<p><strong>ರಾಮನಗರ:</strong> `ರಾಸಲೀಲೆ~ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಬಳಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ವಿರುದ್ಧ ಸಿಐಡಿ ಪೊಲೀಸರು ಬುಧವಾರ ರಾಮನಗರ ನ್ಯಾಯಾಲಯದಲ್ಲಿ ಹೆಚ್ಚುವರಿ ಆರೋಪ ಪಟ್ಟಿಯನ್ನು ದಾಖಲಿಸಿದ್ದಾರೆ.<br /> <br /> ಈ ಆರೋಪ ಪಟ್ಟಿಯಲ್ಲಿ ಭಾರತೀಯ ದಂಡ ಸಂಹಿತೆ ಕಲಂ 376ರ ಅಡಿ ಅತ್ಯಾಚಾರ ಮತ್ತು 377ರ ಅಡಿ ಅಸ್ವಾಭಾವಿಕ ಲೈಂಗಿಕ ಸಂಪರ್ಕ ಕುರಿತು ಪ್ರಸ್ತಾಪಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.<br /> <br /> `ನಿತ್ಯಾನಂದ ಸ್ವಾಮೀಜಿ ಮುಂಬೈ ಮೂಲದ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕುರಿತು ಸಿಐಡಿಗೆ ದೂರು ಬಂದಿದೆ. ಈ ಕುರಿತು ಕೆಲ ದಾಖಲೆಗಳೂ ದೊರೆತಿವೆ. ಅದರ ಆಧಾರದ ಮೇಲೆ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ~ ಎಂದು ಮೂಲಗಳು ಹೇಳಿವೆ.<br /> <br /> ನಿತ್ಯಾನಂದ ಅವರ ವಿರುದ್ಧದ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮುನಾ ರಾಣಿ ಎಂಬುವರ ವಿರುದ್ಧ ಐಪಿಸಿ 37ರ ಅಡಿ ಹೆಚ್ಚುವರಿ ಆರೋಪ ಪಟ್ಟಿಯನ್ನು ಸಿಐಡಿ ದಾಖಲಿಸಿದೆ. ಜಮುನಾ ರಾಣಿ ನಿತ್ಯಾನಂದ ಅವರ ಅನುಯಾಯಿ ಎನ್ನಲಾಗಿದೆ.<br /> <br /> ಈ ಮೊದಲು ಸಿಐಡಿ ಪೊಲೀಸರು ನಿತ್ಯಾನಂದ ಸ್ವಾಮೀಜಿ ವಿರುದ್ಧ ವಂಚನೆ (ಐಪಿಸಿ 420), ಸಾಕ್ಷಿನಾಶ, ತಪ್ಪು ಮಾಹಿತಿ (201), ಮೋಸ, ಫೋರ್ಜರಿ (417), ಪಿತೂರಿ (170/ಬಿ), ಕೊಲೆ ಬೆದರಿಕೆ (506) ಕುರಿತು ಆರೋಪ ಪಟ್ಟಿ ಸಲ್ಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> `ರಾಸಲೀಲೆ~ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಬಳಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ವಿರುದ್ಧ ಸಿಐಡಿ ಪೊಲೀಸರು ಬುಧವಾರ ರಾಮನಗರ ನ್ಯಾಯಾಲಯದಲ್ಲಿ ಹೆಚ್ಚುವರಿ ಆರೋಪ ಪಟ್ಟಿಯನ್ನು ದಾಖಲಿಸಿದ್ದಾರೆ.<br /> <br /> ಈ ಆರೋಪ ಪಟ್ಟಿಯಲ್ಲಿ ಭಾರತೀಯ ದಂಡ ಸಂಹಿತೆ ಕಲಂ 376ರ ಅಡಿ ಅತ್ಯಾಚಾರ ಮತ್ತು 377ರ ಅಡಿ ಅಸ್ವಾಭಾವಿಕ ಲೈಂಗಿಕ ಸಂಪರ್ಕ ಕುರಿತು ಪ್ರಸ್ತಾಪಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.<br /> <br /> `ನಿತ್ಯಾನಂದ ಸ್ವಾಮೀಜಿ ಮುಂಬೈ ಮೂಲದ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕುರಿತು ಸಿಐಡಿಗೆ ದೂರು ಬಂದಿದೆ. ಈ ಕುರಿತು ಕೆಲ ದಾಖಲೆಗಳೂ ದೊರೆತಿವೆ. ಅದರ ಆಧಾರದ ಮೇಲೆ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ~ ಎಂದು ಮೂಲಗಳು ಹೇಳಿವೆ.<br /> <br /> ನಿತ್ಯಾನಂದ ಅವರ ವಿರುದ್ಧದ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮುನಾ ರಾಣಿ ಎಂಬುವರ ವಿರುದ್ಧ ಐಪಿಸಿ 37ರ ಅಡಿ ಹೆಚ್ಚುವರಿ ಆರೋಪ ಪಟ್ಟಿಯನ್ನು ಸಿಐಡಿ ದಾಖಲಿಸಿದೆ. ಜಮುನಾ ರಾಣಿ ನಿತ್ಯಾನಂದ ಅವರ ಅನುಯಾಯಿ ಎನ್ನಲಾಗಿದೆ.<br /> <br /> ಈ ಮೊದಲು ಸಿಐಡಿ ಪೊಲೀಸರು ನಿತ್ಯಾನಂದ ಸ್ವಾಮೀಜಿ ವಿರುದ್ಧ ವಂಚನೆ (ಐಪಿಸಿ 420), ಸಾಕ್ಷಿನಾಶ, ತಪ್ಪು ಮಾಹಿತಿ (201), ಮೋಸ, ಫೋರ್ಜರಿ (417), ಪಿತೂರಿ (170/ಬಿ), ಕೊಲೆ ಬೆದರಿಕೆ (506) ಕುರಿತು ಆರೋಪ ಪಟ್ಟಿ ಸಲ್ಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>