ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದ ಬನಶಂಕರಿ ದೇವಸ್ಥಾನ ವಾರ್ಡ್ ಉಪ ಚುನಾವಣೆ ಸಚಿವ ಆರ್. ಅಶೋಕ ಅವರಿಗೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಹಾಗಾಗಿ ಪಾಲಿಕೆ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್. ಬಸವರಾಜು ಅವರನ್ನು ಕಣಕ್ಕಿಳಿಸಿದೆ. ಜೆಡಿಎಸ್ ತನ್ನ ಸ್ಥಾನ ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದು, ಅನುಕಂಪದ ಮತಗಳನ್ನು ಸೆಳೆಯುವ ಉದ್ದೇಶದಿಂದ ಮಹಮ್ಮದ್ ಅಕ್ಬರ್ ಅವರನ್ನು ಸ್ಪರ್ಧೆಗಿಳಿಸಿದೆ.