<p><strong>ಬೆಂಗಳೂರು: </strong>ದೃಷ್ಟಿಮಾಂದ್ಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಎಂಟು ಲಕ್ಷ ರೂಪಾಯಿ ಹಣ ಕಾಯ್ದಿರಿಸುವುದು ಸೇರಿದಂತೆ ಬೆಂಗಳೂರು ವಿಶ್ವವಿದ್ಯಾಲಯವು ಗುರುವಾರ ಕರೆದಿದ್ದ ಸಿಂಡಿಕೇಟ್ ಸಭೆಯಲ್ಲಿ ಈ ಬಾರಿಯ ಆಯವ್ಯಯಕ್ಕೆ ಸಂಬಂಧಿಸಿದಂತೆ ಹಲವು ನಿರ್ಣಯಗಳನ್ನು ತೆಗೆದುಕೊಂಡಿದೆ.<br /> <br /> ಸ್ವಾಮಿ ವಿವೇಕಾನಂದರ 150ನೇ ಜನ್ಮದಿನದ ಅಂಗವಾಗಿ ವಿವಿಯ ಚಟುವಟಿಕೆಗಳನ್ನು ಹೊಸ ಆಯಾಮಗಳಲ್ಲಿ ನಡೆಸಲು ಚಿಂತಿಸಲಾಗಿದೆ ಹಾಗೂ 2012-13ನೇ ಸಾಲಿನಲ್ಲಿ ವಿವಿಯಲ್ಲಿ ಕುಂದು ಕೊರತೆ ಘಟಕ, ಮಾಹಿತಿ ಕೇಂದ್ರ, ಪರೀಕ್ಷಾ ಕೆಲಸದ ಗಣಕೀಕರಣ, ಸ್ಮಾರ್ಟ್ ಕಾರ್ಡ್ ಹಾಗೂ ಈಗಿರುವ ವ್ಯವಸ್ಥೆಯ ಪುನಶ್ಚೇತನಕ್ಕಾಗಿ 8.5 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> ಸರ್ಕಾರದ ಈ ಬಾರಿಯ ಬಜೆಟ್ನಲ್ಲಿ ಯುವಜನ ಮತ್ತು ಸೇವಾ ಇಲಾಖೆಯ ಕಾರ್ಯಕ್ರಮದಲ್ಲಿ ಸೇವಾಧನ ಅಪೇಕ್ಷಿಸಿ, ಕ್ರೀಡಾಪಟುಗಳಿಗಾಗಿ ಹಾಸ್ಟೆಲ್, ಮಲ್ಟಿ ಜಿಮ್, ಕಟ್ಟಡ ನಿರ್ಮಾಣ, ಕ್ರೀಡಾ ತರಬೇತಿ ಮತ್ತು ಇತರೆ ವ್ಯವಸ್ಥೆಗಾಗಿ ರೂ 5 ಕೋಟಿ ಯನ್ನು ಸರ್ಕಾರದಿಂದ ಅಪೇಕ್ಷಿಸಿರುವುದಾಗಿ ವಿವಿಯ ಆಡಳಿತ ವರ್ಗ ಹೇಳಿದೆ.<br /> <br /> ರಾಮನಗರ ಪಿ.ಜಿ ಕೇಂದ್ರ ನಿರ್ಮಾಣ ಮಾಡಲು ರೂ 50 ಲಕ್ಷ ಕಾಯ್ದಿರಿಸಲಾಗಿದ್ದು, ಸ್ಥಳ ಪರಿಶೀಲನೆಗೆ ಈಗಾಗಲೇ ಸಿ.ಕೆ.ಜಗದೀಶ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದೃಷ್ಟಿಮಾಂದ್ಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಎಂಟು ಲಕ್ಷ ರೂಪಾಯಿ ಹಣ ಕಾಯ್ದಿರಿಸುವುದು ಸೇರಿದಂತೆ ಬೆಂಗಳೂರು ವಿಶ್ವವಿದ್ಯಾಲಯವು ಗುರುವಾರ ಕರೆದಿದ್ದ ಸಿಂಡಿಕೇಟ್ ಸಭೆಯಲ್ಲಿ ಈ ಬಾರಿಯ ಆಯವ್ಯಯಕ್ಕೆ ಸಂಬಂಧಿಸಿದಂತೆ ಹಲವು ನಿರ್ಣಯಗಳನ್ನು ತೆಗೆದುಕೊಂಡಿದೆ.<br /> <br /> ಸ್ವಾಮಿ ವಿವೇಕಾನಂದರ 150ನೇ ಜನ್ಮದಿನದ ಅಂಗವಾಗಿ ವಿವಿಯ ಚಟುವಟಿಕೆಗಳನ್ನು ಹೊಸ ಆಯಾಮಗಳಲ್ಲಿ ನಡೆಸಲು ಚಿಂತಿಸಲಾಗಿದೆ ಹಾಗೂ 2012-13ನೇ ಸಾಲಿನಲ್ಲಿ ವಿವಿಯಲ್ಲಿ ಕುಂದು ಕೊರತೆ ಘಟಕ, ಮಾಹಿತಿ ಕೇಂದ್ರ, ಪರೀಕ್ಷಾ ಕೆಲಸದ ಗಣಕೀಕರಣ, ಸ್ಮಾರ್ಟ್ ಕಾರ್ಡ್ ಹಾಗೂ ಈಗಿರುವ ವ್ಯವಸ್ಥೆಯ ಪುನಶ್ಚೇತನಕ್ಕಾಗಿ 8.5 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> ಸರ್ಕಾರದ ಈ ಬಾರಿಯ ಬಜೆಟ್ನಲ್ಲಿ ಯುವಜನ ಮತ್ತು ಸೇವಾ ಇಲಾಖೆಯ ಕಾರ್ಯಕ್ರಮದಲ್ಲಿ ಸೇವಾಧನ ಅಪೇಕ್ಷಿಸಿ, ಕ್ರೀಡಾಪಟುಗಳಿಗಾಗಿ ಹಾಸ್ಟೆಲ್, ಮಲ್ಟಿ ಜಿಮ್, ಕಟ್ಟಡ ನಿರ್ಮಾಣ, ಕ್ರೀಡಾ ತರಬೇತಿ ಮತ್ತು ಇತರೆ ವ್ಯವಸ್ಥೆಗಾಗಿ ರೂ 5 ಕೋಟಿ ಯನ್ನು ಸರ್ಕಾರದಿಂದ ಅಪೇಕ್ಷಿಸಿರುವುದಾಗಿ ವಿವಿಯ ಆಡಳಿತ ವರ್ಗ ಹೇಳಿದೆ.<br /> <br /> ರಾಮನಗರ ಪಿ.ಜಿ ಕೇಂದ್ರ ನಿರ್ಮಾಣ ಮಾಡಲು ರೂ 50 ಲಕ್ಷ ಕಾಯ್ದಿರಿಸಲಾಗಿದ್ದು, ಸ್ಥಳ ಪರಿಶೀಲನೆಗೆ ಈಗಾಗಲೇ ಸಿ.ಕೆ.ಜಗದೀಶ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>