ಬೆಂಗಳೂರು: ಸಿದ್ಧಉಡುಪು ಕಾರ್ಖಾನೆ ಮಾಲೀಕ ಚಂದ್ರಶೇಖರ್ ಸಾವಿನ ಬಗ್ಗೆ ಪುಲಿ ಕೇಶಿನಗರ ಠಾಣೆ ಎಸ್ಐ, ಇಬ್ಬರು ಕಾನ್ಸ್ಟೆಬಲ್ಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
`ವಂಚನೆ ಸಂಬಂಧ ಚಂದ್ರಶೇಖರ್ ಅವರನ್ನು ವಿಚಾರಣೆ ನಡೆಸುತ್ತಿದ್ದ ಪುಲಿಕೇಶಿನಗರ ಠಾಣೆಯ ಎಸ್ಐ ದಯಾನಂದ, ಕಾನ್ಸ್ಟೆಬಲ್ಗಳಾದ ಸುನೀಲ್ ಮತ್ತು ಸನಾವುಲ್ಲಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪ ಸಾಬೀತಾದರೆ ಸಿಬ್ಬಂದಿ ಹತ್ತು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ' ಎಂದು ಪೊಲೀಸರು ಹೇಳಿದ್ದಾರೆ.
`ಕಟ್ಟಡದಿಂದ ಕೆಳಗೆ ಬೀಳುವ ಮುನ್ನ ಚಂದ್ರಶೇಖರ್, ವಿಜಯ್ ಟ್ರೇಡರ್ಸ್ನ ಮಾಲೀಕ ವಿಜಯ್ಕುಮಾರ್ ಮತ್ತು ಅವರ ಸಹಚರರ ಜತೆ ಮಾತಿನ ಚಕಮಕಿ ನಡೆಸಿದ್ದರು. ಈ ವೇಳೆ ಮಧ್ಯೆ ಪ್ರವೇಶ ಮಾಡಿ ಅವರನ್ನು ಸಮಾಧಾನಪಡಿಸಿದ್ದರು. ಬಳಿಕ ಸ್ವಲ್ಪ ಸಮಯದಲ್ಲೇ ಚಂದ್ರಶೇಖರ್ ಕೆಳಗೆ ಬಿದ್ದು ಸಾವನ್ನಪ್ಪಿದ್ದರು.