<p><strong>ಬೆಂಗಳೂರು:</strong> `ಪ್ರಗತಿಯ ಜತೆಗೆ ಪ್ರಕೃತಿಯ ಸಮತೋಲನವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ' ಎಂದು ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಡಾ.ಎಸ್.ಎಸ್. ಪ್ರಭು ಹೇಳಿದರು.<br /> <br /> ಬೆಂಗಳೂರು ವಿಜ್ಞಾನ ವೇದಿಕೆಯು ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ಬುಧವಾರ ಆಯೋಜಿಸಿದ್ದ `36ನೇ ವಾರ್ಷಿಕ ವಿಜ್ಞಾನೋತ್ಸವ' ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.<br /> <br /> `ನಮ್ಮ ಇಂದಿನ ಯಶಸ್ಸು ಮುಂದಿನ ಸೋಲಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ಎಲ್ಲ ಸಂಪನ್ಮೂಲಗಳು ಬರಿದಾಗುತ್ತಿವೆ. ಒಮ್ಮೆ ಬರಿದಾದರೆ, ಅವುಗಳನ್ನು ಮತ್ತೆ ತುಂಬಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಇಂದು ಪ್ರಕೃತಿಯ ಸಮತೋಲನವನ್ನು ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆಯಿದೆ' ಎಂದರು.<br /> <br /> `ಜಗತ್ತಿನಲ್ಲಿ ನಡೆದ ಕೈಗಾರಿಕಾ ಕ್ರಾಂತಿ ಮತ್ತು ಅನೇಕ ಸ್ಪರ್ಧೆಗಳಿಂದ ವಿಶ್ವದ ಶಾಂತಿ ಕದಡುತ್ತಿದೆ. ಇಂದು ಕಂಪ್ಯೂಟರ್, ವೈಜ್ಞಾನಿಕ ಪ್ರಗತಿ, ನಿರ್ವಹಣಾ ಸಾಮರ್ಥ್ಯ ಎಲ್ಲವೂ ಹೆಚ್ಚಾಗಿದೆ. ಇದರಿಂದ ವಿನಾಕಾರಣ ಸ್ಪರ್ಧೆಯು ಬೆಳೆಯುತ್ತಿದೆ' ಎಂದು ಹೇಳಿದರು.<br /> <br /> `ತಂತ್ರಜ್ಞಾನವು ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸುವುದಿಲ್ಲ. ಆದರೆ, ನಮ್ಮ ತಿಳಿವಳಿಕೆಯಿಂದ ತಂತ್ರಜ್ಞಾನವನ್ನು ನಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು' ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಪ್ರಗತಿಯ ಜತೆಗೆ ಪ್ರಕೃತಿಯ ಸಮತೋಲನವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ' ಎಂದು ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಡಾ.ಎಸ್.ಎಸ್. ಪ್ರಭು ಹೇಳಿದರು.<br /> <br /> ಬೆಂಗಳೂರು ವಿಜ್ಞಾನ ವೇದಿಕೆಯು ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ಬುಧವಾರ ಆಯೋಜಿಸಿದ್ದ `36ನೇ ವಾರ್ಷಿಕ ವಿಜ್ಞಾನೋತ್ಸವ' ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.<br /> <br /> `ನಮ್ಮ ಇಂದಿನ ಯಶಸ್ಸು ಮುಂದಿನ ಸೋಲಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ಎಲ್ಲ ಸಂಪನ್ಮೂಲಗಳು ಬರಿದಾಗುತ್ತಿವೆ. ಒಮ್ಮೆ ಬರಿದಾದರೆ, ಅವುಗಳನ್ನು ಮತ್ತೆ ತುಂಬಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಇಂದು ಪ್ರಕೃತಿಯ ಸಮತೋಲನವನ್ನು ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆಯಿದೆ' ಎಂದರು.<br /> <br /> `ಜಗತ್ತಿನಲ್ಲಿ ನಡೆದ ಕೈಗಾರಿಕಾ ಕ್ರಾಂತಿ ಮತ್ತು ಅನೇಕ ಸ್ಪರ್ಧೆಗಳಿಂದ ವಿಶ್ವದ ಶಾಂತಿ ಕದಡುತ್ತಿದೆ. ಇಂದು ಕಂಪ್ಯೂಟರ್, ವೈಜ್ಞಾನಿಕ ಪ್ರಗತಿ, ನಿರ್ವಹಣಾ ಸಾಮರ್ಥ್ಯ ಎಲ್ಲವೂ ಹೆಚ್ಚಾಗಿದೆ. ಇದರಿಂದ ವಿನಾಕಾರಣ ಸ್ಪರ್ಧೆಯು ಬೆಳೆಯುತ್ತಿದೆ' ಎಂದು ಹೇಳಿದರು.<br /> <br /> `ತಂತ್ರಜ್ಞಾನವು ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸುವುದಿಲ್ಲ. ಆದರೆ, ನಮ್ಮ ತಿಳಿವಳಿಕೆಯಿಂದ ತಂತ್ರಜ್ಞಾನವನ್ನು ನಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು' ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>