ಬೆಂಗಳೂರು: ರಾಜರಾಜೇಶ್ವರಿನಗರ ಸಮೀಪದ ಬಿಎಚ್ಇಎಲ್ ಲೇಔಟ್ನಲ್ಲಿ ವಿಜಯ್ ಜನಾರ್ದನರಾವ್ (34) ಎಂಬುವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಎಚ್ಇಎಲ್ ಲೇಔಟ್ ಎರಡನೇ ಅಡ್ಡರಸ್ತೆ ನಿವಾಸಿ ಜಗನ್ನಾಥರಾವ್ ಎಂಬುವರ ಮಗನಾದ ವಿಜಯ್ ಅವರು ಚಾಮರಾಜಪೇಟೆಯಲ್ಲಿ ಜಿಮ್ ಸೆಂಟರ್ ನಡೆಸುತ್ತಿದ್ದರು.
ಕುಟುಂಬ ಸದಸ್ಯರೆಲ್ಲಾ ಬೆಳಿಗ್ಗೆ ಸಂಬಂಧಿಕರ ಮದುವೆ ಸಮಾರಂಭಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಗಡಿ ರಸ್ತೆಯ ಯುವತಿಯೊಬ್ಬರ ಜತೆ 2014ರ ಜ.18ಕ್ಕೆ ಅವರ ಮದುವೆ ನಿಶ್ಚಯವಾಗಿತ್ತು. ಜಗನ್ನಾಥರಾವ್ ಅವರು ಹೆಡ್ ಕಾನ್ಸ್ಟೆಬಲ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ರಾಜರಾಜೇಶ್ವರಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಪಘಾತ: ವೃದ್ಧೆ ಸಾವು
ಕೊತ್ತನೂರು ಮುಖ್ಯರಸ್ತೆಯಲ್ಲಿ ಗುರುವಾರ ನಸುಕಿನಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತರ ವಯಸ್ಸು ಸುಮಾರು 70 ವರ್ಷ. ಆದರೆ, ಅವರ ಗುರುತು ಪತ್ತೆಯಾಗಿಲ್ಲ.
ಅವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವಾಹನ ಡಿಕ್ಕಿ ಹೊಡೆದಿರುವುದರಿಂದ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಂತರ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.