‘ದೀಪಾವಳಿ ನಂತರ ವಾತಾವರಣದಲ್ಲಿ ಗಾಳಿಯ ಗುಣಮಟ್ಟವೂ ಕುಸಿದಿದೆ. ಪಟಾಕಿಯಿಂದ ಹೊರಹೊಮ್ಮುವ ರಾಸಾಯನಿಕ ಮಿಶ್ರಿತ ಹೊಗೆ ಗಾಳಿಯಲ್ಲಿ ಸೇರುತ್ತದೆ. ಇದರ ಉಸಿರಾಟದಿಂದ ಆಸ್ತಮಾ, ಗಂಭೀರ ಶ್ವಾಸಕೋಶ ಕಾಯಿಲೆ (ಸಿಒಪಿಡಿ), ರೈನಟಿಸ್ (ನೆಗಡಿ), ಅಲರ್ಜಿ ಸಮಸ್ಯೆಗಳಿಂದ ಬಳಲುವವರ ಸಂಖ್ಯೆ ಹೆಚ್ಚುತ್ತಿದೆ’ ಎನ್ನುತ್ತಾರೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಶ್ವಾಸಕೋಶ ರೋಗಗಳ ತಜ್ಞ ಡಾ.ಹಿರೇಣಪ್ಪ ಉದ್ನೂರ್.