<p><strong>ಬೆಂಗಳೂರು: </strong>ಬಿಬಿಎಂಪಿಗೆ ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿರುವ 16 ಸದಸ್ಯರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. <br /> <br /> ಬೆಂಬಲಿಗರು, ಕುಟುಂಬ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಪಾಲಿಕೆ ಕೇಂದ್ರ ಕಚೇರಿಯ ಹೊರಾಂಗಣ ಹಾಗೂ ಸಭಾಂಗಣದ ಪ್ರೇಕ್ಷಕರ ಗ್ಯಾಲರಿ ಜನರಿಂದ ತುಂಬಿ ತುಳುಕುತ್ತಿತ್ತು.<br /> <br /> ಕೆಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಬೆಂಬಲಿಗರು ಶಿಳ್ಳೆ, ಚಪ್ಪಾಳೆ ಹೊಡೆದರು. ಈ ಹಂತದಲ್ಲಿ ಯಾರೂ ಶಿಳ್ಳೆ ಹೊಡೆಯದಂತೆ ಮೇಯರ್ ಮನವಿ ಮಾಡಿಕೊಂಡರು.<br /> <br /> ಈ ನಡುವೆ, ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಜೆಡಿ(ಎಸ್)ನ ಹಿರಿಯ ಸದಸ್ಯ ಪದ್ಮನಾಭರೆಡ್ಡಿ ಕ್ರಿಯಾಲೋಪವೆತ್ತಿದರು.<br /> <br /> `ಸಂವಿಧಾನದ 74ನೇ ಕಲಂನ ತಿದ್ದುಪಡಿ ಪ್ರಕಾರ, ಪೌರಾಡಳಿತ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಿಪುಣರನ್ನು ಸರ್ಕಾರ ಪಾಲಿಕೆಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಬೇಕು. ಕೆಎಂಸಿ ಕಾಯ್ದೆ 7 (ಬಿ) ಪ್ರಕಾರ 16 ಸದಸ್ಯರ ನಾಮಕರಣವಾಗಿದೆಯೇ? ಎಂಬುದನ್ನು ಸಭೆಗೆ ತಿಳಿಸಬೇಕು~ ಎಂದು ಮೇಯರ್ ಅವರನ್ನು ಒತ್ತಾಯಿಸಿದರು.<br /> <br /> `ಕೆಎಂಸಿ ಕಾಯ್ದೆ ಸೆಕ್ಷನ್ 5ರ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನೂ ನಾಮನಿರ್ದೇಶಿತ ಸದಸ್ಯರನ್ನಾಗಿ ಸರ್ಕಾರ ನಾಮಕರಣ ಮಾಡಬೇಕು. ಆದರೆ, ಮಹಿಳೆಯರು ಎಲ್ಲಿದ್ದಾರೆ?~ ಎಂದು ರೆಡ್ಡಿ ಪ್ರಶ್ನಿಸಿದರು.<br /> <br /> ಆಗ ಮಧ್ಯಪ್ರವೇಶಿಸಿದ ಮೇಯರ್ ಡಿ. ವೆಂಕಟೇಶಮೂರ್ತಿ, `ನಿಮ್ಮ ಅಹವಾಲು ಏನಿದ್ದರೂ ಕಳಿಸಿಕೊಡಿ. ಅದನ್ನು ಸರ್ಕಾರದ ಬಳಿ ಚರ್ಚಿಸುತ್ತೇವೆ~ ಎಂದರು.<br /> <br /> ಮೇಯರ್ ಮಾತಿನಿಂದ ಸಿಟ್ಟಿಗೆದ್ದ ಪದ್ಮನಾಭರೆಡ್ಡಿ, `ಬಿಬಿಎಂಪಿ ರಾಜಕೀಯ ನಿರಾಶ್ರಿತರ ತಾಣವಲ್ಲ. ಬಿಜೆಪಿ ಕಾರ್ಯಕರ್ತರನ್ನೆಲ್ಲಾ ನಾಮನಿರ್ದೇಶಿತ ಸದಸ್ಯರನ್ನಾಗಿ ನಾಮಕರಣ ಮಾಡಲಾಗಿದೆ~ ಎಂದು ಕಿಡಿ ಕಾರಿದರು.<br /> <br /> ಅಷ್ಟಕ್ಕೂ ಸುಮ್ಮನಾಗದ ರೆಡ್ಡಿ, `ನಾಮನಿರ್ದೇಶಿತ ಸದಸ್ಯರು ಕಟ್ಟಡ ಕಾಮಗಾರಿ ಸ್ಥಳಗಳಿಗೆ ತೆರಳಿ ನಾಗರಿಕರಿಗೆ ತೊಂದರೆ ಕೊಡುವುದು, ಪಾಲಿಕೆ ಸದಸ್ಯರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿಗೆ ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿರುವ 16 ಸದಸ್ಯರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. <br /> <br /> ಬೆಂಬಲಿಗರು, ಕುಟುಂಬ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಪಾಲಿಕೆ ಕೇಂದ್ರ ಕಚೇರಿಯ ಹೊರಾಂಗಣ ಹಾಗೂ ಸಭಾಂಗಣದ ಪ್ರೇಕ್ಷಕರ ಗ್ಯಾಲರಿ ಜನರಿಂದ ತುಂಬಿ ತುಳುಕುತ್ತಿತ್ತು.<br /> <br /> ಕೆಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಬೆಂಬಲಿಗರು ಶಿಳ್ಳೆ, ಚಪ್ಪಾಳೆ ಹೊಡೆದರು. ಈ ಹಂತದಲ್ಲಿ ಯಾರೂ ಶಿಳ್ಳೆ ಹೊಡೆಯದಂತೆ ಮೇಯರ್ ಮನವಿ ಮಾಡಿಕೊಂಡರು.<br /> <br /> ಈ ನಡುವೆ, ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಜೆಡಿ(ಎಸ್)ನ ಹಿರಿಯ ಸದಸ್ಯ ಪದ್ಮನಾಭರೆಡ್ಡಿ ಕ್ರಿಯಾಲೋಪವೆತ್ತಿದರು.<br /> <br /> `ಸಂವಿಧಾನದ 74ನೇ ಕಲಂನ ತಿದ್ದುಪಡಿ ಪ್ರಕಾರ, ಪೌರಾಡಳಿತ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಿಪುಣರನ್ನು ಸರ್ಕಾರ ಪಾಲಿಕೆಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಬೇಕು. ಕೆಎಂಸಿ ಕಾಯ್ದೆ 7 (ಬಿ) ಪ್ರಕಾರ 16 ಸದಸ್ಯರ ನಾಮಕರಣವಾಗಿದೆಯೇ? ಎಂಬುದನ್ನು ಸಭೆಗೆ ತಿಳಿಸಬೇಕು~ ಎಂದು ಮೇಯರ್ ಅವರನ್ನು ಒತ್ತಾಯಿಸಿದರು.<br /> <br /> `ಕೆಎಂಸಿ ಕಾಯ್ದೆ ಸೆಕ್ಷನ್ 5ರ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನೂ ನಾಮನಿರ್ದೇಶಿತ ಸದಸ್ಯರನ್ನಾಗಿ ಸರ್ಕಾರ ನಾಮಕರಣ ಮಾಡಬೇಕು. ಆದರೆ, ಮಹಿಳೆಯರು ಎಲ್ಲಿದ್ದಾರೆ?~ ಎಂದು ರೆಡ್ಡಿ ಪ್ರಶ್ನಿಸಿದರು.<br /> <br /> ಆಗ ಮಧ್ಯಪ್ರವೇಶಿಸಿದ ಮೇಯರ್ ಡಿ. ವೆಂಕಟೇಶಮೂರ್ತಿ, `ನಿಮ್ಮ ಅಹವಾಲು ಏನಿದ್ದರೂ ಕಳಿಸಿಕೊಡಿ. ಅದನ್ನು ಸರ್ಕಾರದ ಬಳಿ ಚರ್ಚಿಸುತ್ತೇವೆ~ ಎಂದರು.<br /> <br /> ಮೇಯರ್ ಮಾತಿನಿಂದ ಸಿಟ್ಟಿಗೆದ್ದ ಪದ್ಮನಾಭರೆಡ್ಡಿ, `ಬಿಬಿಎಂಪಿ ರಾಜಕೀಯ ನಿರಾಶ್ರಿತರ ತಾಣವಲ್ಲ. ಬಿಜೆಪಿ ಕಾರ್ಯಕರ್ತರನ್ನೆಲ್ಲಾ ನಾಮನಿರ್ದೇಶಿತ ಸದಸ್ಯರನ್ನಾಗಿ ನಾಮಕರಣ ಮಾಡಲಾಗಿದೆ~ ಎಂದು ಕಿಡಿ ಕಾರಿದರು.<br /> <br /> ಅಷ್ಟಕ್ಕೂ ಸುಮ್ಮನಾಗದ ರೆಡ್ಡಿ, `ನಾಮನಿರ್ದೇಶಿತ ಸದಸ್ಯರು ಕಟ್ಟಡ ಕಾಮಗಾರಿ ಸ್ಥಳಗಳಿಗೆ ತೆರಳಿ ನಾಗರಿಕರಿಗೆ ತೊಂದರೆ ಕೊಡುವುದು, ಪಾಲಿಕೆ ಸದಸ್ಯರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>