದುಳಿದ ವರ್ಗಗಳ ಪರವಾಗಿ ನಿಂತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.