<p><strong>ಬೆಂಗಳೂರು:</strong> ಮಹದೇವಪುರ ವರ್ತುಲ ರಸ್ತೆಯಲ್ಲಿ ಭಾನುವಾರ ರಾತ್ರಿ ದರೋಡೆಕೋರರು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ನೈಜೀರಿಯಾ ಮೂಲದ ಯುವಕರು ಪಾನಮತ್ತರಾಗಿ ಕಾನ್ಸ್ಟೆಬಲ್ಗೆ ಥಳಿಸಿದ್ದಾರೆ.<br /> <br /> ಮಹದೇವಪುರದ ಲೌರಿ ಸ್ಕೂಲ್ ಸಮೀಪ ರಾತ್ರಿ ಆರು ಮಂದಿ ದರೋಡೆಕೋರರು ಕ್ಯಾಂಟರ್ ವಾಹನವನ್ನು ಅಡ್ಡಗಟ್ಟಿ ಚಾಲಕ ಸತ್ಯನಾರಾಯಣ ಅವರ ಮೇಲೆ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದರು. ಈ ವೇಳೆ ಅದೇ ಮಾರ್ಗವಾಗಿ ಸಾಗಿ ಬಂದ ಇತರೆ ವಾಹನಗಳ ಚಾಲಕರು, ಆ ಘಟನೆಯ ಬಗ್ಗೆ ಸಮೀಪದಲ್ಲೇ ಚೀತಾ ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಮಹದೇವಪುರ ಠಾಣೆ ಹೆಡ್ ಕಾನ್ಸ್ಟೆಬಲ್ ಕುಮಾರ್ ಮತ್ತು ಕಾನ್ಸ್ಟೆಬಲ್ ಪ್ರಭಾಕರ್ ಅವರಿಗೆ ಮಾಹಿತಿ ನೀಡಿದ್ದಾರೆ.<br /> <br /> ಈ ವಿಷಯ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಹೋದ ಕುಮಾರ್ ಮತ್ತು ಪ್ರಭಾಕರ್ ದರೋಡೆಕೋರರನ್ನು ಹಿಡಿಯಲು ಮುಂದಾಗಿದ್ದಾರೆ. ಆಗ ದರೋಡೆಕೋರರು, ಅವರಿಬ್ಬರ ಮೇಲೂ ಮಚ್ಚು ಲಾಂಗ್ಗಳಿಂದ ಹಲ್ಲೆ ನಡೆಸಿ ಬೈಕ್ಗಳಲ್ಲಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಸಿಬ್ಬಂದಿ ಘಟನೆಯ ಬಗ್ಗೆ ಠಾಣೆಗೆ ಮಾಹಿತಿ ಕೊಟ್ಟಿದ್ದಾರೆ.<br /> <br /> ಆ ನಂತರ ಹೆಚ್ಚಿನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಕ್ಯಾಂಟರ್ ಚಾಲಕ ಸತ್ಯನಾರಾಯಣ ಅವರಿಂದ ಮೂರು ಸಾವಿರ ನಗದು ಮತ್ತು ಮೊಬೈಲ್ ದೋಚಿರುವ ದರೋಡೆಕೋರರು ಕೃತ್ಯಕ್ಕೆ ಬಳಸಿದ್ದ ಬೈಕ್ (ಕೆಎ-51, ವಿ-1501) ಒಂದನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆ. ಈ ಮಾಹಿತಿ ಆಧರಿಸಿ ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಕುಮಾರ್ ಅವರ ಎಡಗೈಗೆ ಮತ್ತು ಪ್ರಭಾಕರ್ ಅವರ ಮುಖಕ್ಕೆ ಪೆಟ್ಟಾಗಿದೆ. ಈ ಸಂಬಂಧ ದರೋಡೆ, ಕೊಲೆ ಯತ್ನ ಹಾಗೂ ಸರ್ಕಾರಿ ನೌಕರನ ಮೇಲೆ ಹಲ್ಲೆ ನಡೆಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಮಹದೇವಪುರ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.<br /> <br /> <strong>ಮತ್ತೊಂದು ಪ್ರಕರಣ:</strong> ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿ ನೈಜೀರಿಯಾ ಮೂಲದ ನಾಲ್ಕು ಮಂದಿ ಯುವಕರು ಬಾಣಸವಾಡಿ ಠಾಣೆ ಕಾನ್ಸ್ಟೆಬಲ್ ರಘು ಎಂಬುವರ ಮೇಲೆ ಬೆಲ್ಟ್ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕಮ್ಮನಹಳ್ಳಿಯ ಬಾರ್ ಒಂದರಲ್ಲಿ ರಾತ್ರಿ ಮದ್ಯಪಾನ ಮಾಡಿ ಹೊರಬಂದ ಆ ನಾಲ್ಕು ಮಂದಿ ರಸ್ತೆ ಬದಿಯಲ್ಲಿ ಜಗಳವಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ಬಾಣಸವಾಡಿ ಠಾಣೆಗೆ ದೂರು ನೀಡಿದರು. ಈ ದೂರು ಆಧರಿಸಿ ಚೀತಾ ವಾಹನದಲ್ಲಿ ಸ್ಥಳಕ್ಕೆ ಹೋದ ಕಾನ್ಸ್ಟೆಬಲ್ಗಳಾದ ರಘು ಮತ್ತು ದುಂಡಯ್ಯ ಹಿರೇಮಠ್, ಜಗಳ ಬಿಡಿಸಲು ಯತ್ನಿಸಿದ್ದಾರೆ. ಆಗ ಆ ಯುವಕರು ರಘು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.<br /> <br /> ರಘು ಅವರ ತಲೆಗೆ ಪೆಟ್ಟಾಗಿದ್ದು, ವೈದ್ಯರು ಐದು ಹೊಲಿಗೆ ಹಾಕಿದ್ದಾರೆ. ಘಟನೆ ಸಂಬಂಧ ಸರ್ಕಾರಿ ನೌಕರನ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಮ್ಯಾನ್ಯುಯಲ್ (26) ಎಂಬಾತನನ್ನು ಬಂಧಿಸಲಾಗಿದೆ.<br /> <br /> ಇತರೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಇಮ್ಯಾನ್ಯುಯಲ್ನ ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಆತ ವಿಚಾರಣೆಗೆ ಸಹಕರಿಸುತ್ತಿಲ್ಲ ಮತ್ತು ಇತರೆ ಆರೋಪಿಗಳ ಬಗ್ಗೆ ಮಾಹಿತಿ ನೀಡುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹದೇವಪುರ ವರ್ತುಲ ರಸ್ತೆಯಲ್ಲಿ ಭಾನುವಾರ ರಾತ್ರಿ ದರೋಡೆಕೋರರು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ನೈಜೀರಿಯಾ ಮೂಲದ ಯುವಕರು ಪಾನಮತ್ತರಾಗಿ ಕಾನ್ಸ್ಟೆಬಲ್ಗೆ ಥಳಿಸಿದ್ದಾರೆ.<br /> <br /> ಮಹದೇವಪುರದ ಲೌರಿ ಸ್ಕೂಲ್ ಸಮೀಪ ರಾತ್ರಿ ಆರು ಮಂದಿ ದರೋಡೆಕೋರರು ಕ್ಯಾಂಟರ್ ವಾಹನವನ್ನು ಅಡ್ಡಗಟ್ಟಿ ಚಾಲಕ ಸತ್ಯನಾರಾಯಣ ಅವರ ಮೇಲೆ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದರು. ಈ ವೇಳೆ ಅದೇ ಮಾರ್ಗವಾಗಿ ಸಾಗಿ ಬಂದ ಇತರೆ ವಾಹನಗಳ ಚಾಲಕರು, ಆ ಘಟನೆಯ ಬಗ್ಗೆ ಸಮೀಪದಲ್ಲೇ ಚೀತಾ ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಮಹದೇವಪುರ ಠಾಣೆ ಹೆಡ್ ಕಾನ್ಸ್ಟೆಬಲ್ ಕುಮಾರ್ ಮತ್ತು ಕಾನ್ಸ್ಟೆಬಲ್ ಪ್ರಭಾಕರ್ ಅವರಿಗೆ ಮಾಹಿತಿ ನೀಡಿದ್ದಾರೆ.<br /> <br /> ಈ ವಿಷಯ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಹೋದ ಕುಮಾರ್ ಮತ್ತು ಪ್ರಭಾಕರ್ ದರೋಡೆಕೋರರನ್ನು ಹಿಡಿಯಲು ಮುಂದಾಗಿದ್ದಾರೆ. ಆಗ ದರೋಡೆಕೋರರು, ಅವರಿಬ್ಬರ ಮೇಲೂ ಮಚ್ಚು ಲಾಂಗ್ಗಳಿಂದ ಹಲ್ಲೆ ನಡೆಸಿ ಬೈಕ್ಗಳಲ್ಲಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಸಿಬ್ಬಂದಿ ಘಟನೆಯ ಬಗ್ಗೆ ಠಾಣೆಗೆ ಮಾಹಿತಿ ಕೊಟ್ಟಿದ್ದಾರೆ.<br /> <br /> ಆ ನಂತರ ಹೆಚ್ಚಿನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಕ್ಯಾಂಟರ್ ಚಾಲಕ ಸತ್ಯನಾರಾಯಣ ಅವರಿಂದ ಮೂರು ಸಾವಿರ ನಗದು ಮತ್ತು ಮೊಬೈಲ್ ದೋಚಿರುವ ದರೋಡೆಕೋರರು ಕೃತ್ಯಕ್ಕೆ ಬಳಸಿದ್ದ ಬೈಕ್ (ಕೆಎ-51, ವಿ-1501) ಒಂದನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆ. ಈ ಮಾಹಿತಿ ಆಧರಿಸಿ ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಕುಮಾರ್ ಅವರ ಎಡಗೈಗೆ ಮತ್ತು ಪ್ರಭಾಕರ್ ಅವರ ಮುಖಕ್ಕೆ ಪೆಟ್ಟಾಗಿದೆ. ಈ ಸಂಬಂಧ ದರೋಡೆ, ಕೊಲೆ ಯತ್ನ ಹಾಗೂ ಸರ್ಕಾರಿ ನೌಕರನ ಮೇಲೆ ಹಲ್ಲೆ ನಡೆಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಮಹದೇವಪುರ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.<br /> <br /> <strong>ಮತ್ತೊಂದು ಪ್ರಕರಣ:</strong> ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿ ನೈಜೀರಿಯಾ ಮೂಲದ ನಾಲ್ಕು ಮಂದಿ ಯುವಕರು ಬಾಣಸವಾಡಿ ಠಾಣೆ ಕಾನ್ಸ್ಟೆಬಲ್ ರಘು ಎಂಬುವರ ಮೇಲೆ ಬೆಲ್ಟ್ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕಮ್ಮನಹಳ್ಳಿಯ ಬಾರ್ ಒಂದರಲ್ಲಿ ರಾತ್ರಿ ಮದ್ಯಪಾನ ಮಾಡಿ ಹೊರಬಂದ ಆ ನಾಲ್ಕು ಮಂದಿ ರಸ್ತೆ ಬದಿಯಲ್ಲಿ ಜಗಳವಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ಬಾಣಸವಾಡಿ ಠಾಣೆಗೆ ದೂರು ನೀಡಿದರು. ಈ ದೂರು ಆಧರಿಸಿ ಚೀತಾ ವಾಹನದಲ್ಲಿ ಸ್ಥಳಕ್ಕೆ ಹೋದ ಕಾನ್ಸ್ಟೆಬಲ್ಗಳಾದ ರಘು ಮತ್ತು ದುಂಡಯ್ಯ ಹಿರೇಮಠ್, ಜಗಳ ಬಿಡಿಸಲು ಯತ್ನಿಸಿದ್ದಾರೆ. ಆಗ ಆ ಯುವಕರು ರಘು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.<br /> <br /> ರಘು ಅವರ ತಲೆಗೆ ಪೆಟ್ಟಾಗಿದ್ದು, ವೈದ್ಯರು ಐದು ಹೊಲಿಗೆ ಹಾಕಿದ್ದಾರೆ. ಘಟನೆ ಸಂಬಂಧ ಸರ್ಕಾರಿ ನೌಕರನ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಮ್ಯಾನ್ಯುಯಲ್ (26) ಎಂಬಾತನನ್ನು ಬಂಧಿಸಲಾಗಿದೆ.<br /> <br /> ಇತರೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಇಮ್ಯಾನ್ಯುಯಲ್ನ ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಆತ ವಿಚಾರಣೆಗೆ ಸಹಕರಿಸುತ್ತಿಲ್ಲ ಮತ್ತು ಇತರೆ ಆರೋಪಿಗಳ ಬಗ್ಗೆ ಮಾಹಿತಿ ನೀಡುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>