<p>ಬೆಂಗಳೂರು: ಆಸ್ತಿ ವಿವಾದದ ದಾವೆಯಲ್ಲಿ ಸೋತ ವೃದ್ಧರೊಬ್ಬರು ನಗರದ ಸಿವಿಲ್ ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. <br /> <br /> ಸುದ್ದಗುಂಟೆಪಾಳ್ಯದ ನಿವಾಸಿಯಾದ ಮುನಿಅಂಜನಪ್ಪ (72) ಆತ್ಮಹತ್ಯೆಗೆ ಯತ್ನಿಸಿದವರು. ಅಗ್ನಿಶಾಮಕ ಇಲಾಖೆಯ ನಿವೃತ್ತ ನೌಕರ ಮುನಿಅಂಜನಪ್ಪ ಮತ್ತು ಇತರರರಿಗೆ ಸರ್ಜಾಪುರದಲ್ಲಿರುವ ಎರಡು ಮುಕ್ಕಾಲು ಎಕರೆ ಜಮೀನಿನ ಒಡೆತನಕ್ಕೆ ಸಂಬಂಧಿಸಿದಂತೆವಿವಾದವಿತ್ತು.<br /> <br /> ಇದು ಒಂದನೇ ತ್ವರಿತ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಪ್ರಕರಣದ ತೀರ್ಪು (ಜ. 29) ಮುನಿಅಂಜನಪ್ಪ ಅವರಿಗೆ ವಿರುದ್ಧವಾಗಿ ಬಂದಿತ್ತು. ಇದರಿಂದ ಬೇಸತ್ತ ಅವರು ನ್ಯಾಯಾಲಯದ ಆವರಣದಲ್ಲಿ ಸೋಮವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು, <br /> <br /> ಅಸ್ವಸ್ಥರಾಗಿದ್ದ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದರು. ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. <br /> ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.<br /> <br /> <strong>ಡಿಆರ್ಎಂನಲ್ಲಿ ಬಾಂಬ್: ದುಷ್ಕರ್ಮಿಗಳಿಂದ ಕರೆ </strong><br /> ನಗರ ರೈಲು ನಿಲ್ದಾಣದ ಪಕ್ಕದಲ್ಲಿರುವ ರೈಲ್ವೆ ಉಪ ಪ್ರಾದೇಶಿಕ ವ್ಯವಸ್ಥಾಪಕರ (ಡಿಆರ್ಎಂ) ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಕರೆ ಮಾಡಿದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.<br /> <br /> ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಬಂದ ಪೊಲೀಸ್ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಒಂದು ತಾಸಿಗೂ ಹೆಚ್ಚು ಕಾಲ ತಪಾಸಣೆ ನಡೆಸಿದರು. ಆದರೆ ಬಾಂಬ್ ಪತ್ತೆಯಾಗಲಿಲ್ಲ.<br /> <br /> ಕಚೇರಿಗೆ ಹನ್ನೊಂದು ಗಂಟೆ ಸುಮಾರಿಗೆ ಕರೆ ಮಾಡಿದ ಕಿಡಿಗೇಡಿಗಳು ‘ಕಚೇರಿಯಲ್ಲಿ ಬಾಂಬ್ ಇಡಲಾಗಿದ್ದು, ಅದು ಸ್ಫೋಟಿಸಲಿದೆ’ ಎಂದು ಹೇಳಿದ್ದಾರೆ. ಈ ರೀತಿ ಎರಡು ಬಾರಿ ಕರೆ ಮಾಡಿದ್ದ ಅವರು ಮೊದಲು ತೆಲುಗು ಅನಂತರ ತಮಿಳು ಭಾಷೆಯಲ್ಲಿ ಮಾತನಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಆಸ್ತಿ ವಿವಾದದ ದಾವೆಯಲ್ಲಿ ಸೋತ ವೃದ್ಧರೊಬ್ಬರು ನಗರದ ಸಿವಿಲ್ ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. <br /> <br /> ಸುದ್ದಗುಂಟೆಪಾಳ್ಯದ ನಿವಾಸಿಯಾದ ಮುನಿಅಂಜನಪ್ಪ (72) ಆತ್ಮಹತ್ಯೆಗೆ ಯತ್ನಿಸಿದವರು. ಅಗ್ನಿಶಾಮಕ ಇಲಾಖೆಯ ನಿವೃತ್ತ ನೌಕರ ಮುನಿಅಂಜನಪ್ಪ ಮತ್ತು ಇತರರರಿಗೆ ಸರ್ಜಾಪುರದಲ್ಲಿರುವ ಎರಡು ಮುಕ್ಕಾಲು ಎಕರೆ ಜಮೀನಿನ ಒಡೆತನಕ್ಕೆ ಸಂಬಂಧಿಸಿದಂತೆವಿವಾದವಿತ್ತು.<br /> <br /> ಇದು ಒಂದನೇ ತ್ವರಿತ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಪ್ರಕರಣದ ತೀರ್ಪು (ಜ. 29) ಮುನಿಅಂಜನಪ್ಪ ಅವರಿಗೆ ವಿರುದ್ಧವಾಗಿ ಬಂದಿತ್ತು. ಇದರಿಂದ ಬೇಸತ್ತ ಅವರು ನ್ಯಾಯಾಲಯದ ಆವರಣದಲ್ಲಿ ಸೋಮವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು, <br /> <br /> ಅಸ್ವಸ್ಥರಾಗಿದ್ದ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದರು. ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. <br /> ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.<br /> <br /> <strong>ಡಿಆರ್ಎಂನಲ್ಲಿ ಬಾಂಬ್: ದುಷ್ಕರ್ಮಿಗಳಿಂದ ಕರೆ </strong><br /> ನಗರ ರೈಲು ನಿಲ್ದಾಣದ ಪಕ್ಕದಲ್ಲಿರುವ ರೈಲ್ವೆ ಉಪ ಪ್ರಾದೇಶಿಕ ವ್ಯವಸ್ಥಾಪಕರ (ಡಿಆರ್ಎಂ) ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಕರೆ ಮಾಡಿದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.<br /> <br /> ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಬಂದ ಪೊಲೀಸ್ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಒಂದು ತಾಸಿಗೂ ಹೆಚ್ಚು ಕಾಲ ತಪಾಸಣೆ ನಡೆಸಿದರು. ಆದರೆ ಬಾಂಬ್ ಪತ್ತೆಯಾಗಲಿಲ್ಲ.<br /> <br /> ಕಚೇರಿಗೆ ಹನ್ನೊಂದು ಗಂಟೆ ಸುಮಾರಿಗೆ ಕರೆ ಮಾಡಿದ ಕಿಡಿಗೇಡಿಗಳು ‘ಕಚೇರಿಯಲ್ಲಿ ಬಾಂಬ್ ಇಡಲಾಗಿದ್ದು, ಅದು ಸ್ಫೋಟಿಸಲಿದೆ’ ಎಂದು ಹೇಳಿದ್ದಾರೆ. ಈ ರೀತಿ ಎರಡು ಬಾರಿ ಕರೆ ಮಾಡಿದ್ದ ಅವರು ಮೊದಲು ತೆಲುಗು ಅನಂತರ ತಮಿಳು ಭಾಷೆಯಲ್ಲಿ ಮಾತನಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>