ಮುಖ್ಯಮಂತ್ರಿ ಅವರ ನಗರೋತ್ಥಾನ ಅನುದಾನದಡಿ ಈ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲಾಗಿತ್ತು. ಎಂ.ವೆಂಕಟರಾವ್ ಇನ್ಫ್ರಾ ಪ್ರಾಜೆಕ್ಟ್ ಕಂಪನಿಯು ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿತ್ತು. 2015ರ ಸೆಪ್ಟೆಂಬರ್ 1ರಂದು ಕಾಮಗಾರಿಗೆ ಚಾಲನೆ ನೀಡಲಾಗಿತ್ತು. 19 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗಡುವು ವಿಧಿಸಲಾಗಿತ್ತು. ಆದರೆ, ಎರಡೂವರೆ ವರ್ಷಗಳ ಬಳಿಕ ಕಾಮಗಾರಿ ಪೂರ್ಣಗೊಂಡಿದೆ.