<p><strong>ಬೆಂಗಳೂರು: </strong>‘ಪರ್ಸಂಟೇಜ್ ಸರ್ಕಾರವನ್ನು ಕಿತ್ತೊಗೆಯಲು ಜನತೆ ನಮ್ಮ ಜತೆ ಕೈ ಜೋಡಿಸಬೇಕು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.</p>.<p>ಕಗ್ಗಲಿಪುರದ ವಿಕಾಸಪರ್ವ ಸಮಾವೇಶದಲ್ಲಿ ಅವರು ಮಾತನಾಡಿ, ‘ನಿಮ್ಮ ಆಶೀರ್ವಾದದಿಂದ ಭ್ರಷ್ಟ ವ್ಯವಸ್ಥೆ ಕಿತ್ತೊಗೆದು ಪಾರದರ್ಶಕ ಸರ್ಕಾರ ನೀಡುತ್ತೇನೆ’ ಎಂದರು.</p>.<p>ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ. ಆದರೆ, ರಾಜ್ಯ ಸಮಸ್ಯೆಗಳಿಗೆ ಪರಿಹಾರ ನೀಡುವ ನೀಲಿ ನಕಾಶೆ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು ಟೀಕಿಸಿದರು.</p>.<p>‘ರಾಷ್ಟ್ರೀಯ ಪಕ್ಷಗಳು ಹೈಕಮಾಂಡ್ಗೆ ರಾಜ್ಯದಿಂದ ಕೋಟ್ಯಂತರ ರುಪಾಯಿ ಕಳಿಸುತ್ತಿವೆ. ಅದು ಜನರ ತೆರಿಗೆ ಹಣ’ ಎಂದು ಆರೋಪಿಸಿದರು.</p>.<p>‘ಯಡಿಯೂರಪ್ಪ ಅವರಿಗೆ ಈಗ ಆಟೋ ಚಾಲಕರು ನೆನಪಾಗಿದ್ದಾರೆ. ನಾನು ಸಂವಾದ ಮಾಡಿದ ನಂತರ ಎಚ್ಚೆತ್ತುಕೊಂಡು ಸಂವಾದ ನಡೆಸಿ<br /> ದ್ದಾರೆ. ಅಧಿಕಾರಕ್ಕೆ ಬಂದರೆ ಮನೆಗಳನ್ನು ಕಟ್ಟಿಸಿ ಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ಆದರೆ, ನಾನು ಮುಖ್ಯಮಂತ್ರಿ ಆಗಿದ್ದಾಗ ಆ ಉದ್ದೇಶಕ್ಕಾಗಿಯೇ ಭೂಮಿ ಮತ್ತು ಹಣವನ್ನು ತೆಗೆದಿರಿಸಿದ್ದೆ. ನೀವು ಅಧಿಕಾರಕ್ಕೆ ಬಂದ ಮೇಲೆ ಭೂಮಿ ಮತ್ತು ಹಣವನ್ನು ಏನು ಮಾಡಿದಿರಿ’ ಎಂದು ಕುಮಾರಸ್ವಾಮಿ ಬಿಜೆಪಿಯನ್ನು ಪ್ರಶ್ನಿಸಿದರು.</p>.<p>‘ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡುತ್ತಿರುವ ದಕ್ಷಿಣಕನ್ನಡದ ಜನ ಮರಳಿ ರಾಜ್ಯಕ್ಕೆ ಬರಬೇಕು. ನಾನು ಮುಖ್ಯಮಂತ್ರಿಯಾದರೆ 50 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತೇನೆ. ಇಲ್ಲವಾದಲ್ಲಿ ಒಂದು ಕ್ಷಣ ವಿಧಾನಸೌಧದಲ್ಲಿ ಕೂರುವುದಿಲ್ಲ’ ಎಂದು ಅವರು ಹೇಳಿದರು.</p>.<p><strong>ನಮ್ಮದೇ ಸರ್ಕಾರ:</strong> ‘ನನ್ನ ಜೀವನದ ಕೊನೆ ಕಾಲದಲ್ಲಿ ನಮ್ಮದೇ (ಜೆಡಿಎಸ್) ಸರ್ಕಾರ ಬರಬೇಕೆಂಬ ಹುಚ್ಚಿದೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಭಾವುಕರಾಗಿ ನುಡಿದರು.</p>.<p>‘ಈ ಚುನಾವಣೆಯಲ್ಲಿ 115 ಸ್ಥಾನಗಳನ್ನು ಗೆದ್ದು ಸರ್ಕಾರವನ್ನು ರಚಿಸುತ್ತೇವೆ. ಈ ಬಾರಿ ಬಿಎಸ್ಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಅವರಿಗೆ 20 ಸ್ಥಾನಗಳನ್ನು ಬಿಟ್ಟುಕೊಟ್ಟಿದ್ದೇವೆ. ಕಾಂಗ್ರೆಸ್ ಮತ್ತು ಬಿಜೆಪಿ ಹೊರಗಿಟ್ಟು ಸರ್ಕಾರ ರಚಿಸಬೇಕು ಎಂಬ ಕಾರಣಕ್ಕೆ ಬಿಎಸ್ಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಇದರಿಂದ ನಮಗೆ ಸರಳ ಬಹುಮತ ಲಭಿಸುತ್ತದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಜೆಡಿಎಸ್ ಮುಗಿಸಬೇಕು ಎಂದು ರಾಹುಲ್ ಗಾಂಧಿಯವರನ್ನು ಕರೆದುಕೊಂಡು ರಾಜ್ಯವೆಲ್ಲ ಸುತ್ತಾಡುತ್ತಿದ್ದಾರೆ’ ಎಂದು ದೇವೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಪರ್ಸಂಟೇಜ್ ಸರ್ಕಾರವನ್ನು ಕಿತ್ತೊಗೆಯಲು ಜನತೆ ನಮ್ಮ ಜತೆ ಕೈ ಜೋಡಿಸಬೇಕು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.</p>.<p>ಕಗ್ಗಲಿಪುರದ ವಿಕಾಸಪರ್ವ ಸಮಾವೇಶದಲ್ಲಿ ಅವರು ಮಾತನಾಡಿ, ‘ನಿಮ್ಮ ಆಶೀರ್ವಾದದಿಂದ ಭ್ರಷ್ಟ ವ್ಯವಸ್ಥೆ ಕಿತ್ತೊಗೆದು ಪಾರದರ್ಶಕ ಸರ್ಕಾರ ನೀಡುತ್ತೇನೆ’ ಎಂದರು.</p>.<p>ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ. ಆದರೆ, ರಾಜ್ಯ ಸಮಸ್ಯೆಗಳಿಗೆ ಪರಿಹಾರ ನೀಡುವ ನೀಲಿ ನಕಾಶೆ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು ಟೀಕಿಸಿದರು.</p>.<p>‘ರಾಷ್ಟ್ರೀಯ ಪಕ್ಷಗಳು ಹೈಕಮಾಂಡ್ಗೆ ರಾಜ್ಯದಿಂದ ಕೋಟ್ಯಂತರ ರುಪಾಯಿ ಕಳಿಸುತ್ತಿವೆ. ಅದು ಜನರ ತೆರಿಗೆ ಹಣ’ ಎಂದು ಆರೋಪಿಸಿದರು.</p>.<p>‘ಯಡಿಯೂರಪ್ಪ ಅವರಿಗೆ ಈಗ ಆಟೋ ಚಾಲಕರು ನೆನಪಾಗಿದ್ದಾರೆ. ನಾನು ಸಂವಾದ ಮಾಡಿದ ನಂತರ ಎಚ್ಚೆತ್ತುಕೊಂಡು ಸಂವಾದ ನಡೆಸಿ<br /> ದ್ದಾರೆ. ಅಧಿಕಾರಕ್ಕೆ ಬಂದರೆ ಮನೆಗಳನ್ನು ಕಟ್ಟಿಸಿ ಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ಆದರೆ, ನಾನು ಮುಖ್ಯಮಂತ್ರಿ ಆಗಿದ್ದಾಗ ಆ ಉದ್ದೇಶಕ್ಕಾಗಿಯೇ ಭೂಮಿ ಮತ್ತು ಹಣವನ್ನು ತೆಗೆದಿರಿಸಿದ್ದೆ. ನೀವು ಅಧಿಕಾರಕ್ಕೆ ಬಂದ ಮೇಲೆ ಭೂಮಿ ಮತ್ತು ಹಣವನ್ನು ಏನು ಮಾಡಿದಿರಿ’ ಎಂದು ಕುಮಾರಸ್ವಾಮಿ ಬಿಜೆಪಿಯನ್ನು ಪ್ರಶ್ನಿಸಿದರು.</p>.<p>‘ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡುತ್ತಿರುವ ದಕ್ಷಿಣಕನ್ನಡದ ಜನ ಮರಳಿ ರಾಜ್ಯಕ್ಕೆ ಬರಬೇಕು. ನಾನು ಮುಖ್ಯಮಂತ್ರಿಯಾದರೆ 50 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತೇನೆ. ಇಲ್ಲವಾದಲ್ಲಿ ಒಂದು ಕ್ಷಣ ವಿಧಾನಸೌಧದಲ್ಲಿ ಕೂರುವುದಿಲ್ಲ’ ಎಂದು ಅವರು ಹೇಳಿದರು.</p>.<p><strong>ನಮ್ಮದೇ ಸರ್ಕಾರ:</strong> ‘ನನ್ನ ಜೀವನದ ಕೊನೆ ಕಾಲದಲ್ಲಿ ನಮ್ಮದೇ (ಜೆಡಿಎಸ್) ಸರ್ಕಾರ ಬರಬೇಕೆಂಬ ಹುಚ್ಚಿದೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಭಾವುಕರಾಗಿ ನುಡಿದರು.</p>.<p>‘ಈ ಚುನಾವಣೆಯಲ್ಲಿ 115 ಸ್ಥಾನಗಳನ್ನು ಗೆದ್ದು ಸರ್ಕಾರವನ್ನು ರಚಿಸುತ್ತೇವೆ. ಈ ಬಾರಿ ಬಿಎಸ್ಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಅವರಿಗೆ 20 ಸ್ಥಾನಗಳನ್ನು ಬಿಟ್ಟುಕೊಟ್ಟಿದ್ದೇವೆ. ಕಾಂಗ್ರೆಸ್ ಮತ್ತು ಬಿಜೆಪಿ ಹೊರಗಿಟ್ಟು ಸರ್ಕಾರ ರಚಿಸಬೇಕು ಎಂಬ ಕಾರಣಕ್ಕೆ ಬಿಎಸ್ಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಇದರಿಂದ ನಮಗೆ ಸರಳ ಬಹುಮತ ಲಭಿಸುತ್ತದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಜೆಡಿಎಸ್ ಮುಗಿಸಬೇಕು ಎಂದು ರಾಹುಲ್ ಗಾಂಧಿಯವರನ್ನು ಕರೆದುಕೊಂಡು ರಾಜ್ಯವೆಲ್ಲ ಸುತ್ತಾಡುತ್ತಿದ್ದಾರೆ’ ಎಂದು ದೇವೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>