ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್, ‘ತ್ಯಾಜ್ಯ ವಿಲೇವಾರಿಗೆ ಮಂಡಳಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಆಸ್ಪತ್ರೆ ತ್ಯಾಜ್ಯ, ಇ–ತ್ಯಾಜ್ಯ, ಒಣ ಮತ್ತು ಹಸಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಲಾಗಿದೆ. ಕಸ ಸಮಸ್ಯೆ ಪರಿಹಾರಕ್ಕೆ ಜನರ ಸಹಕಾರ ಮುಖ್ಯ’ ಎಂದರು.