<p><strong>ಹೊಸಕೋಟೆ:</strong> ತಾಲ್ಲೂಕಿನ ದೊಡ್ಡ ಅರಳಗೆರೆ ಗ್ರಾ.ಪಂ.ನ ಮೊದಲ ಅವಧಿಗೆ ಅಧ್ಯಕ್ಷರಾಗಿ ಚಿಕ್ಕರಳಗೆರೆಯ ಮದ್ದೂರಪ್ಪ ಮತ್ತು ಉಪಾಧ್ಯಕ್ಷರಾಗಿ ಭುವನಹಳ್ಳಿಯ ಲಕ್ಷ್ಮಮ್ಮ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. <br /> <br /> ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಪಂಚಾಯಿತಿಗೆ ಒಂದೂವರೆ ವರ್ಷದ ಹಿಂದೆ ಚುನಾವಣೆ ನಡೆದಿದ್ದರೂ ಮೀಸಲಾತಿ ಬದಲಾವಣೆಗೆ ಒತ್ತಾಯಿಸಿ ಸದಸ್ಯರು ಪಟ್ಟು ಹಿಡಿದಿದ್ದರಿಂದ ಅಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು ಚುನಾವಣೆ ನಡೆಯದೆ ಖಾಲಿಯಾಗಿ ಉಳಿದಿದ್ದವು.<br /> <br /> ತಾಲ್ಲೂಕಿನ ನಂದಗುಡಿ ಗ್ರಾ.ಪಂ.ಅಧ್ಯಕ್ಷರಾಗಿ ಕಲಾಜ್ಯೋತಿ ಮತ್ತು ಉಪಾಧ್ಯಕ್ಷರಾಗಿ ನಡುವಿನಪುರದ ವಿ.ಮಂಜುಳಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೈಲನರಸಾಪುರ ಗ್ರಾ.ಪಂ.ಅಧ್ಯಕ್ಷರಾಗಿ ತಾಜರ್ ಅಹಮದ್ ಮತ್ತು ಉಪಾಧ್ಯಕ್ಷರಾಗಿ ದೊಡ್ಡಗಾನಹಳ್ಳಿಯ ಎಸ್.ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಅಧ್ಯಕ್ಷರು ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.<br /> <br /> <strong>ಭಟ್ಟರಹಳ್ಳಿ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು </strong><br /> ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಆಂಧ್ರಪ್ರದೇಶ ಮೂಲದ ವೆಂಕಟಪ್ಪ (45) ಚಿಕಿತ್ಸೆ ಫಲಕಾಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟರು. <br /> <br /> ಭಟ್ಟರಹಳ್ಳಿ ಬಳಿ ವಾಸವಾಗಿರುವ ತಮ್ಮ ಸಂಬಂಧಿಕರನ್ನು ನೋಡಲು ಜ.2 ರಂದು ವೆಂಕಟಪ್ಪ ಬಸ್ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಜೀಪ್ ಒಂದು ಡಿಕ್ಕಿ ಹೊಡೆದು ಅವರು ಗಾಯಗೊಂಡಿದ್ದರು. ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ತಾಲ್ಲೂಕಿನ ದೊಡ್ಡ ಅರಳಗೆರೆ ಗ್ರಾ.ಪಂ.ನ ಮೊದಲ ಅವಧಿಗೆ ಅಧ್ಯಕ್ಷರಾಗಿ ಚಿಕ್ಕರಳಗೆರೆಯ ಮದ್ದೂರಪ್ಪ ಮತ್ತು ಉಪಾಧ್ಯಕ್ಷರಾಗಿ ಭುವನಹಳ್ಳಿಯ ಲಕ್ಷ್ಮಮ್ಮ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. <br /> <br /> ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಪಂಚಾಯಿತಿಗೆ ಒಂದೂವರೆ ವರ್ಷದ ಹಿಂದೆ ಚುನಾವಣೆ ನಡೆದಿದ್ದರೂ ಮೀಸಲಾತಿ ಬದಲಾವಣೆಗೆ ಒತ್ತಾಯಿಸಿ ಸದಸ್ಯರು ಪಟ್ಟು ಹಿಡಿದಿದ್ದರಿಂದ ಅಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು ಚುನಾವಣೆ ನಡೆಯದೆ ಖಾಲಿಯಾಗಿ ಉಳಿದಿದ್ದವು.<br /> <br /> ತಾಲ್ಲೂಕಿನ ನಂದಗುಡಿ ಗ್ರಾ.ಪಂ.ಅಧ್ಯಕ್ಷರಾಗಿ ಕಲಾಜ್ಯೋತಿ ಮತ್ತು ಉಪಾಧ್ಯಕ್ಷರಾಗಿ ನಡುವಿನಪುರದ ವಿ.ಮಂಜುಳಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೈಲನರಸಾಪುರ ಗ್ರಾ.ಪಂ.ಅಧ್ಯಕ್ಷರಾಗಿ ತಾಜರ್ ಅಹಮದ್ ಮತ್ತು ಉಪಾಧ್ಯಕ್ಷರಾಗಿ ದೊಡ್ಡಗಾನಹಳ್ಳಿಯ ಎಸ್.ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಅಧ್ಯಕ್ಷರು ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.<br /> <br /> <strong>ಭಟ್ಟರಹಳ್ಳಿ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು </strong><br /> ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಆಂಧ್ರಪ್ರದೇಶ ಮೂಲದ ವೆಂಕಟಪ್ಪ (45) ಚಿಕಿತ್ಸೆ ಫಲಕಾಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟರು. <br /> <br /> ಭಟ್ಟರಹಳ್ಳಿ ಬಳಿ ವಾಸವಾಗಿರುವ ತಮ್ಮ ಸಂಬಂಧಿಕರನ್ನು ನೋಡಲು ಜ.2 ರಂದು ವೆಂಕಟಪ್ಪ ಬಸ್ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಜೀಪ್ ಒಂದು ಡಿಕ್ಕಿ ಹೊಡೆದು ಅವರು ಗಾಯಗೊಂಡಿದ್ದರು. ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>