<p><strong>ಬೆಂಗಳೂರು: </strong>`ಕನ್ನಡ ನಾಡಿನ ಇತಿಹಾಸಕ್ಕೆ ಸಂಬಂಧಿಸಿದಂತೆ ವಿಶ್ವಕೋಶವನ್ನು ರಚಿಸಿ ಅದನ್ನು ಎಲ್ಲ ಭಾಷೆಗಳಿಗೂ ಭಾಷಾಂತರಿಸಲು ಕ್ರಮ ಕೈಗೊಳ್ಳಬೇಕು' ಎಂದು ಸಮಾಜ ಸೇವಕ ಬಿ.ಎಲ್.ಎಸ್.ಮೂರ್ತಿ ಹೇಳಿದರು.<br /> <br /> ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ನಗರದ ಮಕ್ಕಳ ಕೂಟದಲ್ಲಿ ಭಾನುವಾರ ಆಯೋಜಿಸಿದ್ದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> `ವಿಶ್ವದ ಎಲ್ಲ ಭಾಷೆಗೆ ಹೋಲಿಸಿದರೆ ಕನ್ನಡ ಅತ್ಯಂತ ಪ್ರಾಚೀನ ಭಾಷೆಯಾಗಿದೆ. ಮೊಟ್ಟಮೊದಲು ದೊರೆತ ಹಲ್ಮಿಡಿ ಶಾಸನದಿಂದ ಶಾಸ್ತ್ರೀಯ ಸ್ಥಾನಮಾನ ಸಿಗುವವರೆಗೆ ಕನ್ನಡ ಭಾಷೆ ಅಪಾರ ಬೆಳವಣಿಗೆ ಕಂಡಿದೆ. ಇದಕ್ಕೆ ಕನ್ನಡಕ್ಕೆ ಸಿಕ್ಕ ಎಂಟು ಜ್ಞಾನಪೀಠ ಪ್ರಶಸ್ತಿಗಳೇ ಸಾಕ್ಷಿ' ಎಂದರು.<br /> <br /> `ವಿಕಿಪೀಡಿಯಾದಲ್ಲಿ ಯಾರು ಬೇಕಾದರೂ ಮಾಹಿತಿಗಳನ್ನು ನಮೂದಿಸಬಹುದಾದ ಕಾರಣ ನಿಖರ ಮಾಹಿತಿಗಳು ದೊರೆಯುವುದಿಲ್ಲ. ಆದ್ದರಿಂದ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸ್ಪಷ್ಟ ಮಾಹಿತಿಗಳು ಸೇರ್ಪಡೆಯಾಗುವಂತೆ ಮಾಡಬೇಕು' ಎಂದು ಸಲಹೆ ನೀಡಿದರು.<br /> <br /> `ಐಟಿ ಕಂಪೆನಿಗಳ ಹಾವಳಿಯಿಂದಾಗಿ ನಗರದಲ್ಲಿ ಇತರ ಭಾಷೆಯ ಜನರು ಹೆಚ್ಚು ನೆಲೆಸುತ್ತಿದ್ದಾರೆ. ಅನ್ಯ ಭಾಷಿಕರು ಸುಲಭವಾಗಿ ಕನ್ನಡ ಕಲಿಯುವಂತೆ ಮಾಡಲು ಕನ್ನಡ ತಂತ್ರಾಂಶಗಳನ್ನು ರೂಪಿಸಬೇಕು. ವೈದ್ಯಕೀಯ, ತಾಂತ್ರಿಕ ಪದಗಳ ಅರ್ಥವು ಕನ್ನಡ ಭಾಷೆಯಲ್ಲಿ ಲಭ್ಯವಾಗುವಂತೆ ಮಾಡಬೇಕು' ಎಂದು ಹೇಳಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ತಿಮ್ಮೇಶ್ ಮಾತನಾಡಿ, `ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಎರಡು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಆದರೆ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಹಿತ್ಯ ಸಮ್ಮೇಳನ ಆಯೋಜಿಸುತ್ತಿರುವುದು ಇದೇ ಮೊದಲು. ಮುಂದೆ ಪ್ರತಿ ವರ್ಷ ಸಮ್ಮೇಳನಗಳನ್ನು ನಡೆಸಲಾಗುವುದು' ಎಂದರು.<br /> <br /> ಸಂಸದ ಪಿ.ಸಿ.ಮೋಹನ್ ಮಾತನಾಡಿ, `ಜಾಗತೀಕರಣದ ಹಾವಳಿಯಿಂದಾಗಿ ಕನ್ನಡ ಭಾಷೆಯನ್ನು ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಕನ್ನಡ ಉಳಿಸುವ ಕಾರ್ಯದಲ್ಲಿ ಯುವಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ' ಎಂದು ಹೇಳಿದರು. ಸಮ್ಮೇಳನದಲ್ಲಿ `ಕನ್ನಡಿಗರ ಕೋಟೆ-ಚಾಮರಾಜಪೇಟೆ' ಎಂಬ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.<br /> <br /> ಸಮ್ಮೇಳನದ ಸ್ವಾಗತ ಸಮಿತಿ ಸದಸ್ಯ ಬಿ.ವಿ.ಗಣೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಪಿನಾಕಪಾಣಿ, ಪಾಲಿಕೆ ಸದಸ್ಯೆ ನಾಜೀನಾ ಬೇಗಂ, ಸ್ವಾಗತ ಸಮಿತಿಯ ಅಧ್ಯಕ್ಷ ಬೈಸಾನಿ ಅಶೋಕ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಕನ್ನಡ ನಾಡಿನ ಇತಿಹಾಸಕ್ಕೆ ಸಂಬಂಧಿಸಿದಂತೆ ವಿಶ್ವಕೋಶವನ್ನು ರಚಿಸಿ ಅದನ್ನು ಎಲ್ಲ ಭಾಷೆಗಳಿಗೂ ಭಾಷಾಂತರಿಸಲು ಕ್ರಮ ಕೈಗೊಳ್ಳಬೇಕು' ಎಂದು ಸಮಾಜ ಸೇವಕ ಬಿ.ಎಲ್.ಎಸ್.ಮೂರ್ತಿ ಹೇಳಿದರು.<br /> <br /> ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ನಗರದ ಮಕ್ಕಳ ಕೂಟದಲ್ಲಿ ಭಾನುವಾರ ಆಯೋಜಿಸಿದ್ದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> `ವಿಶ್ವದ ಎಲ್ಲ ಭಾಷೆಗೆ ಹೋಲಿಸಿದರೆ ಕನ್ನಡ ಅತ್ಯಂತ ಪ್ರಾಚೀನ ಭಾಷೆಯಾಗಿದೆ. ಮೊಟ್ಟಮೊದಲು ದೊರೆತ ಹಲ್ಮಿಡಿ ಶಾಸನದಿಂದ ಶಾಸ್ತ್ರೀಯ ಸ್ಥಾನಮಾನ ಸಿಗುವವರೆಗೆ ಕನ್ನಡ ಭಾಷೆ ಅಪಾರ ಬೆಳವಣಿಗೆ ಕಂಡಿದೆ. ಇದಕ್ಕೆ ಕನ್ನಡಕ್ಕೆ ಸಿಕ್ಕ ಎಂಟು ಜ್ಞಾನಪೀಠ ಪ್ರಶಸ್ತಿಗಳೇ ಸಾಕ್ಷಿ' ಎಂದರು.<br /> <br /> `ವಿಕಿಪೀಡಿಯಾದಲ್ಲಿ ಯಾರು ಬೇಕಾದರೂ ಮಾಹಿತಿಗಳನ್ನು ನಮೂದಿಸಬಹುದಾದ ಕಾರಣ ನಿಖರ ಮಾಹಿತಿಗಳು ದೊರೆಯುವುದಿಲ್ಲ. ಆದ್ದರಿಂದ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸ್ಪಷ್ಟ ಮಾಹಿತಿಗಳು ಸೇರ್ಪಡೆಯಾಗುವಂತೆ ಮಾಡಬೇಕು' ಎಂದು ಸಲಹೆ ನೀಡಿದರು.<br /> <br /> `ಐಟಿ ಕಂಪೆನಿಗಳ ಹಾವಳಿಯಿಂದಾಗಿ ನಗರದಲ್ಲಿ ಇತರ ಭಾಷೆಯ ಜನರು ಹೆಚ್ಚು ನೆಲೆಸುತ್ತಿದ್ದಾರೆ. ಅನ್ಯ ಭಾಷಿಕರು ಸುಲಭವಾಗಿ ಕನ್ನಡ ಕಲಿಯುವಂತೆ ಮಾಡಲು ಕನ್ನಡ ತಂತ್ರಾಂಶಗಳನ್ನು ರೂಪಿಸಬೇಕು. ವೈದ್ಯಕೀಯ, ತಾಂತ್ರಿಕ ಪದಗಳ ಅರ್ಥವು ಕನ್ನಡ ಭಾಷೆಯಲ್ಲಿ ಲಭ್ಯವಾಗುವಂತೆ ಮಾಡಬೇಕು' ಎಂದು ಹೇಳಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ತಿಮ್ಮೇಶ್ ಮಾತನಾಡಿ, `ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಎರಡು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಆದರೆ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಹಿತ್ಯ ಸಮ್ಮೇಳನ ಆಯೋಜಿಸುತ್ತಿರುವುದು ಇದೇ ಮೊದಲು. ಮುಂದೆ ಪ್ರತಿ ವರ್ಷ ಸಮ್ಮೇಳನಗಳನ್ನು ನಡೆಸಲಾಗುವುದು' ಎಂದರು.<br /> <br /> ಸಂಸದ ಪಿ.ಸಿ.ಮೋಹನ್ ಮಾತನಾಡಿ, `ಜಾಗತೀಕರಣದ ಹಾವಳಿಯಿಂದಾಗಿ ಕನ್ನಡ ಭಾಷೆಯನ್ನು ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಕನ್ನಡ ಉಳಿಸುವ ಕಾರ್ಯದಲ್ಲಿ ಯುವಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ' ಎಂದು ಹೇಳಿದರು. ಸಮ್ಮೇಳನದಲ್ಲಿ `ಕನ್ನಡಿಗರ ಕೋಟೆ-ಚಾಮರಾಜಪೇಟೆ' ಎಂಬ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.<br /> <br /> ಸಮ್ಮೇಳನದ ಸ್ವಾಗತ ಸಮಿತಿ ಸದಸ್ಯ ಬಿ.ವಿ.ಗಣೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಪಿನಾಕಪಾಣಿ, ಪಾಲಿಕೆ ಸದಸ್ಯೆ ನಾಜೀನಾ ಬೇಗಂ, ಸ್ವಾಗತ ಸಮಿತಿಯ ಅಧ್ಯಕ್ಷ ಬೈಸಾನಿ ಅಶೋಕ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>