<p><strong>ಬೆಂಗಳೂರು: </strong>‘ಮಠ, ಮಂದಿರಗಳನ್ನು ಕಟ್ಟುವುದರ ಮೂಲಕ ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವುದರ ಜೊತೆಗೆ ಎಲ್ಲರನ್ನು ಧಾರ್ಮಿಕ ಚಿಂತನೆಗಳತ್ತ ತೆಗೆದುಕೊಂಡು ಹೋಗುವ ಕೆಲಸ ಆಗಬೇಕಿದೆ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಹೇಳಿದರು.<br /> <br /> ಕೊಡಿಗೇಹಳ್ಳಿ ಸಮೀಪದ ಕನ್ನಲ್ಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಮಹಂತರ ಮಠ ಹಾಗೂ ವಿರೂಪಾಕ್ಷೇಶ್ವರ ದೇವರ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಮಠ, ದೇವಸ್ಥಾನಗಳಿಂದ ಸಾಧ್ಯ. ಜನರು ನಿತ್ಯ ದೇವರ ದರ್ಶನ ಪಡೆದು, ಗುರು ಹಿರಿಯರನ್ನು ಸ್ಮರಣೆ ಮಾಡಬೇಕು. ಆಗ ಶಾಂತಿ, ನೆಮ್ಮದಿ ಸಿಗುತ್ತದೆ’ ಎಂದರು.<br /> <br /> ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ‘ಹಲವು ತಲೆಮಾರುಗಳಿಂದ ಕೆಲ ಮಠಗಳು ಉಚಿತ ಅನ್ನದಾಸೋಹದ ಮೂಲಕ ಸಮಾಜದ ಕಟ್ಟೆಕಡೆಯ ವ್ಯಕ್ತಿಗೂ ಶಿಕ್ಷಣ ಒದಗಿಸುವ ಕೆಲಸ ಮಾಡುತ್ತಿವೆ. ಆ ಮೂಲಕ ತಳಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ತಂದ ಶ್ರೇಯ ಅವುಗಳಿಗೆ ಸಲ್ಲುತ್ತದೆ’ ಎಂದು ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಶಾಂತರಾಜು ಮಾತನಾಡಿ, ‘ಸಂಸ್ಕಾರ, ಸಹಬಾಳ್ವೆ, ಮಾನವೀಯ ಮೌಲ್ಯಗಳನ್ನು ಕಲಿಸುವ ಕೆಲಸವನ್ನು ಮಠಗಳು ಮಾಡುತ್ತಿವೆ. ಆ ಮೂಲಕ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಭಾಗಿಯಾಗಿವೆ’ ಎಂದು ಹೇಳಿದರು.<br /> <br /> ಸಮಾಜ ಸೇವಕ ಎನ್.ನಂಜುಂಡೇಶ್ ಮಾತನಾಡಿ, ‘ಕನ್ನಲ್ಲಿ ಮಹಂತರ ಮಠಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಮಠ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡರೆ ಎಲ್ಲ ರೀತಿಯ ಸಹಕಾರವನ್ನು ದಾನಿಗಳಿಂದ ದೊರಕಿಸಿಕೊಡಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮಠ, ಮಂದಿರಗಳನ್ನು ಕಟ್ಟುವುದರ ಮೂಲಕ ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವುದರ ಜೊತೆಗೆ ಎಲ್ಲರನ್ನು ಧಾರ್ಮಿಕ ಚಿಂತನೆಗಳತ್ತ ತೆಗೆದುಕೊಂಡು ಹೋಗುವ ಕೆಲಸ ಆಗಬೇಕಿದೆ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಹೇಳಿದರು.<br /> <br /> ಕೊಡಿಗೇಹಳ್ಳಿ ಸಮೀಪದ ಕನ್ನಲ್ಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಮಹಂತರ ಮಠ ಹಾಗೂ ವಿರೂಪಾಕ್ಷೇಶ್ವರ ದೇವರ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಮಠ, ದೇವಸ್ಥಾನಗಳಿಂದ ಸಾಧ್ಯ. ಜನರು ನಿತ್ಯ ದೇವರ ದರ್ಶನ ಪಡೆದು, ಗುರು ಹಿರಿಯರನ್ನು ಸ್ಮರಣೆ ಮಾಡಬೇಕು. ಆಗ ಶಾಂತಿ, ನೆಮ್ಮದಿ ಸಿಗುತ್ತದೆ’ ಎಂದರು.<br /> <br /> ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ‘ಹಲವು ತಲೆಮಾರುಗಳಿಂದ ಕೆಲ ಮಠಗಳು ಉಚಿತ ಅನ್ನದಾಸೋಹದ ಮೂಲಕ ಸಮಾಜದ ಕಟ್ಟೆಕಡೆಯ ವ್ಯಕ್ತಿಗೂ ಶಿಕ್ಷಣ ಒದಗಿಸುವ ಕೆಲಸ ಮಾಡುತ್ತಿವೆ. ಆ ಮೂಲಕ ತಳಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ತಂದ ಶ್ರೇಯ ಅವುಗಳಿಗೆ ಸಲ್ಲುತ್ತದೆ’ ಎಂದು ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಶಾಂತರಾಜು ಮಾತನಾಡಿ, ‘ಸಂಸ್ಕಾರ, ಸಹಬಾಳ್ವೆ, ಮಾನವೀಯ ಮೌಲ್ಯಗಳನ್ನು ಕಲಿಸುವ ಕೆಲಸವನ್ನು ಮಠಗಳು ಮಾಡುತ್ತಿವೆ. ಆ ಮೂಲಕ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಭಾಗಿಯಾಗಿವೆ’ ಎಂದು ಹೇಳಿದರು.<br /> <br /> ಸಮಾಜ ಸೇವಕ ಎನ್.ನಂಜುಂಡೇಶ್ ಮಾತನಾಡಿ, ‘ಕನ್ನಲ್ಲಿ ಮಹಂತರ ಮಠಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಮಠ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡರೆ ಎಲ್ಲ ರೀತಿಯ ಸಹಕಾರವನ್ನು ದಾನಿಗಳಿಂದ ದೊರಕಿಸಿಕೊಡಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>