<p><strong>ಬೆಂಗಳೂರು:</strong> ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರ ಕಚೇರಿಯ ವತಿಯಿಂದ ಇದೇ 25ರಿಂದ ಸೆಪ್ಟೆಂಬರ್ ಅಂತ್ಯದ ವರೆಗೆ ಮೂರನೇ ಶನಿವಾರ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ `ಶಿಕ್ಷಣ ಅದಾಲತ್~ ನಡೆಯಲಿದೆ. <br /> <br /> ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಹಾಗೂ ಶಾಲಾ ಆಡಳಿತ ಮಂಡಳಿಗಳ ಕುಂದುಕೊರತೆಗಳನ್ನು ಗುರುತಿಸಿ ಪರಿಹಾರ ಸೂಚಿಸಲು ಈ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅದಾಲತ್ಗೆ ಡಿಡಿಪಿಐ ಕಚೇರಿಯಿಂದ ಇಬ್ಬರು ಅಧಿಕಾರಿಗಳು ಮತ್ತು ಇಬ್ಬರು ಬೋಧಕೇತರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು. ಸಂಬಂಧಪಟ್ಟವರು ಅರ್ಜಿ ಅಹವಾಲುಗಳನ್ನು ನಿಗದಿತ ಅವಧಿಯಲ್ಲಿ ನಿಯೋಜಿತ ಸಿಬ್ಬಂದಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಿ ಸ್ವೀಕೃತಿ ಪಡೆಯಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರ ಕಚೇರಿಯ ವತಿಯಿಂದ ಇದೇ 25ರಿಂದ ಸೆಪ್ಟೆಂಬರ್ ಅಂತ್ಯದ ವರೆಗೆ ಮೂರನೇ ಶನಿವಾರ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ `ಶಿಕ್ಷಣ ಅದಾಲತ್~ ನಡೆಯಲಿದೆ. <br /> <br /> ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಹಾಗೂ ಶಾಲಾ ಆಡಳಿತ ಮಂಡಳಿಗಳ ಕುಂದುಕೊರತೆಗಳನ್ನು ಗುರುತಿಸಿ ಪರಿಹಾರ ಸೂಚಿಸಲು ಈ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅದಾಲತ್ಗೆ ಡಿಡಿಪಿಐ ಕಚೇರಿಯಿಂದ ಇಬ್ಬರು ಅಧಿಕಾರಿಗಳು ಮತ್ತು ಇಬ್ಬರು ಬೋಧಕೇತರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು. ಸಂಬಂಧಪಟ್ಟವರು ಅರ್ಜಿ ಅಹವಾಲುಗಳನ್ನು ನಿಗದಿತ ಅವಧಿಯಲ್ಲಿ ನಿಯೋಜಿತ ಸಿಬ್ಬಂದಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಿ ಸ್ವೀಕೃತಿ ಪಡೆಯಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>