ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ‘ಪ್ರಜಾವಾಣಿ’ ಸಂಘಟಿಸಿರುವ ಕ್ವಿಜ್ ಚಾಂಪಿಯನ್ಷಿಪ್ನ ಫೈನಲ್ ಸ್ಪರ್ಧೆ ಶನಿವಾರ ನಡೆಯಲಿದೆ. ಬೆಂಗಳೂರಿನ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಮಧ್ಯಾಹ್ನ 2ಕ್ಕೆ ಫೈನಲ್ ಸ್ಪರ್ಧೆ ನಡೆಯಲಿದೆ. ಅದಕ್ಕೂ ಮುನ್ನ ಬೆಳಿಗ್ಗೆ 10ಕ್ಕೆ ಬೆಂಗಳೂರು ವಲಯಮಟ್ಟದ ಸ್ಪರ್ಧೆ ನಡೆಯಲಿದೆ. ಅದರಲ್ಲಿ ಮೊದಲ ಸ್ಥಾನ ಗಳಿಸುವ ತಂಡ ಫೈನಲ್ ಪ್ರವೇಶಿಸಲಿದೆ.
ಬೆಳಿಗ್ಗೆ ಸ್ಪರ್ಧೆಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಬಿ. ತಿಮ್ಮೇಗೌಡ ಚಾಲನೆ ನೀಡಲಿದ್ದಾರೆ. ವಿಜೇತರಿಗೆ ಹಿರಿಯ ಹಾಕಿಪಟು ಅರ್ಜುನ್ ಹಾಲಪ್ಪ ಹಾಗೂ ಚಿತ್ರನಟ ಚೇತನ್ ಪ್ರಶಸ್ತಿ ವಿತರಿಸಲಿದ್ದಾರೆ.