<p><strong>ಬೆಂಗಳೂರು: </strong>`ರಾಜ್ಯದ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಬ್ರಾಹ್ಮಣ ಸಮಾಜವನ್ನು ಕಡೆಗಣಿಸುತ್ತಿವೆ~ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಆರೋಪಿಸಿದರು.<br /> <br /> ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಇತ್ತೀಚೆಗೆ ಯಾವ ರಾಜಕೀಯ ಪಕ್ಷಗಳೂ ಬುದ್ಧಿವಂತ ಹಾಗೂ ವಿದ್ಯಾವಂತ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿಲ್ಲ. ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆಯಲ್ಲೂ ಬ್ರಾಹ್ಮಣರನ್ನು ನಿರ್ಲಕ್ಷಿಲಾಗುತ್ತಿದೆ. <br /> <br /> ಮೊದಲಿನಿಂದಲೂ ಬ್ರಾಹ್ಮಣರು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಆದರೆ ಬಿಜೆಪಿ ಪಕ್ಷವೂ ಇತ್ತೀಚೆಗೆ ಬ್ರಾಹ್ಮಣರನ್ನು ಕಡೆಗಣಿಸುತ್ತಿದೆ~ ಎಂದು ಅವರು ದೂರಿದರು.`ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಗುಣ ಹಾಗೂ ಅರ್ಹತೆಗಳನ್ನು ಪರಿಗಣಿಸದೇ ವಿಧಾನಸಭಾ ಚುನಾವಣೆಗಳಲ್ಲಿ ಸೋತ ಅಭ್ಯರ್ಥಿಗಳನ್ನು ವಿಧಾನ ಪರಿಷತ್ಗೆ ಆರಿಸುವ ಪರಿಪಾಠ ಹೆಚ್ಚಾಗುತ್ತಿದೆ. <br /> <br /> ಸಮಾಜದ ಅವಿಭಾಜ್ಯ ಅಂಗವಾಗಿರುವ ಬ್ರಾಹ್ಮಣರನ್ನು ರಾಜಕೀಯ ಪಕ್ಷಗಳು ಕಡೆಗಣಿಸುತ್ತಿರುವುದು ಸರಿಯಲ್ಲ. ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು~ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ರಾಜ್ಯದ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಬ್ರಾಹ್ಮಣ ಸಮಾಜವನ್ನು ಕಡೆಗಣಿಸುತ್ತಿವೆ~ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಆರೋಪಿಸಿದರು.<br /> <br /> ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಇತ್ತೀಚೆಗೆ ಯಾವ ರಾಜಕೀಯ ಪಕ್ಷಗಳೂ ಬುದ್ಧಿವಂತ ಹಾಗೂ ವಿದ್ಯಾವಂತ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿಲ್ಲ. ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆಯಲ್ಲೂ ಬ್ರಾಹ್ಮಣರನ್ನು ನಿರ್ಲಕ್ಷಿಲಾಗುತ್ತಿದೆ. <br /> <br /> ಮೊದಲಿನಿಂದಲೂ ಬ್ರಾಹ್ಮಣರು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಆದರೆ ಬಿಜೆಪಿ ಪಕ್ಷವೂ ಇತ್ತೀಚೆಗೆ ಬ್ರಾಹ್ಮಣರನ್ನು ಕಡೆಗಣಿಸುತ್ತಿದೆ~ ಎಂದು ಅವರು ದೂರಿದರು.`ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಗುಣ ಹಾಗೂ ಅರ್ಹತೆಗಳನ್ನು ಪರಿಗಣಿಸದೇ ವಿಧಾನಸಭಾ ಚುನಾವಣೆಗಳಲ್ಲಿ ಸೋತ ಅಭ್ಯರ್ಥಿಗಳನ್ನು ವಿಧಾನ ಪರಿಷತ್ಗೆ ಆರಿಸುವ ಪರಿಪಾಠ ಹೆಚ್ಚಾಗುತ್ತಿದೆ. <br /> <br /> ಸಮಾಜದ ಅವಿಭಾಜ್ಯ ಅಂಗವಾಗಿರುವ ಬ್ರಾಹ್ಮಣರನ್ನು ರಾಜಕೀಯ ಪಕ್ಷಗಳು ಕಡೆಗಣಿಸುತ್ತಿರುವುದು ಸರಿಯಲ್ಲ. ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು~ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>