ಮಾದೇಗೌಡ ಅವರಿಗೆ ಸೇರಿದ ಭಾರತಿ ಎಜುಕೇಷನ್ ಟ್ರಸ್ಟ್ಗೆ ರಾಜ್ಯ ಸರ್ಕಾರ 1962ರಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕರಡಕೆರೆ, ಸಬ್ಬನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಒಟ್ಟು 93 ಎಕರೆ 26 ಗುಂಟೆ ಜಾಗ ಮಂಜೂರು ಮಾಡಿತ್ತು. ಇದನ್ನು ಸಾರ್ವಜನಿಕ ಹಾಗೂ ಶೈಕ್ಷಣಿಕ ಉದ್ದೇಶಕ್ಕೆ ಮಾತ್ರ ಬಳಸಬೇಕು. ಯಾರಿಗೂ ಹಸ್ತಾಂತರ ಅಥವಾ ಮಾರಾಟ ಮಾಡಬಾರದು ಎಂದು ಷರತ್ತು ವಿಧಿಸಲಾಗಿತ್ತು. ಆದರೆ ಷರತ್ತು ಉಲ್ಲಂಘಿಸಿ 25 ಎಕರೆ ಮಾರಾಟ ಮಾಡಲಾಗಿದೆ ಎಂಬುದು ಅರ್ಜಿದಾರರ ಆರೋಪ.