ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು,‘ರಾಜ್ಯದಲ್ಲಿ 30 ಲಕ್ಷ ಅಂಗವಿಕಲರಿದ್ದಾರೆ. ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಪರಿಷತ್ನಲ್ಲಿ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡಬೇಕು. ಸರ್ಕಾರಿ ಸೇವೆಯಲ್ಲಿನ ಅಂಗವಿಕಲರಿಗೆ ಸುಪ್ರೀಂಕೋರ್ಟ್ನ ಆದೇಶದಂತೆ ಶೇ 3ರಷ್ಟು ಬಡ್ತಿ ಮೀಸಲಾತಿ ನೀಡಬೇಕು’ ಎಂದರು.