<p>ಬೆಂಗಳೂರು: ‘ದೇಶದ ರಾಜಧಾನಿ ನವದೆಹಲಿ ಪಕ್ಕದಲ್ಲಿನ ನೊಯಿಡಾ ನಗರ ಅಭಿವೃದ್ಧಿಯಾಗಿರುವ ಮಾದರಿಯಲ್ಲಿ ಬೆಂಗಳೂರು ಪಕ್ಕದಲ್ಲಿರುವ ಹೊಸಕೋಟೆಯನ್ನು ಅಭಿವೃದ್ಧಿಪಡಿಸಲಾಗುವುದು. ಇನ್ನು ಕೆಲವು ವರ್ಷಗಳಲ್ಲಿ ಹೊಸಕೋಟೆಯ ಚಿತ್ರಣವೇ ಬದಲಾಗಲಿದೆ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಎಂ.ವೀರಪ್ಪಮೊಯಿಲಿ ಹೇಳಿದರು.<br /> <br /> ಹೊಸಕೋಟೆಯ ಕಂಬಳೀಪುರದಲ್ಲಿ ರಾಜೀವ್ಗಾಂಧಿ ಪೆಟ್ರೋಲಿಯಂ ಸಂಶೋಧನಾ ಕೇಂದ್ರಕ್ಕೆ ಬುಧವಾರ ಶಿಲಾನ್ಯಾಸ ಮಾಡಿದ ನಂತರ ಅವರು ಮಾತನಾಡಿದರು.<br /> <br /> ‘ಇಲ್ಲಿ ನಿರ್ಮಾಣವಾಗುವ ಪೆಟ್ರೋಲಿಯಂ ಸಂಶೋಧನಾ ಕೇಂದ್ರ ಇಡಿ ಜಗತ್ತಿನಲ್ಲೇ ಶ್ರೇಷ್ಠ ಸಂಸ್ಥೆಯಾಗಲಿದೆ. ಈ ಕೇಂದ್ರದಲ್ಲಿ ಪೆಟ್ರೋಲ್ ಬಗ್ಗೆ ಸಂಶೋಧನೆ, ಅಧ್ಯಯನ ನಡೆಯಲಿದೆ ಜತೆಗೆ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳಿಗೆ ತರಬೇತಿ ನೀಡಲಾಗುವುದು. ಇದಕ್ಕಾಗಿ ರಾಜ್ಯ ಸರ್ಕಾರ 150 ಎಕರೆ ಜಮೀನು ನೀಡಿದೆ. ₨ 120 ಕೋಟಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ನಿರ್ಮಾಣವಾಗಲಿದೆ’ ಎಂದರು.<br /> <br /> ‘ಹೊಸಕೋಟೆಯಲ್ಲಿ ಆರಂಭವಾಗುವ ಪೆಟ್ರೋಲಿಯಂ ಸಂಶೋಧನಾ ಕೇಂದ್ರದಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ತಜ್ಞರು ವರದಿ ನೀಡಿದ್ದಾರೆ. ಅವರು ನೀಡಿರುವ ವರದಿ ಆಧರಿಸಿ ಕೇಂದ್ರ ಸ್ಥಾಪಿಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ದೇಶದ ರಾಜಧಾನಿ ನವದೆಹಲಿ ಪಕ್ಕದಲ್ಲಿನ ನೊಯಿಡಾ ನಗರ ಅಭಿವೃದ್ಧಿಯಾಗಿರುವ ಮಾದರಿಯಲ್ಲಿ ಬೆಂಗಳೂರು ಪಕ್ಕದಲ್ಲಿರುವ ಹೊಸಕೋಟೆಯನ್ನು ಅಭಿವೃದ್ಧಿಪಡಿಸಲಾಗುವುದು. ಇನ್ನು ಕೆಲವು ವರ್ಷಗಳಲ್ಲಿ ಹೊಸಕೋಟೆಯ ಚಿತ್ರಣವೇ ಬದಲಾಗಲಿದೆ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಎಂ.ವೀರಪ್ಪಮೊಯಿಲಿ ಹೇಳಿದರು.<br /> <br /> ಹೊಸಕೋಟೆಯ ಕಂಬಳೀಪುರದಲ್ಲಿ ರಾಜೀವ್ಗಾಂಧಿ ಪೆಟ್ರೋಲಿಯಂ ಸಂಶೋಧನಾ ಕೇಂದ್ರಕ್ಕೆ ಬುಧವಾರ ಶಿಲಾನ್ಯಾಸ ಮಾಡಿದ ನಂತರ ಅವರು ಮಾತನಾಡಿದರು.<br /> <br /> ‘ಇಲ್ಲಿ ನಿರ್ಮಾಣವಾಗುವ ಪೆಟ್ರೋಲಿಯಂ ಸಂಶೋಧನಾ ಕೇಂದ್ರ ಇಡಿ ಜಗತ್ತಿನಲ್ಲೇ ಶ್ರೇಷ್ಠ ಸಂಸ್ಥೆಯಾಗಲಿದೆ. ಈ ಕೇಂದ್ರದಲ್ಲಿ ಪೆಟ್ರೋಲ್ ಬಗ್ಗೆ ಸಂಶೋಧನೆ, ಅಧ್ಯಯನ ನಡೆಯಲಿದೆ ಜತೆಗೆ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳಿಗೆ ತರಬೇತಿ ನೀಡಲಾಗುವುದು. ಇದಕ್ಕಾಗಿ ರಾಜ್ಯ ಸರ್ಕಾರ 150 ಎಕರೆ ಜಮೀನು ನೀಡಿದೆ. ₨ 120 ಕೋಟಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ನಿರ್ಮಾಣವಾಗಲಿದೆ’ ಎಂದರು.<br /> <br /> ‘ಹೊಸಕೋಟೆಯಲ್ಲಿ ಆರಂಭವಾಗುವ ಪೆಟ್ರೋಲಿಯಂ ಸಂಶೋಧನಾ ಕೇಂದ್ರದಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ತಜ್ಞರು ವರದಿ ನೀಡಿದ್ದಾರೆ. ಅವರು ನೀಡಿರುವ ವರದಿ ಆಧರಿಸಿ ಕೇಂದ್ರ ಸ್ಥಾಪಿಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>